Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌: ಹೆಚ್‌ಡಿಕೆ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌: ಹೆಚ್‌ಡಿಕೆ ವ್ಯಂಗ್ಯ

Bengaluru City

ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌: ಹೆಚ್‌ಡಿಕೆ ವ್ಯಂಗ್ಯ

Public TV
Last updated: December 30, 2023 7:43 pm
Public TV
Share
4 Min Read
HD Kumaraswamy 6
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಆದರೆ ‘ರಾಜಕೀಯ ಗಂಜಿ ಕೇಂದ್ರ’ಗಳನ್ನು ಯಥೇಚ್ಚವಾಗಿ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬರದ ನಡುವೆಯೂ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕ್ರಮವನ್ನು ಹೆಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ರೈತರನ್ನು ಬಹಳ ಕೇವಲವಾಗಿ ನಡೆಸಿಕೊಳ್ಳುತ್ತಿದೆ. ಆದರೆ ಅಧಿಕಾರವನ್ನು ಭರ್ಜರಿಯಾಗಿ ಅನುಭವಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

Siddaramaiah 12

ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವ ಸಿಎಂಗೆ ಹ್ಯಾಟ್ಸಾಫ್. ಸಿಎಂ ಅವರು ಬಿ.ಆರ್.ಪಾಟೀಲ್ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಬಸವರಾಜ ರಾಯರೆಡ್ಡಿ ಅವರಿಗೆ ಆರ್ಥಿಕ ಸಲಹೆಗಾರರು ಎಂದು ಮಾಡಿ ಸಂಪುಟ ದರ್ಜೆ ನೀಡಿದ್ದಾರೆ. ಹಾಗೆಯೇ ರಾಜ್ಯದ 3ನೇ ಆಡಳಿತ ಸುಧಾರಣಾ ಆಯೋಗಕ್ಕೆ ಆರ್.ವಿ.ದೇಶಪಾಂಡೆ ಅವರಿಗೆ ಅವಕಾಶ ನೀಡಿ ಅವರಿಗೂ ಸಂಪುಟ ದರ್ಜೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಆತನ್ಯಾರೋ ಚುನಾವಣೆ ಮತ್ತು ಗ್ಯಾರಂಟಿ ತಂತ್ರಗಾರಿಕೆ ಮಾಡಿದ ಎಂದು ಆತನಿಗೂ ಸಲಹೆಗಾರ ಹುದ್ದೆ ಕೊಟ್ಟು ಸಂಪುಟ ದರ್ಜೆ ಕರುಣಿಸಿದ್ದಾರೆ. ಇನ್ನೊಬ್ಬರನ್ನು ಮಾಧ್ಯಮ ಸಲಹೆಗಾರ ಅಂತಾ ಮಾಡಿಕೊಂಡು ಅವರಿಗೂ ಸಂಪುಟ ದರ್ಜೆ ನೀಡಿದ್ದಾರೆ. ಹೀಗೆ ಸುತ್ತಲೂ ಸಲಹೆಗಾರರು, ಕಾರ್ಯದರ್ಶಿಗಳನ್ನು ಇಟ್ಟುಕೊಟಂಡು ಜನರ ತೆರಿಗೆ ದುಡ್ಡಿನಲ್ಲಿ ಗೂಟದ ಕಾರು, ಸರ್ಕಾರಿ ಕಚೇರಿ, ಸಿಬ್ಬಂದಿ ನೀಡಿದ್ದಾರೆ ಎಂದು ಟೀಕಿಸಿದರು.

ದಾಖಲೆ 14 ಬಜೆಟ್‌ ಮಂಡಿಸಿದವರಿಗೆ ಸಲಹೆಗಾರರಾ?
ನಾಡು ಕೊಳ್ಳೆ ಹೋಗುತ್ತಿದ್ದರೂ ಈ ಸರ್ಕಾರದಲ್ಲಿ ಅಧಿಕಾರ ಲಾಲಸೆಗೇನೂ ಕೊರತೆ ಇಲ್ಲ. 14 ಬಜೆಟ್‌ಗಳನ್ನು ಮಂಡಿಸಿ ದಾಖಲೆ ಮಾಡಿದವರು ತಮಗೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಹೆಚ್‌ಡಿಕೆ ಕಠಿಣ ಶಬ್ದಗಳಲ್ಲಿ ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

JDS CONGRESS

ಅವರೇ ವಿಶ್ವವಿಖ್ಯಾತ ಆರ್ಥಿಕ ತಜ್ಞರು. ಹಣಕಾಸು ಸಚಿವರಾಗಿ ಅನೇಕ ಸಿಎಂಗಳ ಜತೆ ಕೆಲಸ ಮಾಡಿದವರು. ಡಿಸಿಎಂ, ಸಿಎಂ ಹಾಗೂ ಪ್ರತಿಪಕ್ಷ ನಾಯಕರಾಗಿದ್ದವರು. ಅವರು ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದರೆ ಅಚ್ಚರಿ ಆಗುತ್ತಿದೆ ಎಂದು ಟಾಂಗ್ ನೀಡಿದರು.

ಆರ್.ವಿ.ದೇಶಪಾಂಡೆ ಅವರು 25 ವರ್ಷಗಳ ಕಾಲ ಮಂತ್ರಿ ಆಗಿದ್ದವರು. ವಿವಿಧ ಸಿಎಂಗಳ ಜತೆ ಹತ್ತಾರು ಇಲಾಖೆಗಳಲ್ಲಿ ಕೆಲಸ ಮಾಡಿದ್ದವರು. ಬಹಳ ಹಿರಿಯರು. ಈಗ ಅವರನ್ನು ಮೂರನೇ ಆಡಳತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹಿಂದೆ ಹಾರನಹಳ್ಳಿ ರಾಮಸ್ವಾಮಿ, ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಅವರು ಇದೇ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿ ಆಡಳಿತ ಸುಧಾರಣೆಗೆ ತಲಾ ಒಂದೊಂದು ವರದಿ ನೀಡಿದ್ದಾರೆ. ಆ ವರದಿಗಳು ಏನಾಗಿವೆ? ಆ ವರದಿಗಳ ಸಲಹೆಗಳನ್ನ ಸ್ವೀಕಾರ ಮಾಡಿ ಎಷ್ಟು ಆಡಳಿತ ಸುಧಾರಣೆ ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

HD Kumaraswamy 2

ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ಮಾಡಿಕೊಂಡು ಏನು ಆಡಳಿತ ಸುಧಾರಣೆ ಮಾಡುತ್ತಾರೆ ಇವರು? ಮೇಯುವುದಕ್ಕೆ ಎಲ್ಲರಿಗೂ ಮುಕ್ತ ಅವಕಾಶ ಕೊಟ್ಟಿದ್ದಾರೆ. ಬಿ.ಆರ್‌‌.ಪಾಟೀಲ್ ಅವರನ್ನು ಸಿಎಂ ತಮ್ಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಸಿಎಂಗಿಂತ ಸಲಹೆಗಾರ ಬೇಕಾ? ಅಹಿಂದ ಐಕಾನ್ ಅವರು. ಖರ್ಗೆಯರನ್ನೇ ದೆಹಲಿಗೆ ಎತ್ತಿಹಾಕಿದ ರಾಜಕೀಯ ಅನುಭವ ಅವರದ್ದು. ಅಂಥವರಿಗಿಂತ ಹೆಚ್ಚು ಅನುಭವ ಬಿ.ಆರ್.ಪಾಟೀಲ್ ಅವರಿಗೆ ಇದೆಯಾ ಎಂದು ಲೇವಡಿ ಮಾಡಿದರು.

2009ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿಯೂ ಸೋತಿತ್ತು. ಅಂತಹ ಹೀನಾಯ ಸೋಲಿಗೆ ಕಾರಣರಾದ ನಾಯಕನಿಗೆ ಸಲಹೆಗಾರರ ಅಗತ್ಯ ಇದೆಯಾ? ದೇವರಾಜು ಅರಸು ನಂತರ ಎರಡು ಬಾರಿ ಸಿಎಂ, ವಿರೋಧ ಪಕ್ಷದ ನಾಯಕರಾಗಿ, ಡಿಸಿಎಂ ಆಗಿ ಅನುಭವ ಪಡೆದಿರುವ ಸಿದ್ದರಾಮಯ್ಯ ಅವರೇ ಬಿ.ಆರ್.ಪಾಟೀಲ್ ಅವರರಿಂದ ಪಡೆಯುವ ಸಲಹೆಯಾದರೂ ಇರುತ್ತದಾ? ಇದೆಂಥಾ ವಿಪರ್ಯಾಸ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

2 ಸಾವಿರ ರೂ. ಪರಿಹಾರ ಕೊಡಲು ಮೀನಾಮೇಷ
ಈ ಸರ್ಕಾರ ಏನು ಮಾಡುತ್ತಿದೆ? ಕೆಲ ಸಚಿವರು ರೈತರ ಬಗ್ಗೆ ಏನೆಲ್ಲಾ ಮಾತನಾಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಅನ್ನ ಬೆಳೆದುಕೊಡುವ ರೈತರ ಬಗ್ಗೆ ಇಷ್ಟು ನಿರ್ದಯವಾಗಿ ಸರ್ಕಾರ ವರ್ತಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫ್ರೂಟ್ ತಂತ್ರಾಂಶದ ಮೂಲಕ ರೈತರಿಗೆ 2 ಸಾವಿರ ರೂ. ಪರಿಹಾರ ಕೊಡುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ಇಲ್ಲಿಯವರೆಗೆ ರೈತರಿಗೆ ಬಿಡಿಗಾಸನ್ನೂ ಕೊಟ್ಟಿಲ್ಲ. ಇದು ಸರ್ಕಾರದ ಏಳು ತಿಂಗಳ ಸಾಧನೆ. ನುಡಿದಂತೆ ನಡೆಯುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಇವರು. ನುಡಿದಂತೆ ನಡೆಯುವುದು ಎಂದರೆ ಹೀಗೆನಾ ಎಂದು ಸರ್ಕಾರದ ಮೇಲೆ ಪ್ರಹಾರ ನಡೆಸಿದರು.

ಕೆಲ ದಿನಗಳ ಹಿಂದೆ ಹೋಗಿ ಪ್ರಧಾನಿಗಳು ಸೇರಿದಂತೆ ಕೇಂದ್ರದ ವಿವಿಧ ನಾಯಕರನ್ನು ಸಿಎಂ, ಡಿಸಿಎಂ ಮತ್ತು ಸಚಿವರು ಭೇಟಿ ಮಾಡಿದ್ದರು. ಕೇಂದ್ರವೂ ಕೂಡ ವರದಿಯನ್ನು ಸಿದ್ಧ ಮಾಡಿಕೊಂಡಿದೆ. NDRF ಅಡಿ ಹಣ ಶೀಘ್ರವೇ ಬಿಡುಗಡೆ ಆಗಬಹುದು. ಆದರೆ ರಾಜ್ಯದಲ್ಲಿಯೂ ಸರ್ಕಾರ ಎನ್ನುವುದು ಇದೆಯಲ್ಲ. ಕೇಂದ್ರದಿಂದ ಹಣ ಬರುವುದರೊಳಗೆ ರೈತರಿಗೆ ತಾನೇ ಹೇಳಿದಂತೆ 2 ಸಾವಿರ ರೂಪಾಯಿ ಕೊಡಬಹುದಿತ್ತು. ಯಾಕೆ ಈ ಹಣವನ್ನು ಕೊಡಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಕೈ ನಾಯಕರು ಬರುತ್ತಾರೆಂಬ ವಿಶ್ವಾಸವಿದೆ: ಶೋಭಾ ಕರಂದ್ಲಾಜೆ

ರೈತರು ಕಷ್ಟದಲ್ಲಿದ್ದರೆ, ಇವರು ಮೂವರು ಡಿಸಿಎಂಗಳ ಗುಂಗಿನಲ್ಲಿ ಇದ್ದಾರೆ
ರಾಜ್ಯದಲ್ಲಿ ಇಂಥ ಭೀಕರ ಬರದ ಪರಿಸ್ಥಿತಿ ಇದ್ದರೂ ಇವರ ಮೋಜು-ಮಸ್ತಿ ಏನು ಕಡಿಮೆ ಆಗಿಲ್ಲ. ಈಗಾಗಲೇ ರೈತರ ಆತ್ಮಹತ್ಯೆಗಳು ಆರಂಭವಾಗಿದೆ. ಬೆಳೆ ಉಳಿಸಿಕೊಳ್ಳಲು ನಾರಾಯಣಪುರ ಡ್ಯಾಮ್ ಬಳಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಈ ಸರ್ಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯದ ಚಿಂತೆ. ಇವರು ಮೂವರು ಡಿಸಿಎಂಗಳನ್ನು ಮಾಡುವ ಗುಂಗಿನಲ್ಲಿ ಇದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್‌ ಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಕೆ.ಟಿ.ಶಾಂತಕುಮಾರ್‌ ಉಪಸ್ಥಿತರಿದ್ದರು.

TAGGED:congressh d kumaraswamyjdssiddaramaiahಕಾಂಗ್ರೆಸ್ಜೆಡಿಎಸ್ಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
11 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
25 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
49 minutes ago
Chennai Crime Kalaiselvan
Crime

ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

Public TV
By Public TV
1 hour ago
DK Shivakumar Odisha Congress MLAs
Districts

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Public TV
By Public TV
2 hours ago
Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?