Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

Public TV
Last updated: February 23, 2024 8:31 pm
Public TV
Share
3 Min Read
C.T.RAVI
SHARE

ಬೆಂಗಳೂರು: ಗೋಧ್ರಾ ಮಾದರಿಯಲ್ಲಿ ರೈಲನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ ಪ್ರಕರಣದ ಸಮಗ್ರ ತನಿಖೆ ಮಾಡುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಆಗ್ರಹಿಸಿದರು.

ನಗರದ ರೇಸ್ ಕೋರ್ಸ್ ರಸ್ತೆಯ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಇಂದು (ಶುಕ್ರವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಿಂದ ವಾಪಸಾಗುತ್ತಿದ್ದ ವಿಶೇಷ ರೈಲಿಗೆ ಹೊಸಪೇಟೆಯಲ್ಲಿ ಒಬ್ಬ ಮತಾಂಧ ವ್ಯಕ್ತಿ ಹತ್ತಿದ್ದ. ಅಯೋಧ್ಯೆಗೆ ತೆರಳಿ ಹಿಂತಿರುಗುತ್ತಿದ್ದ ರಾಮಭಕ್ತರನ್ನು ಬೆದರಿಸಿ ಗೋಧ್ರಾ ಮಾದರಿಯಲ್ಲಿ ನಿಮ್ಮನ್ನೆಲ್ಲ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಎಲ್ಲ ರಾಮಭಕ್ತರು ಸೇರಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರೂ ಕೂಡ ಆರೋಪಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ

AYODHYA RAM MANDIR 1

ಎಲ್ಲ ರಾಮಭಕ್ತರು ಸೇರಿ ಪ್ರತಿಭಟನೆ ಮಾಡಿದ ಬಳಿಕ ಸಿಸಿಟಿವಿ ಫೂಟೇಜ್ ಆಧರಿಸಿ ಆರೋಪಿಯನ್ನು ಬಂಧಿಸಿದ ಮಾಹಿತಿ ಇದೆ ಎಂದ ಅವರು, ಗೋಧ್ರಾ ಮಾದರಿಯಲ್ಲಿ ಹತ್ಯಾಕಾಂಡ ನಡೆಸುವ ಬೆದರಿಕೆ ಹಾಕುವಂಥ ಮನಸ್ಥಿತಿ ಏಕಾಏಕಿ ಬಂದಿರುತ್ತದೆ ಎಂದು ಭಾವಿಸಬಾರದು. ಇದರ ಹಿಂದೆ ಯಾವುದೋ ಪಿತೂರಿ ಆಗಿರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಿದರು.

ಈಚೆಗೆ ರಾಮನಗರದಲ್ಲಿ ವಕೀಲನೊಬ್ಬ ವಾರಣಾಸಿ ಜ್ಞಾನವಾಪಿಗೆ ಸಂಬಂಧಿಸಿ ನ್ಯಾಯಾಲಯ ಕೊಟ್ಟ ತೀರ್ಪನ್ನು ವಿರೋಧಿಸಲು ಬಳಸಿದ ಭಾಷೆ, ಈಗ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕೃತ್ಯ- ಇವು ಕೇವಲ ಪ್ರತ್ಯೇಕ ಘಟನೆ ಎಂದು ಭಾವಿಸಬಾರದು. ಇದರ ಹಿಂದೆ ಪಿತೂರಿಯ ಸಾಧ್ಯತೆಗಳಿರುತ್ತವೆ. ‘ಕಾಲ ಮಿಂಚಿ ಹೋದ ಮೇಲೆ ಚಿಂತಿಸಿ ಫಲವಿಲ್ಲ’ ಎಂಬ ಗಾದೆ ಮಾತಿದೆ. ಹಾಗಾಗಿ ಅನಾಹುತ ಆಗುವುದಕ್ಕೂ ಮುಂಚೆ ಎಚ್ಚರಿಕೆ ವಹಿಸಬೇಕು. ಅದಕ್ಕಾಗಿ ಸಮಗ್ರ ತನಿಖೆ ನಡೆಸಲು ಆಗ್ರಹಿಸುವುದಾಗಿ ಹೇಳಿದರು. ಇದನ್ನೂ ಓದಿ: ಡಾ.ಮಂಜುನಾಥ್ ಏನು ತೀರ್ಮಾನ ಮಾಡ್ತಾರೆ ಎಂದು ಸಮಯ ಬಂದಾಗ ನೋಡೋಣ: ಹೆಚ್‍ಡಿಕೆ

Ayodhya Ram Lalla

ಪೊಲೀಸರ ಕರ್ತವ್ಯಲೋಪ- ಕ್ರಮಕ್ಕೆ ಒತ್ತಾಯ
ರಾಮಭಕ್ತರೇ ಆರೋಪಿಯನ್ನು ಹಿಡಿದುಕೊಟ್ಟ ನಂತರ ಕೂಡ ಪೊಲೀಸರು ವಶಕ್ಕೆ ತೆಗೆದುಕೊಳ್ಳದೆ, ಅವನು ತಪ್ಪಿಸಿಕೊಳ್ಳಲು ಕಾರಣರಾಗಿದ್ದು ಗಂಭೀರವಾಗಿ ಪರಿಗಣಿಸಬೇಕಾದ ಸಂಗತಿ. ಸ್ಥಳದಲ್ಲಿದ್ದ ಪೊಲೀಸರು ಕರ್ತವ್ಯಲೋಪ ಎಸಗಿದ್ದಾರೆ. ಅವರ ಮೇಲೂ ಕ್ರಮ ಕೈಗೊಳ್ಳಿ ಎಂದು ಸಿ.ಟಿ.ರವಿ ಅವರು ಒತ್ತಾಯಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಹರಿಪ್ರಸಾದ್ ಅವರು, ರಾಜ್ಯಸಭಾ ಸದಸ್ಯರೂ ಆಗಿದ್ದರು. ಅವರಿಗೆ ಬರುವ ಮಾಹಿತಿಯನ್ನು ಸುಮ್ಮನೆ ಹೇಳಿದ್ದಾರೆ ಅಂದುಕೊಳ್ಳಬಾರದು. ಅವರನ್ನು ಕೂಡ ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಒಳಪಡಿಸಿ ಎಂದಿದ್ದೆ. ಈಗ ನಡೆದ ಘಟನೆ ಕೇವಲ ಕಾಕತಾಳೀಯ ಆಗಿರಲಾರದು. ಹಾಗಾಗಿ ಹೊಸಪೇಟೆಯಲ್ಲಿ ಬಂಧಿಸಿದ ವ್ಯಕ್ತಿ ಮಾತ್ರವಲ್ಲದೆ ಹರಿಪ್ರಸಾದರನ್ನೂ ತನಿಖೆಗೆ ಒಳಪಡಿಸಿ ಗೋಧ್ರಾ ಮಾದರಿ ಹತ್ಯೆ ಎಂಬ ಅವರ ಹೇಳಿಕೆಗೆ ಸುದ್ದಿ ಮೂಲ ಏನು ಎಂದು ತಿಳಿದುಕೊಳ್ಳಬೇಕಿದೆ. ಪೊಲೀಸರಿಗೆ ಮಾಹಿತಿ ಹಂಚಿಕೊಳ್ಳುವುದು ಅವರ ಕರ್ತವ್ಯ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಜೊತೆಗೆ, ಈ ವಿಷಯದಲ್ಲಿ ತನಿಖೆಗೆ ನೋಟಿಸ್ ಕೊಟ್ಟಾಗ ಹರಿಪ್ರಸಾದ್ ಉರಿದುಬಿದ್ದಿದ್ದರು. ಈಗ ಆಗಿರುವ ಘಟನೆ ಗಮನಿಸಿದಾಗ ಇದನ್ನು ಲಘುವಾಗಿ ಪರಿಗಣಿಸದೆ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ರಾಜ್ಯದ ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆಯ ವರಿಷ್ಠಾಧಿಕಾರಿಗಳನ್ನು ಆಗ್ರಹಿಸುವುದಾಗಿ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳಿದೆ, ನಮ್ಮ ನಿರ್ಣಯ ಅಂಗೀಕಾರ ಆಗಿದೆ: ಬೊಮ್ಮಾಯಿ ತಿರುಗೇಟು

bjp flag

ತುಘಲಕ್‍ನಿಂದ ಪ್ರೇರಣೆ ಪಡೆದ ಸರ್ಕಾರ?
ಕಳೆದ 10-15 ದಿನಗಳಿಂದ ರಾಜ್ಯ ಸರ್ಕಾರವು ಯಾವ ರೀತಿ ಸುತ್ತೋಲೆ ಹೊರಡಿಸುತ್ತಿದೆ, ಯಾವ ರೀತಿ ವಾಪಸ್ ಪಡೆಯುತ್ತದೆ ಎಂಬುದನ್ನು ನೋಡಿದಾಗ ಇದು ಮಹಮ್ಮದ್ ಬಿನ್ ತುಘಲಕ್ ನೀತಿಯಂತೆ ಭಾಸವಾಗುತ್ತಿದೆ. ಆತ ಬೆಳಿಗ್ಗೆ ಒಂದು ಸುತ್ತೋಲೆ ಹೊರಡಿಸಿ ಸಂಜೆ ಅದನ್ನು ವಾಪಸ್ ಪಡೆಯುತ್ತಿದ್ದನಂತೆ. ಆತ ದೆಹಲಿಯಿಂದ ದೌಲತಾಬಾದ್‍ಗೆ ತನ್ನ ರಾಜಧಾನಿಯನ್ನು ಸ್ಥಳಾಂತರಿಸಿದ್ದ. ಜನ, ಜಾನುವಾರು ಸಮೇತ ಹೋಗಲು ಸೂಚಿಸಿದ್ದನಂತೆ. ಸ್ಥಳಾಂತರದ ವೇಳೆ ಅರ್ಧ ಜನ ಜೀವ ಕಳಕೊಂಡರಂತೆ. ಸ್ವಲ್ಪ ದಿನದ ಬಳಿಕ ನಿರ್ಣಯ ವಾಪಸ್ ಪಡೆದು, ಮತ್ತೆ ಅಲ್ಲಿಗೇ ಹೋಗಲು ತಿಳಿಸಿದನಂತೆ. ಆಗ ಇನ್ನೂ ಒಂದಷ್ಟು ಜನ ಸತ್ತರಂತೆ. ಇದನ್ನು ತುಘಲಕ್ ನೀತಿ ಎನ್ನುತ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರವು ಕೂಡ ಮಹಮ್ಮದ್ ಬಿನ್ ತುಘಲಕ್‌ನಿಂದ ಪ್ರೇರಣೆ ಪಡೆದಂತಿದೆ ಎಂದು ವ್ಯಂಗ್ಯವಾಡಿದರು.

ಆ ಪ್ರೇರಣೆ ಪಡೆದೇ ಯುಗಾದಿ, ರಂಜಾನ್ ಮತ್ತಿತರ ಸಾಂಸ್ಕೃತಿಕ ಹಬ್ಬಗಳನ್ನು ಆಚರಿಸದೆ ಇರಲು ಸುತ್ತೋಲೆ ಹೊರಡಿಸಿದ್ದರು. ಆಮೇಲೆ ಅದನ್ನು ವಾಪಸ್ ಪಡೆದರು. ಕುವೆಂಪು ಅವರ ಕಾವ್ಯದಿಂದ ಪ್ರೇರಣೆ ಪಡೆದು ಹಾಕಿದ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಘೋಷವಾಕ್ಯ ಬದಲಿಸುತ್ತಾರೆ. ಆದೇಶ ಮಾಡಿ ಜನವಿರೋಧ ವ್ಯಕ್ತ ಆಗುತ್ತಿದ್ದಂತೆ ಹಾಗೇ ಸುಮ್ಮನೆ ಎಂದು ಹೇಳಿ ವಾಪಸ್ ಪಡೆಯುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಲೋಕಸಭೆಗೆ ಬೆಂಗಳೂರು ಗ್ರಾಮಾಂತರದಿಂದ ಡಾ.ಮಂಜುನಾಥ್‌ ಸ್ಪರ್ಧೆ? – ಆರ್‌.ಅಶೋಕ್‌ ಹೇಳಿದ್ದೇನು?

TAGGED:bjpc t ravicongress
Share This Article
Facebook Whatsapp Whatsapp Telegram

You Might Also Like

Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
4 hours ago
flap adjustment failure British Airways flight from London to Chennai returns to Heathrow Airport
Latest

ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

Public TV
By Public TV
4 hours ago
How 2 Brothers Duped 70000 People Of Rs 2700 Crore Over Smart City
Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
By Public TV
4 hours ago
Karnataka placed first in country for highest wind power capacity Karnataka overtakes Gujarat to take first place Pralhad Joshi KJ George 2
Bengaluru City

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ – ಗುಜರಾತ್‌ ಹಿಂದಿಕ್ಕಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Public TV
By Public TV
5 hours ago
rain weather
Districts

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ – ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

Public TV
By Public TV
6 hours ago
AI ಚಿತ್ರ
Chikkamagaluru

ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?