Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಡಂಚಿನಲ್ಲಿ ಸೆರೆಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಲು ಚಿಂತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಕಾಡಂಚಿನಲ್ಲಿ ಸೆರೆಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಲು ಚಿಂತನೆ

Chamarajanagar

ಕಾಡಂಚಿನಲ್ಲಿ ಸೆರೆಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಲು ಚಿಂತನೆ

Public TV
Last updated: December 25, 2019 12:00 pm
Public TV
Share
2 Min Read
cng tiger
SHARE

ಚಾಮರಾಜನಗರ: ಸುರಕ್ಷಿತ ವಾಸ ಸ್ಥಾನ ಅರಸಿ ನಾಗರಹೊಳೆ ಕಾಡಿನಿಂದ ಸುಮಾರು 80 ಕಿ.ಮೀ ದೂರಕ್ಕೆ ವಲಸೆ ಬಂದು, ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುವ ಮೂಲಕ 16 ಹಸು ಹಾಗೂ ಇಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿ, ಸೆರೆ ಸಿಕ್ಕಿದ್ದ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಸೆರೆಸಿಕ್ಕಿರುವ ಹುಲಿ ಆರೋಗ್ಯದಿಂದ ಇರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮಹತ್ವದ ನಿಲುವು ತೆಗೆದುಕೊಂಡಿದ್ದು, ಶೀಘ್ರದಲ್ಲೇ ಹಂಪಿ ಮೃಗಾಲಯಕ್ಕೆ ಹುಲಿಯನ್ನು ಸ್ಥಳಾಂತರಿಸುವ ಸಾಧ್ಯತೆ ಇದೆ.

cng tiger 1

ರಾಜ್ಯದಲ್ಲಿ ಮೈಸೂರು ಮೃಗಾಲಯ ಸೇರಿದಂತೆ 9 ಮೃಗಾಲಯಗಳಿದ್ದು, ಬಹುತೇಕ ಎಲ್ಲಾ ಮೃಗಾಲಯಗಳಲ್ಲೂ ಇರುವ ಹುಲಿಗಳು ಒಂದೇ ರಕ್ತದ ಗುಂಪಿಗೆ ಸೇರಿವೆ. ಮೃಗಾಲಯಗಳಲ್ಲೇ ಜನಿಸಿರುವ ಹುಲಿಗಳನ್ನು ಬೇರೆ ಬೇರೆ ಮೃಗಾಲಯಗಳಿಗೆ ಸ್ಥಳಾಂತರ ಮಾಡುವ ಪದ್ಧತಿ ಮೊದಲಿನಿಂದಲೂ ಇರುವುದರಿಂದ ಸಾಮಾನ್ಯವಾಗಿ ಎಲ್ಲಾ ಮೃಗಾಲಯಗಳಲ್ಲಿರುವ ಹುಲಿಗಳು ರಕ್ತ ಸಂಬಂಧಿಗಳೇ ಆಗಿವೆ.

ಈ ಹಿನ್ನೆಲೆಯಲ್ಲಿ ಹೊಸ ರಕ್ತದ ಹುಲಿಗಳ ಅವಶ್ಯಕತೆ ಮೃಗಾಲಯಕ್ಕೆ ಇರುವುದರಿಂದ, ಬಂಡೀಪುರದಲ್ಲಿ ಸೆರೆ ಸಿಕ್ಕಿದ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಮೈಸೂರು ಅಥವಾ ಹಂಪಿ ಮೃಗಾಲಯದಲ್ಲಿ ಈ ಹುಲಿಗೆ ಜೋಡಿಯಾಗಿ ಹೆಣ್ಣು ಹುಲಿಯೊಂದನ್ನು ಬಿಡಲು ಉದ್ದೇಶಿಸಲಾಗಿದೆ.

cng tiger 3

ಆರೋಗ್ಯವಂತ ಹುಲಿ:
ಬಂಡೀಪುರದ ಕಾಡಂಚಿನ ಗ್ರಾಮಗಳಾದ ಚೌಡಳ್ಳಿ, ಹುಂಡಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉಪಟಳ ನೀಡಿ ಭಯದ ವಾತಾವರಣ ಸೃಷ್ಟಿಸಿದ್ದ ಹುಲಿ ಇಬ್ಬರ ಮೇಲೆರಗಿ ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿ ಅ. 13ರಂದು ಮಧ್ಯಾಹ್ನ ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ದೇಶದ ಇತಿಹಾಸದಲ್ಲೇ ಅರಣ್ಯ ಪ್ರದೇಶದಲ್ಲಿ ಸೂಕ್ಷ್ಮವಾಗಿ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಸೆರೆ ಸಿಕ್ಕಿದ ಹುಲಿ ಕೇವಲ 7 ವರ್ಷದ್ದಾಗಿದ್ದು, ಆರೋಗ್ಯದಿಂದಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಮೃಗಾಲಯದ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ಆರೈಕೆ ಮಾಡಲಾಗುತ್ತಿತ್ತು.

cng tiger 2

ಇದೀಗ ಸೆರೆ ಸಿಕ್ಕಿರುವ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲು ಕಳೆದ ವಾರವಷ್ಟೆ ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ವಿವಿಧೆಡೆ ಸೆರೆ ಸಿಕ್ಕಿರುವ ಹುಲಿಗಳನ್ನು ಮೃಗಾಲಯದಲ್ಲಿ ಪ್ರವಾಸಿಗರ ವೀಕ್ಷಣೆಗೆ ಬಳಸಿಕೊಳ್ಳುವುದಿಲ್ಲ. ಅರಣ್ಯದಲ್ಲೇ ಹುಟ್ಟಿ ಬೆಳೆದಿರುವ ಹುಲಿಗಳು ಹೆಚ್ಚು ಶಕ್ತಿಯುತವಾಗಿದ್ದು, ಬೇಟೆಯಾಡಲು ತೀವ್ರ ಕಸರತ್ತು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಸೆರೆ ಹಿಡಿದು ತರುವ ಹುಲಿಗಳನ್ನು ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಇದರಿಂದಾಗಿ ಎಲ್ಲಾ ಮೃಗಾಲಯಗಳಲ್ಲೂ ಇರುವ ಹುಲಿಗಳು ಒಂದೇ ಕುಟುಂಬದಲ್ಲಿ ಜನಿಸಿದ ಹುಲಿಗಳೇ ಆಗಿರುತ್ತವೆ. ಇದನ್ನು ಮನಗಂಡು ಹೊಸ ರಕ್ತದ ಹುಲಿಗಳ ಜನನಕ್ಕೆ ನಾಂದಿ ಹಾಡಲು ಕ್ರಮ ಕೈಗೊಳ್ಳಲಾಗಿದೆ.

ಹಿಂದೆಯೂ ಕೂಡ ತಳಿ ಅಭಿವೃದ್ಧಿಗೆ ಹುಲಿಯ ಬಳಕೆ:
ತಳಿ ಅಭಿವೃದ್ಧಿಗಾಗಿ ಕಾಡಿನಿಂದ ಸೆರೆ ಹಿಡಿದು ತಂದ ಹುಲಿ ಬಳಸಿಕೊಳ್ಳುತ್ತಿರುವುದು ಇದು ಎರಡನೇ ಬಾರಿ. ಸುಮಾರು 20 ವರ್ಷಗಳ ಹಿಂದೆ ನಾಗರಹೊಳೆ ಅರಣ್ಯದ ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡಿತ್ತಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಈ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲಾಗಿತ್ತು. ಬಹು ವರ್ಷಗಳ ನಂತರ ಇದೀಗ ವಲಸೆ ಬಂದು ಸೆರೆ ಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಬಳಸಿಕೊಳ್ಳುತ್ತಿದ್ದಾರೆ.

TAGGED:Chamarajanagaraforest departmentGenetic DevelopmentofficersPublic TVtigerಅಧಿಕಾರಿಗಳುಅರಣ್ಯ ಇಲಾಖೆಚಾಮರಾಜನಗರತಳಿ ಅಭಿವೃದ್ಧಿಪಬ್ಲಿಕ್ ಟಿವಿಹುಲಿ
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

Vidhana Soudha
Bengaluru City

ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ; ಸಂಪುಟ ಒಪ್ಪಿಗೆ

Public TV
By Public TV
21 minutes ago
ICC T20 World Cup
Cricket

ಭಾರತಕ್ಕೆ ಬಾಂಗ್ಲಾ ತಂಡ ಹೋಗಲ್ಲ – ಐಸಿಸಿಗೆ ಬಾಂಗ್ಲಾ ಉತ್ತರ

Public TV
By Public TV
36 minutes ago
Andhra Pradesh Wife Kills Husband And Watches Porn Video
Crime

ಲವ್ವರ್ ಜೊತೆ ಸೇರಿ ಪತಿಯ ಹತ್ಯೆ – ಶವದ ಪಕ್ಕದಲ್ಲೇ ಪೋರ್ನ್ ವೀಡಿಯೋ ವೀಕ್ಷಿಸುತ್ತಾ ರಾತ್ರಿ ಕಳೆದ ಪತ್ನಿ

Public TV
By Public TV
40 minutes ago
jammu kashmir 10 soldiers killed
Latest

ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; 10 ಯೋಧರು ಹುತಾತ್ಮ

Public TV
By Public TV
51 minutes ago
tree karwar
Latest

ಕಾರವಾರ| ಅರಣ್ಯ ಇಲಾಖೆ ಅಧಿಕಾರಿಗಳಿಂದಲೇ ಮರಕ್ಕೆ ಕೊಡಲಿ ಏಟು

Public TV
By Public TV
1 hour ago
Lonar Lake
Court

ವಿಶ್ವ ಪ್ರಸಿದ್ಧ ಮಹಾರಾಷ್ಟ್ರದ ಲೋನಾರ್‌ ಸರೋವರದಲ್ಲಿ ನೀರಿನ ಮಟ್ಟ ದಿಢೀರ್‌ 20 ಅಡಿ ಏರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?