ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ರೆ ದೇಶ ಉದ್ಧಾರ ಆಗಲ್ಲ: ಬಸವರಾಜ ರಾಯರೆಡ್ಡಿ

Public TV
1 Min Read
Basavaraj Rayareddy Ram mandira 1

– ಪ್ರಧಾನಿ ಮೋದಿಗೆ ಏನೂ ಗೊತ್ತಿಲ್ಲ, ಆದ್ರೂ ದೇಶ ಆಳುತ್ತಿದ್ದಾರೆ

ಕೊಪ್ಪಳ: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದರೇ ದೇಶ ಉದ್ಧಾರ ಆಗಲ್ಲ. ಶಾಲೆ ಕಟ್ಟಿದರೆ ಉದ್ಧಾರವಾಗುತ್ತದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವರು, ಮಂದಿರ, ಮಸೀದಿ ಹಾಗೂ ಚರ್ಚ್ ಕಟ್ಟುವುದು ರಾಜಕೀಯ ಪಕ್ಷದ ಕೆಲಸವಲ್ಲ. ದೇಶ ಕಟ್ಟುವುದು ಸರ್ಕಾರದ ಮುಖ್ಯ ಗುರಿಯಾಗಿರಬೇಕು. ಹೀಗಿದ್ದರೂ ರಾಮ ಮಂದಿರ ನಿರ್ಮಾಣದಲ್ಲಿ ಪಕ್ಷಗಳು ಭಾಗವಹಿಸುತ್ತಿರುವುದು ದೊಡ್ಡ ದುರ್ದೈವ ಎಂದು ಕಿಡಿಕಾರಿದರು. ಇದನ್ನು ಓದಿ: ಕೇಂದ್ರ ಸರ್ಕಾರ ಬಿದ್ದರೂ ಪರವಾಗಿಲ್ಲ, ಮಂದಿರ ಕಟ್ಟಿ: ಪೇಜಾವರಶ್ರೀ

BASAVARAJA RAYAREDDY 1

ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ದುರ್ದೈವ. ಈ ರೀತಿಯ ಬೆಳವಣಿಗೆಯಿಂದ ಮುಂದಿನ ದಿನಮಾನಗಳಲ್ಲಿ ದೇಶಕ್ಕೆ ದೊಡ್ಡ ದುರಂತ ಕಾದಿದೆ ಎಂದ ಸಚಿವರು, ಬಿಜೆಪಿ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜಾರಿಗೆ ತಂದ ಯೋಜನೆಗಳನ್ನೇ ಮುಂದುವರಿಸಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏನೂ ಗೊತ್ತಿಲ್ಲ. ಆದರೂ ದೇಶ ಆಳುತ್ತಿರುವುದು ದೊಡ್ಡ ದುರಂತ. ಬಿಜೆಪಿಯವರು ಧರ್ಮ, ಜಾತಿ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದಾಗಿ ರಾಜಕೀಯ ತೀರ ಕೆಳಮಟ್ಟಕ್ಕೆ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

25057 narendra modi ians

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *