ಹುಲಿ, ಆನೆ ನಂತ್ರ ಸೆರೆಯಾದ ಚಿರತೆ

Public TV
1 Min Read
cng cheetah

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಯ ಕಾಡಂಚಿನ ಗ್ರಾಮದಲ್ಲಿ ನರಹಂತಕ ಹುಲಿ, ಆನೆ ನಂತರ ಇದೀಗ ಚಿರತೆ ಸೆರೆಯಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕಳೆದೊಂದು ತಿಂಗಳಿಂದ ಬನ್ನಿತಾಳಪುರದ ಜಮೀನಿನಲ್ಲಿ ಚಿರತೆ ಹೆಜ್ಜೆಗಳು ಕಂಡು ಬಂದಿತ್ತು. ಆಗ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

cng chita sere 4

ಅರಣ್ಯ ಇಲಾಖೆ ಬೋನ್ ಕೂಡ ಇಟ್ಟಿತ್ತು. ಇದೀಗ ಚಿರತೆ ಸೆರೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಚಿರತೆ ಇರುವ ಭಯದಿಂದ ಜಮೀನಿಗೆ ಹೋಗಲು ಕೂಡ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಚಿರತೆ ಸೆರೆ ಬೆನ್ನಲ್ಲೇ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಗುರುವಾರ ಬಂಡೀಪುರ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಸೃಷ್ಟಿಸಿದ್ದ ಪುಂಡಾನೆಯನ್ನು ಕೊನೆಗೂ ಬನ್ನಿತಾಳಪುರ ಸಮೀಪ ಸೆರೆ ಹಿಡಿಯಲಾಗಿತ್ತು. ಪುಂಡಾನೆಯನ್ನು ಸೆರೆ ಹಿಡಿದು ಶಿವಮೊಗ್ಗ ಜಿಲ್ಲೆ ಸಕ್ರೆಬೈಲು ಆನೆ ಶಿಬಿರಕ್ಕೆ ರವಾನಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *