Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

Latest

ಮೋದಿ ಸಮಾವೇಶಕ್ಕೆ ಬರಲ್ಲ: ಬಿಎಸ್‌ವೈ ಮನವಿ ನಿರಾಕರಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

Public TV
Last updated: April 14, 2024 2:53 pm
Public TV
Share
3 Min Read
yediyurappa srinivas prasad
SHARE

ಮೈಸೂರು: ಕಾಂಗ್ರೆಸ್ ನಾಯಕರ ಸಾಲು ಸಾಲು ಭೇಟಿ ಬೆನ್ನಲ್ಲೇ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ಭಾನುವಾರ ಭೇಟಿ ನೀಡಿದರು. ಈ ವೇಳೆ, ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಬಿಎಸ್‌ವೈ ಮಾಡಿದ ಮನವಿಗೆ ಪ್ರಸಾದ್, ಆಗಲ್ಲ ಎಂದು ನಿರಾಕರಿಸಿದ್ದಾರೆ.

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ (Srinivas Prasad) ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೇ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಸಾದ್ ಅವರನ್ನು ಭೇಟಿಯಾಗುತ್ತಿರುವುದು ಸಹಜವಾಗಿ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಸಿಎಂ ತವರಲ್ಲಿಂದು ನಮೋ ಘರ್ಜನೆ – ಮೈಸೂರಲ್ಲಿ ಎಲ್ಲೆಲ್ಲಿ ಮಾರ್ಗ ಬದಲಾವಣೆ?

Srinivas Prasad Siddaramaiah

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದರು. ಈ ವೇಳೆ ಪ್ರಸಾದ್ ಆರೋಗ್ಯವನ್ನು ಬಿಎಸ್‌ವೈ ವಿಚಾರಿಸಿದರು.

ಇಂದಿನ ಬಿಜೆಪಿ ಸಮಾವೇಶದಲ್ಲಿ ನರೇಂದ್ರ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವಂತೆ ಪ್ರಸಾದ್‌ಗೆ ಬಿಎಸ್‌ವೈ ಮನವಿ ಮಾಡಿದರು. ಇದಕ್ಕೆ ಪ್ರಸಾದ್ ಸ್ಪಷ್ಟವಾಗಿ ನಿರಾಕರಿಸಿದರು. ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗಿದ್ದೇನೆ. ಹಾಗಾಗಿ ಸಮಾವೇಶದಲ್ಲಿ ಭಾಗಿಯಾಗುವುದಿಲ್ಲ. ಮೋದಿ ಜಾಗತಿಕ ನಾಯಕರು. ಅವರ ಜೊತೆ ಐದು ವರ್ಷ ಸಂಸದನಾಗಿ ಸೇವೆ ಸಲ್ಲಿಸಿದ್ದೇನೆ. ಮೋದಿ ನಾನು ಕಂಡ ಅತ್ಯಂತ ಒಳ್ಳೆಯ ಪ್ರಧಾನ ಮಂತ್ರಿ. ಮೋದಿ, ಬಿಜೆಪಿ ವಿರುದ್ಧ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಹಾಲಿ, ಮಾಜಿ ಪ್ರಧಾನಿಗಳ ಸಮಾಗಮದಿಂದ ದೊಡ್ಡ ಸಂದೇಶ ರವಾನೆ: ಯದುವೀರ್‌

ಹೂಗುಚ್ಛ ನೀಡಿ ಆತ್ಮೀಯವಾಗಿ ಇಬ್ಬರೂ ಮಾತುಕತೆ ನಡೆಸಿದರು. ಕಾರ್ಯಕ್ರಮಕ್ಕೆ ಬಂದು ಸ್ವಲ್ಪಹೊತ್ತು ಕುಳಿತು ಹೋಗಬೇಕು ಎಂದು ಶ್ರೀನಿವಾಸ್ ಪ್ರಸಾದ್‌ಗೆ ಯಡಿಯೂರಪ್ಪ ಮನವಿ ಮಾಡಿದರು. ಕೈ ಮುಗಿತೀನಿ ಆಗೋದಿಲ್ಲ. ನನಗೆ ಆರೋಗ್ಯ ಸ್ಪಂದಿಸಲ್ಲ. ನಾನು ಬಿಜೆಪಿಯಿಂದಲೇ ನಿವೃತ್ತಿ ಆಗಿದ್ದೇನೆ. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ಭಾಗವಹಿಸುತ್ತಿಲ್ಲ ಎಂದರು ಪ್ರಸಾದ್. ಆಗ ಬಿಎಸ್‌ವೈ, ಪ್ರಧಾನಿ ಬರ್ತಿದ್ದಾರೆ ಬನ್ನಿ ಎಂದು ಮನವಿ ಮಾಡಿದರು.

srinivas prasad h.c.mahadevappa

ನಾನು ನಿವೃತ್ತಿ ಆಗಿರೋದ್ರಿಂದ ಸಿಎಂ ಸೇರಿ ಎಲ್ಲ ಬರ್ತಾರೆ. ಬಂದು ಆರೋಗ್ಯ ವಿಚಾರಿಸಿದ್ದಾರೆ. ವಿಜಯೇಂದ್ರ ಎರಡು ಬಾರಿ ಬಂದಿದ್ರು. ನಮ್ಮ ಅಳಿಯ ಹರ್ಷ ಅವರು ಬಹಳ ಸಂಪರ್ಕದಲ್ಲಿ ಇದ್ದಾರೆ. ನೀವು ಬಹಳ ಬ್ಯುಸಿ ಇದ್ದೀರ. ಚಿತ್ರದುರ್ಗದಿಂದ ಬಂದ್ರ? ನಿಮ್ಮ ಆರೋಗ್ಯ ಚೆನ್ನಾಗಿದೆ, ಬಹಳಾ ಚೆನ್ನಾಗಿ ಕಾಪಾಡಿಕೊಂಡಿದ್ದೀರಾ ಎಂದು ಯಡಿಯೂರಪ್ಪಗೆ ಕಾಂಪ್ಲಿಮೆಂಟರಿ ಕೊಟ್ಟರು. ಮೋದಿ ಜೊತೆ ತುಂಬಾ ಸಾರಿ ವೇದಿಕೆ ಹಂಚಿಕೊAಡಿದ್ದೇನೆ. ಈಗ ಸ್ವಲ್ಪ ದೂರವೂ ನಡೆಯಲು ಆಗಲ್ಲ ಎಂದು ಮಾತನಾಡುತ್ತಲೇ ನಯವಾಗಿ ಯಡಿಯೂರಪ್ಪ ಆಹ್ವಾನ ತಿರಸ್ಕರಿಸಿದರು.

ಶ್ರೀನಿವಾಸ್ ಪ್ರಸಾದ್ ನಿವಾಸದಿಂದ ಹೊರಟ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಕಾರ್ಯಕ್ರಮಕ್ಕೆ ಬರಲು ಪ್ರಸಾದ್ ಒಪ್ಪಿಕೊಂಡಿದ್ದಾರೆ. ನಮ್ಮ ಸಂಸತ್ ಸದಸ್ಯರು ಬಹಳ ಹಿರಿಯವರು. ಮೋದಿ ಅವರ ಬಗ್ಗೆ ಬಹಳ ಗೌರವ ಇಟ್ಟುಕೊಂಡಿರುವ ನಾಯಕರು. ನಾನು ಅವರಿಗೆ ಮನವಿ ಮಾಡಿಕೊಂಡಿದ್ದೇನೆ. ಮೋದಿ ಭೇಟಿ ಮಾಡಿ ಐದು ನಿಮಿಷ ಇದ್ದು ಹೋಗಿ ಎಂದು ಕೇಳಿಕೊಂಡಿದ್ದೇನೆ. ಈಗ ಅವರು ಬರಲು ಒಪ್ಪಿಕೊಂಡಿದ್ದಾರೆ. ಇದಕ್ಕೆ ಚಿರಋಣಿಯಾಗಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಆಹ್ವಾನ ಕುರಿತು ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ಕೊಟ್ಟಿದ್ದಾರೆ. ಮನೆಗೆ ಬಂದಿದ್ದಾರೆ, ಮನೆಗೆ ಬಂದವರನ್ನ ಸೌಜನ್ಯದಿಂದ ಬರಮಾಡಿಕೊಳ್ಳುವುದು ಕರ್ತವ್ಯ. ಕಾರ್ಯಕ್ರಮಕ್ಕೆ ಬರುವಂತೆ ಯಡಿಯೂರಪ್ಪ ಕರೆದಿದ್ದಾರೆ. ಕಡು ಖಂಡಿತವಾಗಿ ಬರಲು ಆಗಲ್ಲ ಅಂತ ಹೇಳಲು ಆಗಲ್ಲ. ಸೌಜನ್ಯದಿಂದ ಬಂದಾಗ ಪ್ರೀತಿಯಿಂದ ಮಾತನಾಡಿದ್ದೇನೆ. ಕಾರ್ಯಕ್ರಮಕ್ಕೆ ಹೋಗುವುದು ಬಿಡುವುದು ನಮ್ಮ ತೀರ್ಮಾನ ಎಂದು ಸ್ಪಷ್ಟಪಡಿಸಿದರು.

TAGGED:B. S.YediyurappabjpLok Sabha Election 2024mysuruV. Srinivas Prasad
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
13 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
15 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
42 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
1 hour ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
2 hours ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?