ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ನೇಮಕವಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸ ಮುಂದೆ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಹೊಡೆದು ಸಂಭ್ರಮಾಚರಣೆ ಮಾಡಿದ್ದಾರೆ. ಆದರೆ ಈಗ ಡಿಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಮಾಜಿ ಮೇಯರ್ ಪದ್ಮಾವತಿಗೆ ಸಂತಸ ತಂದಿದೆ.
ಡಿಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನ ಘೋಷಣೆ ಆಗುತ್ತಿದ್ದಂತೆ ಪದ್ಮಾವತಿ ಅವರ ನಿವಾಸಕ್ಕೆ ಆಗಮಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ನಿವಾಸದ ಮನೆ ಮುಂದೆ, ಅಕ್ಕಪಕ್ಕ ಇದ್ದ ನಿವಾಸದವರಿಗೂ ಸಿಹಿ ಹಂಚಿ ಡಿಕೆ ಪರ ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.
ಇನ್ನೂ ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಮೇಯರ್ ಪದ್ಮಾವತಿ, ಡಿಕೆ ಶಿವಕುಮಾರ್ ಸಾಹೇಬ್ರಿಗೆ ಕೆಪಿಸಿಸಿ ಪಟ್ಟ ಸಿಗುತ್ತೆ ಎಂದು ನಿರೀಕ್ಷೆ ಇತ್ತು. ಇಂದು ಅದು ದಕ್ಕಿದೆ. ಒಳ್ಳೆಯವರಿಗೆ ಯಾವತ್ತು ಒಳ್ಳೆದಾಗುತ್ತೆ. ಏನೇ ಭಿನ್ನಾಭಿಪ್ರಾಯಗಳು ಇದ್ದರು ಅದನ್ನು ಸರಿಪಡಿಸಿಕೊಂಡು ಹೋಗುತ್ತಾರೆ. ಪಕ್ಷ ಸಂಘಟನೆ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.