ಬಳ್ಳಾರಿ: ಹೊಸಪೇಟೆ ತಾಲೂಕಿನಲ್ಲಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (BDCC) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ (Anand Singh) ಅವರು ರಾಜಿನಾಮೆ ಸಲ್ಲಿಸಿದ್ದಾರೆ.
ಬ್ಯಾಂಕಿನ ಶತಮಾನೋತ್ಸವ ಸಮಯದಲ್ಲಿ ಅಧ್ಯಕ್ಷ ಸ್ಥಾನ ವಹಿಸಿದ್ದ ಆನಂದ್ ಸಿಂಗ್ ಅವರು ರಾಜಿನಾಮೆ ಸಲ್ಲಿಸಿದ್ದು, ಸದ್ಯ ರಾಜಿನಾಮೆ ಪತ್ರ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಫ್ಲೈಓವರ್ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ
ವಿಧಾನಸಭಾ ಚುನಾವಣೆ (Vidhan Sabha Election) ಬಳಿಕ ಯಾವುದೇ ಕಾರ್ಯಕ್ರಮಕ್ಕೂ ಆನಂದ್ ಸಿಂಗ್ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಬಿಡಿಸಿಸಿ ಬ್ಯಾಂಕ್ ಅಧಿಕಾರದ ಅವಧಿ ಇನ್ನೂ ಎರಡು ವರ್ಷಗಳ ಕಾಲ ಇದ್ದು, ಅವಧಿ ಮುನ್ನವೇ ರಾಜೀನಾಮೆ ನೀಡಿದ್ದು ಹಲವಾರು ಅನುಮಾನಕ್ಕೆ ಕಾರಣವಾಗಿದೆ.
ಕಳೆದ ಚುನಾವಣೆಯಲ್ಲಿ ಮಗನ ಸೋಲಿನ ಬಳಿಕ ಯಾವುದೇ ರಾಜಕೀಯ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಭಾಗಿಯಾಗಿಲ್ಲ. ಹೀಗಾಗಿ ಆನಂದ್ ಸಿಂಗ್ ರಾಜಕೀಯ ನಿವೃತ್ತಿ ಪಡೆದ್ರಾ ಎನ್ನುವ ಪ್ರಶ್ನೆ ಎದ್ದಿದೆ.
Web Stories