Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಡಂಚಿನಲ್ಲಿ ಸೆರೆಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಲು ಚಿಂತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಕಾಡಂಚಿನಲ್ಲಿ ಸೆರೆಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಲು ಚಿಂತನೆ

Chamarajanagar

ಕಾಡಂಚಿನಲ್ಲಿ ಸೆರೆಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಲು ಚಿಂತನೆ

Public TV
Last updated: December 25, 2019 12:00 pm
Public TV
Share
2 Min Read
cng tiger
SHARE

ಚಾಮರಾಜನಗರ: ಸುರಕ್ಷಿತ ವಾಸ ಸ್ಥಾನ ಅರಸಿ ನಾಗರಹೊಳೆ ಕಾಡಿನಿಂದ ಸುಮಾರು 80 ಕಿ.ಮೀ ದೂರಕ್ಕೆ ವಲಸೆ ಬಂದು, ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುವ ಮೂಲಕ 16 ಹಸು ಹಾಗೂ ಇಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿ, ಸೆರೆ ಸಿಕ್ಕಿದ್ದ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಸೆರೆಸಿಕ್ಕಿರುವ ಹುಲಿ ಆರೋಗ್ಯದಿಂದ ಇರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮಹತ್ವದ ನಿಲುವು ತೆಗೆದುಕೊಂಡಿದ್ದು, ಶೀಘ್ರದಲ್ಲೇ ಹಂಪಿ ಮೃಗಾಲಯಕ್ಕೆ ಹುಲಿಯನ್ನು ಸ್ಥಳಾಂತರಿಸುವ ಸಾಧ್ಯತೆ ಇದೆ.

cng tiger 1

ರಾಜ್ಯದಲ್ಲಿ ಮೈಸೂರು ಮೃಗಾಲಯ ಸೇರಿದಂತೆ 9 ಮೃಗಾಲಯಗಳಿದ್ದು, ಬಹುತೇಕ ಎಲ್ಲಾ ಮೃಗಾಲಯಗಳಲ್ಲೂ ಇರುವ ಹುಲಿಗಳು ಒಂದೇ ರಕ್ತದ ಗುಂಪಿಗೆ ಸೇರಿವೆ. ಮೃಗಾಲಯಗಳಲ್ಲೇ ಜನಿಸಿರುವ ಹುಲಿಗಳನ್ನು ಬೇರೆ ಬೇರೆ ಮೃಗಾಲಯಗಳಿಗೆ ಸ್ಥಳಾಂತರ ಮಾಡುವ ಪದ್ಧತಿ ಮೊದಲಿನಿಂದಲೂ ಇರುವುದರಿಂದ ಸಾಮಾನ್ಯವಾಗಿ ಎಲ್ಲಾ ಮೃಗಾಲಯಗಳಲ್ಲಿರುವ ಹುಲಿಗಳು ರಕ್ತ ಸಂಬಂಧಿಗಳೇ ಆಗಿವೆ.

ಈ ಹಿನ್ನೆಲೆಯಲ್ಲಿ ಹೊಸ ರಕ್ತದ ಹುಲಿಗಳ ಅವಶ್ಯಕತೆ ಮೃಗಾಲಯಕ್ಕೆ ಇರುವುದರಿಂದ, ಬಂಡೀಪುರದಲ್ಲಿ ಸೆರೆ ಸಿಕ್ಕಿದ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ಮೈಸೂರು ಅಥವಾ ಹಂಪಿ ಮೃಗಾಲಯದಲ್ಲಿ ಈ ಹುಲಿಗೆ ಜೋಡಿಯಾಗಿ ಹೆಣ್ಣು ಹುಲಿಯೊಂದನ್ನು ಬಿಡಲು ಉದ್ದೇಶಿಸಲಾಗಿದೆ.

cng tiger 3

ಆರೋಗ್ಯವಂತ ಹುಲಿ:
ಬಂಡೀಪುರದ ಕಾಡಂಚಿನ ಗ್ರಾಮಗಳಾದ ಚೌಡಳ್ಳಿ, ಹುಂಡಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉಪಟಳ ನೀಡಿ ಭಯದ ವಾತಾವರಣ ಸೃಷ್ಟಿಸಿದ್ದ ಹುಲಿ ಇಬ್ಬರ ಮೇಲೆರಗಿ ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿ ಅ. 13ರಂದು ಮಧ್ಯಾಹ್ನ ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ದೇಶದ ಇತಿಹಾಸದಲ್ಲೇ ಅರಣ್ಯ ಪ್ರದೇಶದಲ್ಲಿ ಸೂಕ್ಷ್ಮವಾಗಿ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಸೆರೆ ಸಿಕ್ಕಿದ ಹುಲಿ ಕೇವಲ 7 ವರ್ಷದ್ದಾಗಿದ್ದು, ಆರೋಗ್ಯದಿಂದಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಮೃಗಾಲಯದ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಿ ಆರೈಕೆ ಮಾಡಲಾಗುತ್ತಿತ್ತು.

cng tiger 2

ಇದೀಗ ಸೆರೆ ಸಿಕ್ಕಿರುವ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲು ಕಳೆದ ವಾರವಷ್ಟೆ ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ವಿವಿಧೆಡೆ ಸೆರೆ ಸಿಕ್ಕಿರುವ ಹುಲಿಗಳನ್ನು ಮೃಗಾಲಯದಲ್ಲಿ ಪ್ರವಾಸಿಗರ ವೀಕ್ಷಣೆಗೆ ಬಳಸಿಕೊಳ್ಳುವುದಿಲ್ಲ. ಅರಣ್ಯದಲ್ಲೇ ಹುಟ್ಟಿ ಬೆಳೆದಿರುವ ಹುಲಿಗಳು ಹೆಚ್ಚು ಶಕ್ತಿಯುತವಾಗಿದ್ದು, ಬೇಟೆಯಾಡಲು ತೀವ್ರ ಕಸರತ್ತು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಸೆರೆ ಹಿಡಿದು ತರುವ ಹುಲಿಗಳನ್ನು ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಇದರಿಂದಾಗಿ ಎಲ್ಲಾ ಮೃಗಾಲಯಗಳಲ್ಲೂ ಇರುವ ಹುಲಿಗಳು ಒಂದೇ ಕುಟುಂಬದಲ್ಲಿ ಜನಿಸಿದ ಹುಲಿಗಳೇ ಆಗಿರುತ್ತವೆ. ಇದನ್ನು ಮನಗಂಡು ಹೊಸ ರಕ್ತದ ಹುಲಿಗಳ ಜನನಕ್ಕೆ ನಾಂದಿ ಹಾಡಲು ಕ್ರಮ ಕೈಗೊಳ್ಳಲಾಗಿದೆ.

ಹಿಂದೆಯೂ ಕೂಡ ತಳಿ ಅಭಿವೃದ್ಧಿಗೆ ಹುಲಿಯ ಬಳಕೆ:
ತಳಿ ಅಭಿವೃದ್ಧಿಗಾಗಿ ಕಾಡಿನಿಂದ ಸೆರೆ ಹಿಡಿದು ತಂದ ಹುಲಿ ಬಳಸಿಕೊಳ್ಳುತ್ತಿರುವುದು ಇದು ಎರಡನೇ ಬಾರಿ. ಸುಮಾರು 20 ವರ್ಷಗಳ ಹಿಂದೆ ನಾಗರಹೊಳೆ ಅರಣ್ಯದ ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡಿತ್ತಿದ್ದ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಈ ಹುಲಿಯನ್ನು ತಳಿ ಅಭಿವೃದ್ಧಿಗೆ ಬಳಸಿಕೊಳ್ಳಲಾಗಿತ್ತು. ಬಹು ವರ್ಷಗಳ ನಂತರ ಇದೀಗ ವಲಸೆ ಬಂದು ಸೆರೆ ಸಿಕ್ಕ ಹುಲಿಯನ್ನು ತಳಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಬಳಸಿಕೊಳ್ಳುತ್ತಿದ್ದಾರೆ.

TAGGED:Chamarajanagaraforest departmentGenetic DevelopmentofficersPublic TVtigerಅಧಿಕಾರಿಗಳುಅರಣ್ಯ ಇಲಾಖೆಚಾಮರಾಜನಗರತಳಿ ಅಭಿವೃದ್ಧಿಪಬ್ಲಿಕ್ ಟಿವಿಹುಲಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
3 seconds ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
9 seconds ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
22 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
25 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
25 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?