ಬಿಎಸ್‍ವೈ ಸಿಎಂ ಆದ ಬಳಿಕ ಎರಡನೇ ಗೋಲಿಬಾರ್ – ಸಿದ್ದರಾಮಯ್ಯ ಟೀಕೆ

Public TV
1 Min Read
BSY SIDDU

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ಪರಿವರ್ತನೆಯಾಗಿದ್ದು, ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಟೀಕೆ ಮಾಡಿದ್ದಾರೆ.

ಯಡಿಯೂರಪ್ಪ ಮೊದಲನೇ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಇಬ್ಬರು ರೈತರು ಬಲಿಯಾಗಿದ್ದು, ಇದೀಗ ಎರಡನೇ ಬಾರಿ ಸಿಎಂ ಆದಾಗಲೂ ಇಬ್ಬರು ಅನಮಾಯಕ ಯುವಕರು ಬಲಿಯಾಗಿದ್ದಾರೆ ಎಂದು ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪೊಲೀಸರ ಗೋಲಿಬಾರ್‌ಗೆ ಖಂಡನೆ – ಏತಕ್ಕಾಗಿ ಬಲಿ ಅಂತ ಹೆಚ್‍ಡಿಕೆ ಪ್ರಶ್ನೆ

ಟ್ವೀಟ್ ನಲ್ಲೇನಿದೆ..?
ಮೊದಲಬಾರಿ ಬಿಎಸ್‍ವೈ ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು. ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದು ಬರೆದುಕೊಂಡು ಬಿಎಸ್‍ವೈಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೆ  #IndiaAgainstCAA #RevokeSec144 ಎಂದು ಹ್ಯಾಷ್ ಟ್ಯಾಗ್ ಬಳಸಿದ್ದಾರೆ.

ದೇಶಾದ್ಯಂತ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಮಂಗಳೂರಿನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಗೆ ಅಶ್ರುವಾಯು ಸಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಸದ್ಯ ನಿಷೇಧಾಜ್ಞೆ ಜಾರಿಯಿಂದಾಗಿ ಮಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *