ಕಣ್ಣಿನ ಚಿಕಿತ್ಸೆ ಹೇಳಿ ದೆಹಲಿಗೆ ಹೊರಟ ಸಿದ್ದರಾಮಯ್ಯ

Public TV
2 Min Read
Siddaramaiah A

ಬೆಂಗಳೂರು: ಕಣ್ಣಿನ ಚಿಕಿತ್ಸೆಗೆ ಒಳಗಾಗಿದ್ದು ವಿಶ್ರಾಂತಿ ಪಡೆಯಲು ವೈದ್ಯರು ಹೇಳಿದ್ದಾರೆಂದು ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗ ದೆಹಲಿಗೆ ಹೊರಡಲು ಮುಂದಾಗಿದ್ದಾರೆ.

ದೆಹಲಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಯಲಿದೆ. ಮಹತ್ವದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಲಿದೆ. ಹೀಗಾಗಿ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಅವರು ಇಂದು ರಾತ್ರಿಯೇ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಈ ಮೂಲಕ ನಾಳೆಯ ಸಭೆಗೆ ಹಾಜರಾಗಿ ರಾಜ್ಯ ರಾಜಕೀಯ ಬೆಳವಣಿಗೆಯ ವರದಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ‘ಕೈ’ ಅಧ್ಯಕ್ಷರ ಪಟ್ಟಿ ನಾಳೆ ನಿರ್ಧಾರ- ಮುಂಚೂಣಿಯಲ್ಲಿದೆ ಮುಕುಲ್ ವಾಸ್ನಿಕ್ ಹೆಸರು

Rain 9

ಸ್ವಕ್ಷೇತ್ರದಲ್ಲಿ ಭಾರೀ  ಮಳೆ ಹಾಗೂ ಪ್ರವಾಹ ಉಂಟಾದರೂ  ಸಿದ್ದರಾಮಯ್ಯ ಅವರು ಭೇಟಿ ನೀಡಿಲ್ಲ. ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ  ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ, ಕಣ್ಣೀನ ಚಿಕಿತ್ಸೆಗೆ ಒಳಗಾಗಿದ್ದರಿಂದ ವಿಶ್ರಾಂತಿ ಪಡೆಯಲು ವೈದ್ಯರು ಹೇಳಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ದೆಹಲಿಗೆ ಹೋಗಲು ಮುಂದಾಗಿದ್ದಾರೆ. ಇತ್ತ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದೆ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಸಂಜೆ 4:25 ಕ್ಕೆ ಟ್ವೀಟ್ ಮಾಡಿ, “4 ದಿನದ ಹಿಂದೆ ನಾನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲವು ದಿನಗಳ ಕಡ್ಡಾಯ ವಿಶ್ರಾಂತಿಯನ್ನು ಸೂಚಿಸಿದ್ದಾರೆ. ಈ ನಡುವೆ ಉತ್ತರ ಕರ್ನಾಟಕ ಭಾಗ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ. ಅಲ್ಲಿ ಹೋಗಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಬೇಕೆಂದು ಮನಸ್ಸು ತುಡಿಯುತ್ತಿದ್ದರೂ, ನನ್ನ ದುರಾದೃಷ್ಟಕ್ಕೆ ಅದು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಮತ್ತೊಂದು ಟ್ವೀಟ್‍ನಲ್ಲಿ, “ನಾನು ಆಡಳಿತ ಪಕ್ಷದಲ್ಲಿಯೇ ಇರಲಿ, ವಿರೋಧ ಪಕ್ಷದಲ್ಲಿಯೇ ಇರಲಿ ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯ ಎಂದು ನಂಬಿ ರಾಜಕಾರಣ ಮಾಡುತ್ತ ಬಂದವನು. ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಳುಹಿಸಿದ್ದೇನೆ” ಎಂದು ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *