ಬೆಂಗಳೂರು: ಯುರೋಪ್, ಕಾಂಬೋಡಿಯಾ ಬಳಿಕ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿಯವರು (HD Kumaraswamy) ಮತ್ತೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಹೌದು. ಹೆಚ್ಡಿಕೆ ಈ ಬಾರಿ ದುಬೈಗೆ (Dubai) ತೆರಳುತ್ತಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಿಂದ ಹೆಚ್ಡಿಕೆ ಈಗಾಗಲೇ ಹೊರಟಿದ್ದಾರೆ. 5 ದಿನಗಳ ಕಾಲ ದುಬೈ ಪ್ರವಾಸ ಕುಮಾರಸ್ವಾಮಿ ವಾಪಸ್ಸಾಗಲಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ಭಾನುವಾರ ದುಬೈನಲ್ಲಿ ಯುಎಇ ಒಕ್ಕಲಿಗರ ಸಂಘದಿಂದ ಕೆಂಪೇಗೌಡ ಉತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಡಿಕೆ ಭಾಗಿಯಾಗಲಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಕೆ. ವೆಂಕಟೇಶ್, ಶಾಸಕರಾದ ಸ್ವರೂಪ್ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೆಚ್ಡಿಕೆ ನವೆಂಬರ್ 3 ರಂದು ವಾಪಸ್ ಆಗುವ ಸಾಧ್ಯತೆ ಇದೆ.
ಕಳೆದ ಬಾರಿ ಹೆಚ್ಡಿಕೆ ಫಾರಿನ್ ಟೂರ್ ನಿಂದ ವಾಪಸ್ ಬರ್ತಿದ್ದಿದ್ದಂತೆ ಚಾರ್ಜ್ಶೀಟ್ ಪಾಲಿಟಿಕ್ಸ್ ಶುರುವಾಗಿತ್ತು. ಸಿಎಂ, ಪರಂ ಸಭೆಯಲ್ಲಿ `ವೈಎಸ್ಟಿ ಟ್ಯಾಕ್ಸ್ ಏಕೆ ಇದ್ದರು..? ಗರುಡಾ ಮಾಲ್ ಬಳಿಯ ಪೊಲೀಸ್ ಮೆಸ್ನಲ್ಲಿ ಸಭೆ ನಡೆದಿತ್ತು ಎಂದು ಹೆಅಚ್ಡಿಕೆ ಫ್ರೆಶ್ ಫೈಲ್ಸ್ ಬಿಟ್ಟಿದ್ದರು. ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ ಬೆನ್ನಲ್ಲೇ ಹೆಚ್ಡಿಕೆ ವೈಎಸ್ಟಿ ರಹಸ್ಯ ಬಾಂಬ್ ಹಾಕಿರುವುದು ಚರ್ಚೆಗೆ ಗ್ರಾಸವಾಗಿತ್ತು.
Web Stories