ಹೊರಟ್ಟಿ ಕಾಂಗ್ರೆಸ್ ಬಗ್ಗೆ ಮಾತನಾಡದೇ ಇರೋದು ಒಳ್ಳೆಯದು: ಸಿದ್ದರಾಮಯ್ಯ ಕಿಡಿ

Public TV
1 Min Read
Siddu basavaraj horatti

ಹುಬ್ಬಳ್ಳಿ: ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡದೇ ಇರುವುದು ಒಳ್ಳೆಯದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಸಿಎಂ, ಶಾಸಕ ರಮೇಶ್ ಜಾರಕಿಹೊಳಿ ಅವರಿಂದ ಸಚಿವ ಸ್ಥಾನ ಕಸಿದುಕೊಂಡಿದ್ದು ತಪ್ಪು ಎಂಬ ಹೇಳಿಕೆ ಕಿಡಿಕಾರಿದರು. ನಮ್ಮ ಶಾಸಕರು ಅಭಿಮಾನದಿಂದ ಸಿಎಂ ಆಗುವಂತೆ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದಂತೆ ಸಿಎಂ ಆಗುವುದಕ್ಕೆ ಸಾಧ್ಯವೆ? ಇವಾಗ ಖುರ್ಚಿ ಖಾಲಿ ಇಲ್ಲವಲ್ಲ ಎಂದು ಹೇಳಿದರು.

Siddu

ಸಿಎಂ ಕುಮಾರಸ್ವಾಮಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಮೂರು ಜನ ಮುಖ್ಯಮಂತ್ರಿಯಾಗಿದ್ದರು. ಭ್ರಷ್ಟಾಚಾರ ಮಾಡಿ ಆರು ಮಂತ್ರಿಗಳು ಜೈಲಿಗೆ ಹೋಗಿದ್ದರು. ಅಂತವರಿಗೆ ಯಾಕೆ ಜನ ಮತ ಕೊಡುತ್ತಾರೆ. ಬಿಜೆಪಿಯವರು ಉಪ ಚುನಾವಣೆ ಗೆಲ್ಲುತ್ತಾರಾ? ನಾವು ಎರಡೂ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *