Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ

Bengaluru City

ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ

Public TV
Last updated: October 1, 2017 4:55 pm
Public TV
Share
2 Min Read
narendra babu
SHARE

ಬೆಂಗಳೂರು: ಮಾಜಿ ಶಾಸಕ ನೆಲ ನರೇಂದ್ರ ಬಾಬು ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಬಾಬು ಅವರಿಗೆ ಬಾವುಟ ನೀಡಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅವರ ಜೊತೆಯಲ್ಲಿ ಕಿರುತೆರೆ ನಟಿಯರಾದ ಜ್ಯೋತಿ, ಆಶಾಲತಾ, ಸಂಗೀತಾ ಅವರೂ ಬಿಜೆಪಿ ಸೇರಿಕೊಂಡರು.

ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನರೇಂದ್ರ ಬಾಬು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ಪಕ್ಷ ನನ್ನನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ನಿರ್ಲಕ್ಷ್ಯ ಧೋರಣೆಯಿಂದ ನನಗೆ ನೋವಾಗಿದೆ. ಕುತಂತ್ರ ಬುದ್ದಿ ಹಾಗೂ ಪಕ್ಷ ದ್ರೋಹಿಗಳಿಗೆ ಬೆಲೆಯಿದೆ ಹೊರತು ನನ್ನಂತಹ ನಿಷ್ಠಾವಂತ, ಪ್ರಾಮಾಣಿಕರಿಗೆ ಬೆಲೆಯಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಅಧಿಕೃತವಾಗಿ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ತಿಳಿಸಿದ್ದರು.

ಪಕ್ಷದಲ್ಲಿ 35 ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ. ಮೂರು ಬಾರಿ ಕಾರ್ಪೊರೇಟರ್, ಎರಡು ಬಾರಿ ಶಾಸಕನಾಗಿ ಕೆಲಸ ಮಾಡಿರುವ ನನ್ನನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಹೇಳಿದರು.

ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್ ಅಶೋಕ್, ಬಿಜೆಪಿ ಉಪಾಧ್ಯಕ್ಷ ಕೆಪಿ ನಂಜುಂಡಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಗಾಳಿ ಕರ್ನಾಟಕದ ಉದ್ದಗಲಕ್ಕೆ ಬೀಸುತ್ತಿದೆ. ರಾಮಕೃಷ್ಣ ಹೆಗ್ಡೆಯವರ ಕಾಲದಲ್ಲಿ ಪಕ್ಷದಲ್ಲಿದ್ದ ನರೇಂದ್ರ ಬಾಬು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಆದರೆ ಮರಳಿ ಬಿಜೆಪಿಗೆ ಪಕ್ಷಕ್ಕೆ ಆಗಮಿಸಿರುವುದಕ್ಕೆ ಸ್ವಾಗತ ಕೋರುತ್ತೇನೆ. ಅವರಿಗೆ ಸೂಕ್ತ ಸ್ಥಾನಮಾನವನ್ನು ನೀಡಿ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಪ್ರಧಾನಿ ಕಾರ್ಯಕ್ರಮದ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಪರ್ಯಾಯವಾಗಿ, ಸಿಎಂ ಸಿದ್ದರಾಮಯ್ಯ ಕಾಮ್ ಕಿ ಬಾತ್ ಮಾಡ್ತಿರುವುದು ಮೂರ್ಖತನದ ಪರಮಾವಧಿ ಎಂದು ವಗ್ವಾದ ನಡೆಸಿದರು.

ಸಚಿವ ಹೆಚ್ ಆಂಜನೇಯ ಆಯುಧ ಪೂಜೆ ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ಸಂಪ್ರದಾಯ, ಧರ್ಮಾಚರಣೆಗೆ ಅಪಮಾನ ಮಾಡಿದ್ದಾರೆ. ದುರಂಹಕಾರ ದರ್ಪದಿಂದ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ತರುತ್ತೇವೆಂದು ಯಡಿಯೂರಪ್ಪ ತಿಳಿಸಿದರು.

ನರೇಂದ್ರ ಬಾಬು ಮಾತನಾಡಿ, ಕೇಂದ್ರ ಸರ್ಕಾರ ಗಾಂಧಿ ತತ್ವಗಳನ್ನು ಜಾರಿಗೊಳಿಸುತ್ತಿದೆ. ನನ್ನನ್ನು ಕಾಯ ವಾಚ ಮನಸ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆಂದು ತಿಳಿಸಿದರು.

ಬೈಕ್ ರ್ಯಾಲಿ: ನವೆಂಬರ್ 2 ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆಯನ್ನು ಬೆಂಗಳೂರು ಮತ್ತು ಹುಬ್ಬಳ್ಳಿಗೆ ಬೃಹತ್ ಬೈಕ್ ರ್ಯಾಲಿ ನಡೆಸಲು ತೀರ್ಮಾನಿಸಲಾಯಿತು. ನವಕರ್ನಾಟಕ ಪರಿವರ್ತನಾ ಯಾತ್ರೆ ಬಗ್ಗೆ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿ ಬಗ್ಗೆಯೂ ಚರ್ಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದರು.

ನವ ಕರ್ನಾಟಕ ಪರಿವರ್ತನಾ ಯಾತ್ರೆ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ವಿಚಾರವಾಗಿ, ಬಿಜೆಪಿ ಕಚೇರಿಯಲ್ಲಿ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಪ್ರಚಾರ ತಂಡಗಳ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಅರವಿಂದ ಲಿಂಬಾವಳಿ,  ಬಿ.ಸೋಮಶೇಖರ್, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಭಾಗಿಯಾಗಿದ್ದರು.

TAGGED:Bangalorebike rallybjpBSYNarendra BabuPublic TVನರೇಂದ್ರ ಬಾಬುಪಬ್ಲಿಕ್ ಟಿವಿಬಿಎಸ್‍ವೈಬಿಜೆಪಿಬೆಂಗಳೂರುಬೈಕ್ ರ‍್ಯಾಲಿಸೇರ್ಪಡೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
7 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
33 minutes ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
46 minutes ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
9 hours ago
CEASEFIRE New
Latest

ಮಾತಾಡಿದ್ರೆ ಬಗೆಹರಿಯದೇ ಇರೋದೇನಿದೆ? – ಜಗತ್ತಿನ ಪ್ರಮುಖ ಕದನ ವಿರಾಮಗಳು

Public TV
By Public TV
10 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?