ಮೈಸೂರು: ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪರನ್ನ ಮತ್ತೆ ಹೊಗಳಿದ್ದಾರೆ. ಅಲ್ಲದೆ ಮಂತ್ರಿ ಸ್ಥಾನ ತೆಗೆದುಕೊಳ್ಳೋಕ್ಕೆ 1 ತಿಂಗಳು ಸಿಟ್ಟು ಮಾಡಿಕೊಂಡು ಸಾಕಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ಗುಡುಗಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಟಿಡಿ, ನರೇಂದ್ರ ಮೋದಿ ಅವರು ಈ ದೇಶಕ್ಕೆ ಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅವರು ದೇಶದ ವ್ಯಕ್ತಿ ಹಾಗೂ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಮೋದಿ ಅವರು ಕಾಶ್ಮೀರ ಸಮಸ್ಯೆಯನ್ನು ಯಾವ ರೀತಿ ಮಾಡುತ್ತಿದ್ದಾರೆ ಎಂಬುದನ್ನು ನೋಡಿದ್ದೀರಿ. ಅವರು ದೇಶದ ಅಭಿವೃದ್ಧಿಯತ್ತ ನೋಡುತ್ತಿದ್ದಾರೆ. ಅವರ ಬಗ್ಗೆ ಒಳ್ಳೆಯ ಮಾತನಾಡಿದರೆ ಬಿಜೆಪಿ ಎಂದು ಹೇಳುತ್ತಾರೆ. ಆದರೆ ಮೋದಿ ಅವರು ಈ ದೇಶದ ವ್ಯಕ್ತಿ, ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರ ಬಗ್ಗೆ ಒಳ್ಳೆಯದಾಗಿ ಮಾತನಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಯಡಿಯೂರಪ್ಪ ಬಂದ ಮೇಲೆ ಚೆನ್ನಾಗಿ ಮಳೆ ಬೆಳೆ ಆಗಿದೆ- ಬಿಎಸ್ವೈನ್ನು ಹಾಡಿಹೊಗಳಿದ ಜಿಟಿಡಿ
ನಾನು ಯಡಿಯೂರಪ್ಪ ಅವರ ಬಗ್ಗೆ ಏಕೆ ಮಾತನಾಡುತ್ತೇನೆ ಎಂದರೆ, ನಾನು 36 ಸಾವಿರ ಮತಗಳ ಅಂತರದಲ್ಲಿ ಗೆದ್ದು ಮಂತ್ರಿ ಸ್ಥಾನ ತೆಗೆದುಕೊಳ್ಳಲು ಒಂದು ತಿಂಗಳು ಮುನಿಸು ಕಟ್ಟಿಕೊಂಡಿದೆ. ಆದರೆ ಯಡಿಯೂರಪ್ಪ ಅವರು ನಾನು ಸೋತಾಗ ಮನೆಗೆ ಕರೆಸಿಕೊಂಡು ನೀನು ಆಗಬೇಕೆಂದು ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರು. ಗೃಹ ಮಂಡಳಿ ಅಧ್ಯಕ್ಷ ಆದಾಗ ಸೋಮಣ್ಣ ಅವರು ವಸತಿ ಸಚಿವರಾಗಿದ್ದರು. ಇದು ಕಾಕತಾಳಿಯ ಈಗ ಅವರೇ ಉಸ್ತುವಾರಿ ಸಚಿವರಾಗಿದ್ದಾರೆ. ಅದು ನನ್ನ ಹಾಗೂ ಅವರ ಸ್ನೇಹ ಎಂದು ಜಿ.ಟಿ ದೇವೇಗೌಡ ಅವರು ಹೇಳಿದರು.