ನಿತ್ರಾಣವಾಗಿ ಬಿದ್ದಿದ್ದ ಕಡವೆಗೆ ಚಿಕಿತ್ಸೆ ನೀಡಿದ ಅರಣ್ಯಾಧಿಕಾರಿಗಳು

Public TV
0 Min Read
ckm kadave

ಚಿಕ್ಕಮಗಳೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ನೀರು ಸಿಗದೆ ನಿತ್ರಾಣಗೊಂಡು ಬಿದ್ದಿದ್ದ ಕಡವೆಗೆ ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿ, ತಮ್ಮ ವಾಹನದಲ್ಲೇ ಕಾಡಿಗೆ ಬಿಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಬಂಟ್ಲು ಗ್ರಾಮದಲ್ಲಿ ನಡೆದಿದೆ.

ಭದ್ರಾ ಅಭಯಾರಣ್ಯದಿಂದ ಆಹಾರ ಹುಡುಕುತ್ತಾ ಗ್ರಾಮದ ಸಚಿನ್ ಎಂಬವರ ತೋಟಕ್ಕೆ ಬಂದಿದ್ದ ಕಡವೆ ಅಲ್ಲೇ ಸುಸ್ತಾಗಿ ಬಿದ್ದಿತ್ತು. ತೋಟಕ್ಕೆ ಬಂದ ಸಚಿನ್ ಕಡವೆಯನ್ನ ಕಂಡು ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ತಣಿಗೆಬೈಲು ಅರಣ್ಯಾಧಿಕಾರಿ ಉಲ್ಲಾಸ್ ಹಾಗೂ ಸಿಬ್ಬಂದಿಗಳು ಕಡವೆಗೆ ಚಿಕಿತ್ಸೆ ನೀಡಿ, ನೀರು ಕುಡಿಸಿ ತಮ್ಮ ಕಾರಿನಲ್ಲಿ ತೆಗೆದುಕೊಂಡು ಹೋಗಿ ಕಾಡಿಗೆ ಬಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *