Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಂಪಿ ಉತ್ಸವ ಕೈಬಿಟ್ಟ ದೋಸ್ತಿ ಸರ್ಕಾರಕ್ಕೆ ಜನಾರ್ದನ ರೆಡ್ಡಿ ನೇರ ಸವಾಲು

Public TV
Last updated: December 3, 2018 5:40 pm
Public TV
Share
4 Min Read
REDDY
SHARE

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ. ಹಂಪಿ ಉತ್ಸವ ಕೈಬಿಡುವ ನಿಲುವಿಗೆ ಜನಾರ್ದನ ರೆಡ್ಡಿ ಫೇಸ್‍ಬುಕ್‍ನಲ್ಲಿ ಕಿಡಿಕಾರಿದ್ದಾರೆ.

ಕೋಟಿ ಕೋಟಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ಮಾಡ್ತೀರಿ. ಉಪ ಚುನಾವಣೆ ಗೆಲ್ಲೋದಕ್ಕೆ ನೀರಿನಂತೆ ಹಣ ಖರ್ಚು ಮಾಡ್ತೀರಿ. ಅವೆಲ್ಲದಕ್ಕೂ ಇರದ ಬರ, ಹಂಪಿ ಉತ್ಸವದ ವಿಚಾರಕ್ಕೆ ಏಕೆ ಬರುತ್ತೆ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಹಂಪಿ ಉತ್ಸವ ಮಾಡಲು ನಿಮ್ಮ ಕೈಲಿ ಆಗಲಿಲ್ಲ ಅಂದ್ರೆ ಹೇಳಿ. ನಾನು ದುಡ್ಡು ಕೊಡ್ತೇನೆ. ಹಂಪಿ ಉತ್ಸವ ನಡೆಸಿ ಅಂತ ದೋಸ್ತಿ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

ಬಳ್ಳಾರಿಗೆ ನಾನು ಬರಲು ಸಾಧ್ಯವಾಗದಿದ್ದರೂ ಕೂಡ ಜಿಲ್ಲೆಯ ಜನರಿಗೋಸ್ಕರ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ.

HAMPI 3

ರೆಡ್ಡಿ ಪೋಸ್ಟ್ ನಲ್ಲೇನಿದೆ?:
ಹಂಪಿ ಉತ್ಸವ 3 ದಿನ ಅದ್ಧೂರಿಯಾಗಿಯೇ ನಡೆಯಲಿ. ನಾಡಿನಲ್ಲಿ ವಿವಿಧೆಡೆ ಉತ್ಸವಗಳನ್ನು ಆಚರಿಸಲು ಉತ್ಸುಕತೆ ತೋರುತ್ತಿರುವ ರಾಜ್ಯ ಸರ್ಕಾರ, ಕೇವಲ 3 ದಿನ ನಡೆಯುವ ಹಂಪಿ ಉತ್ಸವ ವಿಷಯದಲ್ಲಿ ಏನಾದರೂ ಒಂದು ಕುಂಟು ನೆಪ ಹೇಳುತ್ತಿರುವುದು ದುರಾದೃಷ್ಟಕರ. ನಾಡಿನ ವಿವಿಧ ಉತ್ಸವಗಳನ್ನು ನಡೆಸುವ ಸರ್ಕಾರ ಹಂಪಿ ಉತ್ಸವ ಆಚರಿಸಲು ಏನಾದರೊಂದು ನೆಪ ಹೇಳುತ್ತಲೇ ಬರುತ್ತಿದೆ. ಇಡೀ ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿರುವ ಹಂಪಿ ಉತ್ಸವ ರಾಜ್ಯದ ಜನತೆಗೆ ಅದರಲ್ಲೂ ಉತ್ತರ ಕರ್ನಾಟಕದ ಜನತೆಗೆ ಭಾವನಾತ್ಮಕವಾದ ಬೆಸುಗೆಯನ್ನು ಬೆಸೆಯುವಂಥದ್ದಾಗಿದೆ.

ಇದು ವ್ಯವಸ್ಥಿತವಾಗಿ ಸರ್ಕಾರದಿಂದ ಮತ್ತು ಕೆಲ ಸಚಿವರಿಂದ ಬಳ್ಳಾರಿಗರನ್ನು ಅದರಲ್ಲೂ ಉತ್ತರ ಕರ್ನಾಟಕದ ಜನರನ್ನು ಕಡೆಗಣಿಸುವ ಪ್ರಯತ್ನವಾಗಿದೆ. ನವೆಂಬರ್ 3 ರಂದು ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ?. ಬಿಜೆಪಿಯ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಭಿನ್ನವಿಸಿಕೊಂಡರೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ?

vlcsnap 2018 12 03 17h33m55s195

ಉಪಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ?. ಹಂಪಿ ಉತ್ಸವಕ್ಕೆ ತನ್ನದೇ ಆದ ಇತಿಹಾಸವಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಎಂ.ಪಿ. ಪ್ರಕಾಶ್ ಅವರು ಹಂಪಿ ಉತ್ಸವವನ್ನು ಮೊಟ್ಟ ಮೊದಲ ಬಾರಿಗೆ 1988ರಲ್ಲಿ ಆಚರಿಸಲು ಅವಕಾಶ ನೀಡಿದ್ದರು. ಇದಕ್ಕೂ ಮುನ್ನ ದಾಸಶ್ರೇಷ್ಠರೂ, ಮನುಕುಲದ ಸಾಮಾಜಿಕ ಚಿಕಿತ್ಸಕರೂ ಆದ ಕನಕ-ಪುರಂದರರ ಉತ್ಸವ ನಡೆಯುತ್ತಿತ್ತು. ಹಂಪಿ ಉತ್ಸವದ ವ್ಯಾಪ್ತಿಯನ್ನು ದೇಶದುದ್ದಕ್ಕೂ ಪಸರಿಸುವಂತೆ ಮಾಡಿದ ಕೀರ್ತಿ ಎಂ.ಪಿ.ಪ್ರಕಾಶ್ ಅವರಿಗೆ ಸಲ್ಲುತ್ತದೆ.

ಜನರ ಭಾವನೆಗಳನ್ನು ಪರಸ್ಪರ ಪ್ರೀತಿ, ಪ್ರೇಮ, ಸಾಮರಸ್ಯದೊಂದಿಗೆ ಸಮೀಕರಿಸುವ ಈ ಸಾಂಸ್ಕೃತಿಕ ಹಬ್ಬವನ್ನು ಕಡೆಗಣಿಸುವ ಮೂಲಕ ಸರ್ಕಾರ ಜನರ, ಕಲಾವಿದರ, ರೈತರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಸರ್ಕಾರದ ಈ ಕ್ರಮದಿಂದ ಬೇಸತ್ತಿರುವ ಮಠಾಧೀಶರೇ ಇಂದು ಬೀದಿಗೆ ಇಳಿದು ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯ ದ್ಯೋತಕವಾದ ಹಂಪಿ ಉತ್ಸವ ಆಚರಿಸಲು ಭಿಕ್ಷೆ ಯಾಚಿಸುತ್ತಿದ್ದಾರೆ. ಮಾಗಳ ಗ್ರಾಮದ ಶ್ರೀ ಮಳೆಯೋಗೀಶ್ವರ ಸ್ವಾಮಿಗಳು ಭಿಕ್ಷೆ ಬೇಡುವ ಮೂಲಕ ಕಲಾವಿದರ ಬೆನ್ನಿಗೆ ನಿಂತಿದ್ದಾರೆ. ಹಂಪಿ ಉತ್ಸವ ಆಚರಿಸಲು ಸ್ವಾಮೀಜಿಗಳು ಭಿಕ್ಷೆ ಬೇಡುತ್ತಿದ್ದಾರೆಂದರೆ ಏನು ಅರ್ಥ?

HAMPI 2

ಸರ್ಕಾರ ನಡೆಸುವವರು ಇಲ್ಲಿನ ಜನರನ್ನು, ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಗತಕಾಲದ ಇತಿಹಾಸವನ್ನು ಕಡೆಗಣಿಸುತ್ತಿದ್ದಾರೆಂದೇ ಅರ್ಥವಲ್ಲವೇ? ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಂಪಿ ಉತ್ಸವವನ್ನು ಇಡೀ ಜಗತ್ತೇ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಉತ್ಸವ ಆಚರಿಸಿದ್ದೆವು. ನಾನಾಗ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದೆ. ತದನಂತರ ಉತ್ಸವ ಅದ್ಧೂರಿಯಾಗಿ ನಡೆಯಲೇ ಇಲ್ಲ. ಈಗ ಬರಗಾಲದ ನೆಪ ಹೇಳಿ ಉತ್ಸವ ರದ್ದುಗೊಳಿಸುವುದು ಸರಿಯೇ? ಎಂ.ಪಿ.ಪ್ರಕಾಶರು 3 ದಿನ ನಡೆಸಿದ್ದ ಹಂಪಿ ಉತ್ಸವವನ್ನು ಎರಡು ದಿನ ಆಚರಿಸುವುದು ಸರಿಯೇ? ಕಾಟಾಚಾರಕ್ಕೆ ಹಂಪಿ ಉತ್ಸವ ನಡೆಸದೇ ಅದ್ಧೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ.

ಹಂಪಿ ಉತ್ಸವ ನಮ್ಮ ಹೆಮ್ಮೆಯ ಹಬ್ಬ. ಈ ಉತ್ಸವ ಜನರಲ್ಲಿ ಪ್ರೀತಿ, ಬಾಂಧವ್ಯ, ಉಲ್ಲಾಸಗಳ ಜೊತೆ ಸಾಮರಸ್ಯಗಳನ್ನು ಹೆಚ್ಚಿಸುತ್ತಿದೆ. ಅಷ್ಟೇ ಅಲ್ಲ ಗತವೈಭವದ ಮೆರಗು, ನೆನಪು, ಸ್ಮರಣೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಒಂದು ಪ್ರತೀಕವಾಗಿದೆ. ಹಂಪಿ ಉತ್ಸವ ಯಾವುದೇ ಕಾರಣಕ್ಕೂ ಕಾಟಾಚಾರಕ್ಕೆ ನಡೆಯಬಾರದು. 3 ದಿನವೂ ಅದ್ಧೂರಿಯಾಗಿಯೇ ನಡೆಯಬೇಕು. ಬಳ್ಳಾರಿಗೆ ನಾನು ಬರಲು ಸಾಧ್ಯವಾಗದೇ ಇರುವುದರಿಂದ ನನ್ನ ಸಹಪಾಠಿಗಳ ಜಿಲ್ಲೆಯ ಜನತೆಯ ಕಲಾರಾಧನೆಯ ಉತ್ಸವಕ್ಕೆ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡಲು ಬದ್ಧನಾಗಿದ್ದೇನೆ.

Hampi Utsava DKShi

ಬಳ್ಳಾರಿ ಜಿಲ್ಲೆಯ ಜನರೂ ಸೇರಿದಂತೆ ನೆರೆಯ ವಿವಿಧ ಜಿಲ್ಲೆಗಳ ಜನರು ವರ್ಷದಿಂದ ವರ್ಷಕ್ಕೆ ಕಣ್ಣಲ್ಲಿ ಕಣ್ಣಿಟ್ಟು ಹಂಪಿ ಉತ್ಸವ ಸಡಗರಕ್ಕೆ ಕಾದು ಕುಳಿತಿರುತ್ತಾರೆ. ಅವರಿಗೆಲ್ಲ ನಿರಾಶೆಯಾಗಬಾರದು. ಒಟ್ಟಿನಲ್ಲಿ, ಹಂಪಿ ಉತ್ಸವ 3 ದಿನಗಳ ಕಾಲ ಸಡಗರ, ಸಂಭ್ರಮಗಳಿಂದ ಜರುಗಬೇಕೆನ್ನುವುದೇ ನನ್ನ ಇಚ್ಛೆಯಾಗಿದೆ ಅಂತ ರೆಡ್ಡಿ ಬರೆದುಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurucongressformer ministerhampi utsavJanardhan ReddyjdsPublic TVಕಾಂಗ್ರೆಸ್ಜನಾರ್ದನ ರೆಡ್ಡಿಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮಾಜಿ ಸಚಿವಹಂಪಿ ಉತ್ಸವ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
2 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
22 hours ago

You Might Also Like

Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
3 minutes ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
11 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
21 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
2 hours ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?