Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

Bengaluru City

ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

Public TV
Last updated: February 23, 2024 8:31 pm
Public TV
Share
3 Min Read
C.T.RAVI
SHARE

ಬೆಂಗಳೂರು: ಗೋಧ್ರಾ ಮಾದರಿಯಲ್ಲಿ ರೈಲನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ ಪ್ರಕರಣದ ಸಮಗ್ರ ತನಿಖೆ ಮಾಡುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಆಗ್ರಹಿಸಿದರು.

ನಗರದ ರೇಸ್ ಕೋರ್ಸ್ ರಸ್ತೆಯ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಇಂದು (ಶುಕ್ರವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಿಂದ ವಾಪಸಾಗುತ್ತಿದ್ದ ವಿಶೇಷ ರೈಲಿಗೆ ಹೊಸಪೇಟೆಯಲ್ಲಿ ಒಬ್ಬ ಮತಾಂಧ ವ್ಯಕ್ತಿ ಹತ್ತಿದ್ದ. ಅಯೋಧ್ಯೆಗೆ ತೆರಳಿ ಹಿಂತಿರುಗುತ್ತಿದ್ದ ರಾಮಭಕ್ತರನ್ನು ಬೆದರಿಸಿ ಗೋಧ್ರಾ ಮಾದರಿಯಲ್ಲಿ ನಿಮ್ಮನ್ನೆಲ್ಲ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಎಲ್ಲ ರಾಮಭಕ್ತರು ಸೇರಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರೂ ಕೂಡ ಆರೋಪಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ

AYODHYA RAM MANDIR 1

ಎಲ್ಲ ರಾಮಭಕ್ತರು ಸೇರಿ ಪ್ರತಿಭಟನೆ ಮಾಡಿದ ಬಳಿಕ ಸಿಸಿಟಿವಿ ಫೂಟೇಜ್ ಆಧರಿಸಿ ಆರೋಪಿಯನ್ನು ಬಂಧಿಸಿದ ಮಾಹಿತಿ ಇದೆ ಎಂದ ಅವರು, ಗೋಧ್ರಾ ಮಾದರಿಯಲ್ಲಿ ಹತ್ಯಾಕಾಂಡ ನಡೆಸುವ ಬೆದರಿಕೆ ಹಾಕುವಂಥ ಮನಸ್ಥಿತಿ ಏಕಾಏಕಿ ಬಂದಿರುತ್ತದೆ ಎಂದು ಭಾವಿಸಬಾರದು. ಇದರ ಹಿಂದೆ ಯಾವುದೋ ಪಿತೂರಿ ಆಗಿರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಿದರು.

ಈಚೆಗೆ ರಾಮನಗರದಲ್ಲಿ ವಕೀಲನೊಬ್ಬ ವಾರಣಾಸಿ ಜ್ಞಾನವಾಪಿಗೆ ಸಂಬಂಧಿಸಿ ನ್ಯಾಯಾಲಯ ಕೊಟ್ಟ ತೀರ್ಪನ್ನು ವಿರೋಧಿಸಲು ಬಳಸಿದ ಭಾಷೆ, ಈಗ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕೃತ್ಯ- ಇವು ಕೇವಲ ಪ್ರತ್ಯೇಕ ಘಟನೆ ಎಂದು ಭಾವಿಸಬಾರದು. ಇದರ ಹಿಂದೆ ಪಿತೂರಿಯ ಸಾಧ್ಯತೆಗಳಿರುತ್ತವೆ. ‘ಕಾಲ ಮಿಂಚಿ ಹೋದ ಮೇಲೆ ಚಿಂತಿಸಿ ಫಲವಿಲ್ಲ’ ಎಂಬ ಗಾದೆ ಮಾತಿದೆ. ಹಾಗಾಗಿ ಅನಾಹುತ ಆಗುವುದಕ್ಕೂ ಮುಂಚೆ ಎಚ್ಚರಿಕೆ ವಹಿಸಬೇಕು. ಅದಕ್ಕಾಗಿ ಸಮಗ್ರ ತನಿಖೆ ನಡೆಸಲು ಆಗ್ರಹಿಸುವುದಾಗಿ ಹೇಳಿದರು. ಇದನ್ನೂ ಓದಿ: ಡಾ.ಮಂಜುನಾಥ್ ಏನು ತೀರ್ಮಾನ ಮಾಡ್ತಾರೆ ಎಂದು ಸಮಯ ಬಂದಾಗ ನೋಡೋಣ: ಹೆಚ್‍ಡಿಕೆ

Ayodhya Ram Lalla

ಪೊಲೀಸರ ಕರ್ತವ್ಯಲೋಪ- ಕ್ರಮಕ್ಕೆ ಒತ್ತಾಯ
ರಾಮಭಕ್ತರೇ ಆರೋಪಿಯನ್ನು ಹಿಡಿದುಕೊಟ್ಟ ನಂತರ ಕೂಡ ಪೊಲೀಸರು ವಶಕ್ಕೆ ತೆಗೆದುಕೊಳ್ಳದೆ, ಅವನು ತಪ್ಪಿಸಿಕೊಳ್ಳಲು ಕಾರಣರಾಗಿದ್ದು ಗಂಭೀರವಾಗಿ ಪರಿಗಣಿಸಬೇಕಾದ ಸಂಗತಿ. ಸ್ಥಳದಲ್ಲಿದ್ದ ಪೊಲೀಸರು ಕರ್ತವ್ಯಲೋಪ ಎಸಗಿದ್ದಾರೆ. ಅವರ ಮೇಲೂ ಕ್ರಮ ಕೈಗೊಳ್ಳಿ ಎಂದು ಸಿ.ಟಿ.ರವಿ ಅವರು ಒತ್ತಾಯಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಹರಿಪ್ರಸಾದ್ ಅವರು, ರಾಜ್ಯಸಭಾ ಸದಸ್ಯರೂ ಆಗಿದ್ದರು. ಅವರಿಗೆ ಬರುವ ಮಾಹಿತಿಯನ್ನು ಸುಮ್ಮನೆ ಹೇಳಿದ್ದಾರೆ ಅಂದುಕೊಳ್ಳಬಾರದು. ಅವರನ್ನು ಕೂಡ ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಒಳಪಡಿಸಿ ಎಂದಿದ್ದೆ. ಈಗ ನಡೆದ ಘಟನೆ ಕೇವಲ ಕಾಕತಾಳೀಯ ಆಗಿರಲಾರದು. ಹಾಗಾಗಿ ಹೊಸಪೇಟೆಯಲ್ಲಿ ಬಂಧಿಸಿದ ವ್ಯಕ್ತಿ ಮಾತ್ರವಲ್ಲದೆ ಹರಿಪ್ರಸಾದರನ್ನೂ ತನಿಖೆಗೆ ಒಳಪಡಿಸಿ ಗೋಧ್ರಾ ಮಾದರಿ ಹತ್ಯೆ ಎಂಬ ಅವರ ಹೇಳಿಕೆಗೆ ಸುದ್ದಿ ಮೂಲ ಏನು ಎಂದು ತಿಳಿದುಕೊಳ್ಳಬೇಕಿದೆ. ಪೊಲೀಸರಿಗೆ ಮಾಹಿತಿ ಹಂಚಿಕೊಳ್ಳುವುದು ಅವರ ಕರ್ತವ್ಯ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಜೊತೆಗೆ, ಈ ವಿಷಯದಲ್ಲಿ ತನಿಖೆಗೆ ನೋಟಿಸ್ ಕೊಟ್ಟಾಗ ಹರಿಪ್ರಸಾದ್ ಉರಿದುಬಿದ್ದಿದ್ದರು. ಈಗ ಆಗಿರುವ ಘಟನೆ ಗಮನಿಸಿದಾಗ ಇದನ್ನು ಲಘುವಾಗಿ ಪರಿಗಣಿಸದೆ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ರಾಜ್ಯದ ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆಯ ವರಿಷ್ಠಾಧಿಕಾರಿಗಳನ್ನು ಆಗ್ರಹಿಸುವುದಾಗಿ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳಿದೆ, ನಮ್ಮ ನಿರ್ಣಯ ಅಂಗೀಕಾರ ಆಗಿದೆ: ಬೊಮ್ಮಾಯಿ ತಿರುಗೇಟು

bjp flag

ತುಘಲಕ್‍ನಿಂದ ಪ್ರೇರಣೆ ಪಡೆದ ಸರ್ಕಾರ?
ಕಳೆದ 10-15 ದಿನಗಳಿಂದ ರಾಜ್ಯ ಸರ್ಕಾರವು ಯಾವ ರೀತಿ ಸುತ್ತೋಲೆ ಹೊರಡಿಸುತ್ತಿದೆ, ಯಾವ ರೀತಿ ವಾಪಸ್ ಪಡೆಯುತ್ತದೆ ಎಂಬುದನ್ನು ನೋಡಿದಾಗ ಇದು ಮಹಮ್ಮದ್ ಬಿನ್ ತುಘಲಕ್ ನೀತಿಯಂತೆ ಭಾಸವಾಗುತ್ತಿದೆ. ಆತ ಬೆಳಿಗ್ಗೆ ಒಂದು ಸುತ್ತೋಲೆ ಹೊರಡಿಸಿ ಸಂಜೆ ಅದನ್ನು ವಾಪಸ್ ಪಡೆಯುತ್ತಿದ್ದನಂತೆ. ಆತ ದೆಹಲಿಯಿಂದ ದೌಲತಾಬಾದ್‍ಗೆ ತನ್ನ ರಾಜಧಾನಿಯನ್ನು ಸ್ಥಳಾಂತರಿಸಿದ್ದ. ಜನ, ಜಾನುವಾರು ಸಮೇತ ಹೋಗಲು ಸೂಚಿಸಿದ್ದನಂತೆ. ಸ್ಥಳಾಂತರದ ವೇಳೆ ಅರ್ಧ ಜನ ಜೀವ ಕಳಕೊಂಡರಂತೆ. ಸ್ವಲ್ಪ ದಿನದ ಬಳಿಕ ನಿರ್ಣಯ ವಾಪಸ್ ಪಡೆದು, ಮತ್ತೆ ಅಲ್ಲಿಗೇ ಹೋಗಲು ತಿಳಿಸಿದನಂತೆ. ಆಗ ಇನ್ನೂ ಒಂದಷ್ಟು ಜನ ಸತ್ತರಂತೆ. ಇದನ್ನು ತುಘಲಕ್ ನೀತಿ ಎನ್ನುತ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರವು ಕೂಡ ಮಹಮ್ಮದ್ ಬಿನ್ ತುಘಲಕ್‌ನಿಂದ ಪ್ರೇರಣೆ ಪಡೆದಂತಿದೆ ಎಂದು ವ್ಯಂಗ್ಯವಾಡಿದರು.

ಆ ಪ್ರೇರಣೆ ಪಡೆದೇ ಯುಗಾದಿ, ರಂಜಾನ್ ಮತ್ತಿತರ ಸಾಂಸ್ಕೃತಿಕ ಹಬ್ಬಗಳನ್ನು ಆಚರಿಸದೆ ಇರಲು ಸುತ್ತೋಲೆ ಹೊರಡಿಸಿದ್ದರು. ಆಮೇಲೆ ಅದನ್ನು ವಾಪಸ್ ಪಡೆದರು. ಕುವೆಂಪು ಅವರ ಕಾವ್ಯದಿಂದ ಪ್ರೇರಣೆ ಪಡೆದು ಹಾಕಿದ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಘೋಷವಾಕ್ಯ ಬದಲಿಸುತ್ತಾರೆ. ಆದೇಶ ಮಾಡಿ ಜನವಿರೋಧ ವ್ಯಕ್ತ ಆಗುತ್ತಿದ್ದಂತೆ ಹಾಗೇ ಸುಮ್ಮನೆ ಎಂದು ಹೇಳಿ ವಾಪಸ್ ಪಡೆಯುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಲೋಕಸಭೆಗೆ ಬೆಂಗಳೂರು ಗ್ರಾಮಾಂತರದಿಂದ ಡಾ.ಮಂಜುನಾಥ್‌ ಸ್ಪರ್ಧೆ? – ಆರ್‌.ಅಶೋಕ್‌ ಹೇಳಿದ್ದೇನು?

TAGGED:bjpc t ravicongress
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Belagavi 2
Belgaum

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ

Public TV
By Public TV
33 minutes ago
Sunita Williams 1
Latest

608 ದಿನ, 3 ಮಿಷನ್‌, 9 ಬಾಹ್ಯಾಕಾಶ ನಡಿಗೆ – 27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

Public TV
By Public TV
48 minutes ago
Lady Influencer Arrest
Bengaluru City

ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಮೆಸೇಜ್ – ಯುವತಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ ಆರೋಪಿ ಅರೆಸ್ಟ್

Public TV
By Public TV
57 minutes ago
Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
2 hours ago
RTO 3
Bengaluru City

ತೆರಿಗೆ ವಂಚನೆ – ನೂರಾರು ಖಾಸಗಿ ಬಸ್‌ಗಳು ಸೀಜ್

Public TV
By Public TV
2 hours ago
Ramalinga Reddy Meeting
Bengaluru City

ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?