ರಾಮನಗರ: ದೇಶದಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಆರ್ಎಸ್ಎಸ್ ಕಾರ್ಯಕರ್ತರನ್ನು ಸಿಂಡಿಕೇಟ್ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ಎಸ್ಎಸ್ ವಿರುದ್ಧ ಮತ್ತೆ ಗುಡುಗಿದ ಅವರು, ಯಾವುದೇ ಕೆಲಸವಾಗಬೇಕು ಅಂದ್ರೆ 1 ರಿಂದ 2 ಲಕ್ಷ ಡಿಮಾಂಡ್ ಮಾಡಿಕೊಂಡು ಕೂತಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ
40 ವರ್ಷದ ಆರ್ಎಸ್ಎಸ್ ಬೇರೆ ಈಗಿನ ಆರ್ಎಸ್ಎಸ್ ಬೇರೆ. ವಿಜಯದಶಮಿ ದಿನ ಭಾಗವತ್ ನವರು ಹೇಳಿಕೆ ಕೊಟ್ಟಿದ್ದಾರೆ. ದೇಶ ಒಡೆಯುವ ಇದು, ಇವರಿಗೆ ನಾವು ಗುತ್ತಿಗೆ ಕೊಟ್ಟಿದ್ದೀವಾ. ಎಲ್ಲಾ ಹಿಂದೂ ದೇವಾಲಯಗಳನ್ನ ಇವರ ಸುಪರ್ದಿಗೆ ಕೊಡಬೇಕಂತೆ, ಇವರ ಅಕೌಂಟ್ ಎಲ್ಲಿಟ್ಟಿದ್ದಾರೆ. 1989 – 1991 ರವರೆಗೆ ಅಡ್ವಾನಿಯವರು ರಥಯಾತ್ರೆ ಮಾಡಿದ್ರಲ್ಲ. ಇಟ್ಟಿಗೆ, ಹಣ ಸಂಗ್ರಹ ಮಾಡಿದ್ರಲ್ಲ. ಅದರ ಬಗ್ಗೆ ಮಾಹಿತಿ ಎಲ್ಲಿದೆ, ಹಣ ಎಷ್ಟು, ಬಡ್ಡಿ ಎಷ್ಟು, ಎಲ್ಲಿದೆ ಆ ಹಣ . ಇವಾಗಲೂ ಸಹ ಸಂಗ್ರಹ ಮಾಡಿದ್ದಾರೆ, ಅದರ ಲೆಕ್ಕ ಎಲ್ಲಿದೆ ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ಟ್ವೀಟ್ ವಾರ್
ರಾಮಮಂದಿರ ನಿರ್ಮಾಣದ ಹಣದ ವಿಚಾರದಲ್ಲಿ ಶೇ.200 ಲೋಪ ಆಗಿದೆ. ರಾಮನ ಹೆಸರಿನಲ್ಲಿ ಆಗಿರುವ ದುರುಪಯೋಗದ ಬಗ್ಗೆ ಹೇಳಿದ್ದೇನೆ. ಅವರು ಹೇಳಬಹುದು ನೀವ್ಯಾರು ಕೇಳೋಕೆ ಅಂತಾ, ಆದರೆ ರಾಮನ ಹೆಸರಿನಲ್ಲಿ ದುರುಪಯೋಗ ಆಗಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ