Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಚ್ಛಾ ತೈಲ ಬೆಲೆ ಏರಿಕೆ ನೆಪ ಹೇಳಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಚ್ಛಾ ತೈಲ ಬೆಲೆ ಏರಿಕೆ ನೆಪ ಹೇಳಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಸಿದ್ದರಾಮಯ್ಯ

Bengaluru City

ಕಚ್ಛಾ ತೈಲ ಬೆಲೆ ಏರಿಕೆ ನೆಪ ಹೇಳಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಸಿದ್ದರಾಮಯ್ಯ

Public TV
Last updated: September 13, 2021 6:45 pm
Public TV
Share
3 Min Read
SIDDARAMAIAH
SHARE

ಬೆಂಗಳೂರು: ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ರಾಜ್ಯ ಸರ್ಕಾರ ಕೂಡಲೇ ಕಡಿತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಎತ್ತಿನ ಗಾಡಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಎಷ್ಟು ಇತ್ತು. ಈಗ ಎಷ್ಟು ಇದೆ ಎಂಬುದನ್ನು ಮಾಧ್ಯಮ ಪ್ರತಿನಿಧಿಗಳೇ ಪರಿಶೀಲಿಸಲಿ. ತೆರಿಗೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾದರೂ ನಿಜ ಹೇಳಲಿ. ಸತ್ಯವನ್ನೇಕೆ ಅವರು ಮುಚ್ಚಿಡಬೇಕು. ಜನರ ಮುಂದೆ ಅವರು ನಿಜಾಂಶ ವಿವರಿಸಲಿ ಎಂದರು.

We are not concerned about the price of Petrol & Diesel in other States. We want it to be reduced in our State to help the people of our State.

I urge @BJP4Karnataka govt to reduce the taxes on Petrol & Diesel in our State.#PetrolDieselPriceHike pic.twitter.com/gEqlvvMC1t

— Siddaramaiah (@siddaramaiah) September 13, 2021

ಪೆಟ್ರೋಲ್ ದರ ಈಗ ಲೀಟರ್ ಗೆ 106 ರೂ., ಡೀಸೆಲ್ ಬೆಲೆ 100 ರೂ.ಗಳ ವರೆಗೆ ಹೋಗಿದೆ. ಅಡುಗೆ ಅನಿಲ ದರ 900 ರೂ. ಆಗಿದೆ. ವಾಜಪೇಯಿ ಅವರು 1973ರಲ್ಲಿ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿಯಲ್ಲಿ ಸಂಸತ್ತಿಗೆ ಬಂದಿರಲಿಲ್ಲವೇ? ಆಗ ಪ್ರತಿಭಟನೆ ಮಾಡಿದವರು ಬಿಜೆಪಿಯವರಲ್ಲವೇ? ಕಾಂಗ್ರೆಸ್ ಪ್ರತಿಭಟನೆ ವಿರೋಧಿಸಿರುವ ಮುಖ್ಯಮಂತ್ರಿ ಹಾಗೂ ಬಿಜೆಪಿಯವರು ಇತಿಹಾಸ ಓದಿಕೊಳ್ಳಬೇಕು. ಆಗ ವಾಜಪೇಯಿಯವರು ಏಕೆ ಪ್ರತಿಭಟನೆ ಮಾಡಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಸ್ವಲ್ಪ ಬೆಲೆ ಏರಿಕೆಯಾದಾಗ ಶೋಭಾ ಕರಂದ್ಲಾಜೆಯವರು ಹಾಗೂ ಬಿಜೆಪಿ ನಾಯಕರು ತಲೆಯ ಮೇಲೆ ಸಿಲಿಂಡರ್ ಹೊತ್ತು ಧರಣಿ ಮಾಡಿರಲಿಲ್ಲವೇ? ಜನರಿಗೆ ಅನ್ಯಾಯವಾಗಿದೆ ಎಂದು ಅವರು ಹೋರಾಟ ಮಾಡಿದ್ದರು. ಈಗ ಅವರು ಮಂತ್ರಿಯಾಗಿದ್ದಾರೆ ಎಂದು ಜನ ಬೆಲೆ ಏರಿಕೆಯನ್ನು ಸಹಿಸಿಕೊಳ್ಳಬೇಕೇ ಎಂದು ಪ್ರಶ್ನಿಸಿದ ಅವರು ಕೂಡಲೇ ಶೋಭಾ ಕರಂದ್ಲಾಜೆ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ

Everyone has to compare the exicse duty on Petrol & Diesel during Shri Manmohan Singh govt & now.

Let CM @BSBommai speak the truth about the excise duty on Fuel and let people know about it.#PetrolDieselPriceHike pic.twitter.com/7luhLehtCa

— Siddaramaiah (@siddaramaiah) September 13, 2021

ತಮಿಳುನಾಡಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಅಲ್ಲಿಯ ಮುಖ್ಯಮಂತ್ರಿ ಕಡಿಮೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಹ ತೆರಿಗೆ ಕಡಿತಗೊಳಿಸಲಿ. ಬೆಲೆ ಏರಿಕೆ ಬಗ್ಗೆ ಸದನದಲ್ಲಿ ನಾಳೆ ನಿಲುವಳಿ ಸೂಚನೆ ಮಂಡಿಸುತ್ತೇವೆ. ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ನಾನು ನಮ್ಮ ರಾಜ್ಯದ ಬಗ್ಗೆ ಕಾಳಜಿಯಿಂದ ಮಾತನಾಡುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರವನ್ನು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಅದನ್ನೂ ಬಿಜೆಪಿಯವರು ಗಮನಿಸುವುದು ಒಳ್ಳೆಯದು ಎಂದರು.

ಮನಮೋಹನಸಿಂಗ್ ಅವರು ಪ್ರಧಾನಿ ಆಗಿದ್ದಾಗ ಡೀಸೆಲ್ ಮೇಲಿನ ತೆರಿಗೆ 3.45 ರೂ. ಇತ್ತು. ಈಗ 31.74 ರೂ. ಆಗಿದೆ. ಅದೇ ರೀತಿ ಪೆಟ್ರೋಲ್ ಮಾರಾಟದ ಮೇಲಿನ ತೆರಿಗೆ 9.21 ರೂ.ಗಳಿಂದ 32.98 ರೂ.ಗಳಿಗೆ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಕೆ ಆಗದಿದ್ದರೂ ಪೆಟ್ರೋಲ್, ಡಿಸೇಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ದೂರಿದರು.  ಇದನ್ನೂ ಓದಿ: ‘ಚಿಂತಾಮಣಿ ಅಪಘಾತ – 8 ಮಂದಿಯ ಸಾವಿಗೆ ರಮೇಶ್‍ಕುಮಾರ್ ನೇರ ಹೊಣೆ’

Petrol is ₹106 per litre & Diesel has reached ₹100 per litre. Domestic Cylinder has crossed ₹900 now.

How can a poor and middle class family lead a decent life?@BJP4Karnataka is the reason for miserable condition of people.#PetrolDieselPriceHike pic.twitter.com/Wr4wl6jRmd

— Siddaramaiah (@siddaramaiah) September 13, 2021

ದೇಗುಲ ತೆರವಿಗೆ ಮುನ್ನ ಮಾಹಿತಿ ಕೊಡಬೇಕಿತ್ತು: ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ ಮಾಡುವ ಮುನ್ನ ಭಕ್ತರಿಗೆ ತಿಳಿಸಬೇಕಿತ್ತು. ದೇವಾಲಯ ನಿರ್ಮಾಣಕ್ಕೆ ಪರ್ಯಾಯ ಜಾಗವನ್ನಾದರೂ ಕೊಡಬೇಕಿತ್ತು. ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿನ ದೇವಾಲಯಗಳನ್ನು ತೆರವುಗೊಳಿಸಲು ನ್ಯಾಯಾಲಯದ ಆದೇಶ ಇದೆ. ಆದರೆ, ಮಂದಿರ, ಮಸೀದಿ, ಚರ್ಚ್ ಯಾವುದೇ ಇರಲಿ, ತೆರವಿಗೆ ಮುನ್ನ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು.

ದೇವಸ್ಥಾನ ಕೆಡವಿದ್ದು ಯಾವ ಸರ್ಕಾರ.? ಪ್ರತಾಪ್ ಸಿಂಹ ಅವರು ಪ್ರತಿನಿಧಿಸುವ ಪಕ್ಷದ ಸರ್ಕಾರ ತಾನೆ. ಹೀಗಾಗಿ ಪ್ರತಾಪ್ ಸಿಂಹ ರಾಜಿನಾಮೆ ಕೊಟ್ಟು ಸರ್ಕಾರದ ವಿರುದ್ಧ ಹೋರಾಟ ಮಾಡಲಿ ಎಂದರು.

PRATHAP SIMHA 3

ಮಹಿಳೆ ಮೇಲಿನ ದೌರ್ಜನ್ಯ ಖಂಡನೀಯ: ಯಾದಗಿರಿಯಲ್ಲಿ ಮಹಿಳೆ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಖಂಡನೀಯ. ಈ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ಮತ್ತೆ ಸಾಬೀತಾಗಿದೆ.

ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಸಂಜೆ ಏಳರ ನಂತರ ಹೊರಗೆ ಹೋಗಿದ್ದೇಕೆ ಎಂದು ಗೃಹ ಸಚಿವರೇ ಹೇಳುತ್ತಾರೆ. ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ಅವರ ಹೇಳಿಕೆಯೇ ಸಾಬೀತು ಮಾಡುತ್ತದೆ. ಜೊತೆಗೆ ರಕ್ಷಣೆ ಕೊಡುವ ಶಕ್ತಿ ಸರ್ಕಾರಕ್ಕೆ ಇಲ್ಲ ಎಂದು ಗೃಹ ಸಚಿವರೇ ಒಪ್ಪಿಕೊಂಡಂತೆ ಆಗಿದೆ ಎಂದರು.

MYS RAPE CASE 1

ಗೃಹ ಸಚಿವರ ಕ್ಷೇತ್ರದಲ್ಲಿ ನಂದಿತಾ ಪ್ರಕರಣ ನಡೆದಾಗ ಗೃಹ ಸಚಿವರು ರಾಜಿನಾಮೆ ಕೊಡಬೇಕು ಎಂದು ಇಂದಿನ ಗೃಹ ಸಚಿವ ಅರಗ ಜ್ಞಾನೇಂದ್ರ ಆಗ್ರಹಿಸಿದ್ದರು. ಆಗ ನಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದೆವು. ಒಟ್ಟು ಆರು ಪ್ರಕರಣಗಳನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದೆವು. ಇವರು ಒಂದಾದರೂ ವಹಿಸಿದ್ದಾರೆಯೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

 

TAGGED:bengalurucongressdisealmoneypetrolPublic TVsiddaramaiahಕಾಂಗ್ರೆಸ್ಡೀಸೆಲ್ಪಬ್ಲಿಕ್ ಟಿವಿಪೆಟ್ರೋಲ್ಬೆಂಗಳೂರುಸಿದ್ದರಾಮಯ್ಯಹಣ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
38 seconds ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
19 minutes ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
34 minutes ago
BJP
Bengaluru City

ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ – ಬೆಂಗಳೂರಲ್ಲಿ ವಿಜಯೋತ್ಸವ ಆಚರಣೆ

Public TV
By Public TV
1 hour ago
Ballari 4
Bellary

ಭರತ್‌ ರೆಡ್ಡಿ ಆಪ್ತನ ಇಬ್ಬರು ಗನ್‌ಮ್ಯಾನ್‌ಗಳು ಅರೆಸ್ಟ್ – ಶನಿವಾರ ಬಳ್ಳಾರಿಯಲ್ಲಿ ರೆಡ್ಡಿ, ರಾಮುಲು ಪವರ್‌ಶೋ

Public TV
By Public TV
2 hours ago
bjp flag
Latest

ಜ.20ಕ್ಕೆ ಬಿಜೆಪಿಗೆ ಹೊಸ ಅಧ್ಯಕ್ಷ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?