ನವದೆಹಲಿ: ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ (Former Chief Minister) ಕಿರಣ್ ಕುಮಾರ್ ರೆಡ್ಡಿ (Kiran Kumar Reddy) ಅವರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಯಾಗಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದ ಕಿರಣ್ ಕುಮಾರ್ ರೆಡ್ಡಿ ಮಾರ್ಚ್ 12 ರಂದು ಕಾಂಗ್ರೆಸ್ ತೊರೆದಿದ್ದರು. ಅವರು ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಇದೀಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ಜೆಡಿಎಸ್ ಪತ್ರ
- Advertisement 2
- Advertisement 3
ಆಂಧ್ರಪ್ರದೇಶದ ವಿಭಜನೆಯನ್ನು ವಿರೋಧಿಸಿದ್ದ ಕಿರಣ್ ಕುಮಾರ್ 2014ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಅನ್ನು ತೊರೆದಿದ್ದರು. ಬಳಿಕ ‘ಕಿರಣ್ ಜೈ ಸಮೈಕ್ಯಾ ಆಂಧ್ರ’ ಪಕ್ಷವನ್ನು ಕಟ್ಟಿದ್ದರು. ಆದರೆ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಅಗತ್ಯ ಸ್ಥಾನಗಳನ್ನು ಗಳಿಸಲು ಸಾಧ್ಯವಾಗಿರಲಿಲ್ಲ. ಬಳಿಕ 2018ರಲ್ಲಿ ಮತ್ತೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.
- Advertisement 4
ಕಳೆದ ತಿಂಗಳು ಕಿರಣ್ ಕುಮಾರ್ ಕಾಂಗ್ರೆಸ್ ಪಕ್ಷದ ಬಗ್ಗೆ ನಿರಾಶೆ ಹಾಗೂ ಅಪನಂಬಿಕೆ ವ್ಯಕ್ತಪಡಿಸಿ ಪಕ್ಷವನ್ನು ತೊರೆದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಪ್ರಹ್ಲಾದ್ ಜೋಶಿ ಕಿರಣ್ ಕುಮಾರ್ ಅವರನ್ನು ಪಕ್ಷಕ್ಕೆ ಸಂತೋಷದಿAದ ಸ್ವಾಗತಿಸಿದ್ದಾರೆ. ಆಂಧ್ರದ ಮಾಜಿ ಮುಖ್ಯಮಂತ್ರಿ ಪಕ್ಷಕ್ಕೆ ಸೇರಿರುವುದು ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಶಕ್ತಿಯಾಗಿದೆ ಎಂದು ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಕಬ್ಬಿಣದ ಕಡಲೆಯಾದ ಅಥಣಿ ಕ್ಷೇತ್ರ