Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4 ವರ್ಷ ಜೈಲಲ್ಲಿ ಕೊಳೆಸಿದ್ರು – ಸಿದ್ದರಾಮಯ್ಯಗೆ ಮಾನಮರ್ಯಾದೆ ಇಲ್ಲ ಅಂದ್ರು ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | 4 ವರ್ಷ ಜೈಲಲ್ಲಿ ಕೊಳೆಸಿದ್ರು – ಸಿದ್ದರಾಮಯ್ಯಗೆ ಮಾನಮರ್ಯಾದೆ ಇಲ್ಲ ಅಂದ್ರು ರೆಡ್ಡಿ

Chitradurga

4 ವರ್ಷ ಜೈಲಲ್ಲಿ ಕೊಳೆಸಿದ್ರು – ಸಿದ್ದರಾಮಯ್ಯಗೆ ಮಾನಮರ್ಯಾದೆ ಇಲ್ಲ ಅಂದ್ರು ರೆಡ್ಡಿ

Public TV
Last updated: October 29, 2018 11:54 am
Public TV
Share
4 Min Read
SIDDU REDDY
SHARE

– ದುಡ್ಡು ಸಿಕ್ಕಿದ್ದು ನನ್ನ ಮನೆಯಲ್ಲಿ ಅಲ್ಲ, ಡಿಕೆಶಿ ಮನೆಯಲ್ಲಿ

ಚಿತ್ರದುರ್ಗ: ಜನರ ದಿಕ್ಕು ತಪ್ಪಿಸಿ ಬಳ್ಳಾರಿ ಅಭಿವೃದ್ಧಿ ಮಾಡಲಿಲ್ಲ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನೇ ಮಾಡಿದ್ರು. ನನ್ನ ಜೀವಮಾನದ 4 ವರ್ಷದ ಅಮೂಲ್ಯ ವೇಳೆಯನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿದ್ರು. ನನ್ನ ವಿರುದ್ಧ ಎಷ್ಟು ಸಾವಿರ ಕೋಟಿ ಚಾರ್ಜ್ ಶೀಟ್ ಹಾಕಿದ್ದಾರೆ ಅನ್ನೋದನ್ನ ಜನರಿಗೆ ಹೇಳಲಿ. ನೂರು ಕೋಟಿ ಚಾರ್ಜ್ ಶೀಟ್ ಹಾಕಿ ಜನರನ್ನ ದಿಕ್ಕು ತಪ್ಪಿಸಿದ್ರು ಅಂತ ಗಣಿ ಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಮೊಳಕಾಲ್ಮೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜನಾರ್ದನ ರೆಡ್ಡಿ, ಬಳ್ಳಾರಿಯಿಂದ 7 ವರ್ಷಗಳಿಂದ ದೂರು ಇದ್ದೇನೆ. ಬಳ್ಳಾರಿ ಜನರನ್ನ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತದೆ. ಶ್ರೀರಾಮುಲು ಒಂಟಿಯಾಗಿ ಹೋರಾಟ ಮಾಡುತ್ತಿದ್ದಾರೆ. ರಾಮುಲು ಒಂಟಿಯಾಗಿದ್ರೂ ಬಳ್ಳಾರಿ ಜನರು ಅವರನ್ನ ಮನೆ ಮಗನಂತೆ ಜೋಪಾನ ಮಾಡುತ್ತಿದ್ದು, ಮನೆ ಮಗನನ್ನ ಕೈಬಿಡಲ್ಲ ಅನ್ನೋ ನಂಬಿಕೆಯಿದೆ ಅಂದ್ರು.

REDDY

2008ರಿಂದ ಬಿಜೆಪಿ ಬಾವುಟವನ್ನ ಬಳ್ಳಾರಿಯಲ್ಲಿ ಹಾರಿಸುತ್ತಿದ್ದಾರೆ. ಶ್ರೀರಾಮುಲು, ಕರುಣಾಕರರೆಡ್ಡಿ, ಶಾಂತಾ ಮೂಲಕ ಬಿಜೆಪಿ ಎಂಪಿ ಸ್ಥಾನ ಗಳಿಸಿದೆ. ಬಳ್ಳಾರಿ ಜನರು ಈ ಬಾರಿಯೂ ಜನರು ಕೈಬಿಡಲ್ಲ. ಶಾಂತಾ ಬಗ್ಗೆ ಕೆಲವರು ಕೆಲವು ಮಾತನಾಡುತ್ತಿದ್ದಾರೆ. ಶ್ರೀರಾಮುಲುರಿಂದ ಉಪಚುನಾವಣೆ ಬಂದಿದೆ ಅಂತಾ ಆರೋಪ ಮಾಡುತ್ತಿದ್ದಾರೆ. ಶ್ರೀರಾಮುಲು ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ವಿಧಾನಸಭೆಗೆ ಸ್ಪರ್ಧಿಸಿದ್ದಾರೆ. ಸಿದ್ದರಾಮಯ್ಯ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಯಾಕೆ ಸೇರಿದ್ರು ಎಂದು ಅವರು ಪ್ರಶ್ನಿಸಿದ್ರು.

ರಕ್ಷಣೆ ಕೊಡಲಿಲ್ಲ:
ಕಳೆದ 7 ವರ್ಷಗಳಲ್ಲಿ ನನಗೆ ರಕ್ಷಣೆ ಕೋರಿ ಮನವಿ ಮಾಡಿದ್ದೆನು. ಆದ್ರೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನನಗೆ ರಕ್ಷಣೆ ಸಹ ಕೊಡಿಸಲಿಲ್ಲ. ಬೆಂಗಳೂರಿನ ನನ್ನ ಮನೆ ಸುತ್ತಮುತ್ತ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಚುನಾವಣೆ ಮುಗಿಯುವುದರೊಳಗೆ ಇನ್ನೂ ಏನಾದ್ರೂ ಆಗಬಹುದು. ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ. ನಾನು ಯಾರಿಗೂ ಹೆದರಲ್ಲ. ಹೆದರೋ ಪ್ರಶ್ನೆಯೇ ಇಲ್ಲ. ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ನನಗೆ ವೈ ಕೆಟಗೆರಿ ಭದ್ರತೆ ಇದೆ. ನಾನು ಲಿಖಿತವಾಗಿ ರಕ್ಷಣೆ ನೀಡಿ ಅಂದ್ರೂ ಇಲ್ಲಿ ಕೊಡುತ್ತಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು.

Reddya Ramulu NEW

ಶ್ರೀರಾಮುಲು ಅಂದ್ರೆ ಅಭಿವೃದ್ಧಿ:
ಸಿದ್ದರಾಮಯ್ಯ ಶೋಭೆ ತರುವಂತಹ ಮಾತುಗಳನ್ನು ಆಡುತ್ತಿಲ್ಲ. ಬಳ್ಳಾರಿಯಲ್ಲಿ 3 ಭಾರಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಿದೆ. ಕಾಂಗ್ರೆಸ್‍ನ ಭದ್ರಕೋಟೆಯನ್ನ ರಾಮುಲು ಬಿಜೆಪಿಯ ಭದ್ರಕೋಟೆಯಾಗಿ ಮಾಡಿದ್ದಾರೆ. ಕರ್ನಾಟಕದ ಹೆಸರನ್ನ ವಿಶ್ವದ ಜನರೆಲ್ಲ ನೋಡುವ ಹಾಗೆ ಗೋಲ್ಡನ್ ಚಾರಿಯಟ್ ಟ್ರೈನ್ ತಂದರು. ಪ್ರವಾಸೋದ್ಯಮ ಮಂತ್ರಿಯಾಗಿ, ಆರೋಗ್ಯ ಸಚಿವರಾಗಿ 108 ಜಾರಿಗೆ ತರೋ ಮೂಲಕ ಹಳ್ಳಿಯ ಜನರಿಗೆ ಜೀವ ಉಳಿಸುವ ಕೆಲಸ ಮಾಡಿದ್ರು. ಈ ಮೂಲಕ ಶ್ರೀರಾಮುಲು ಅಂದ್ರೆ ಅಭಿವೃದ್ಧಿ ಅಂತ ಅವರು ಹೇಳಿದ್ರು.

ಸಿದ್ದರಾಮಯ್ಯಗೆ ಮಾನವೀಯತೆ ಇಲ್ಲ:
ಕಾಂಗ್ರೆಸ್ ನವರು ಪಾದಯಾತ್ರೆ ಮಾಡಿದ ವೇಳೆ ಲಕ್ಷ ಕೋಟಿ ಲೂಟಿ ಮಾಡಿದ್ರು ಅಂತಾ ಆರೋಪ ಮಾಡಿದ್ದರು. ಲೂಟಿ ಮಾಡಿದ ಲಕ್ಷ ಕೋಟಿ ಹಣದಲ್ಲಿ ರಾಜ್ಯದ ಜನರಿಗೆ ಮನೆ ಕಟ್ಟಿಸಿಕೊಡುತ್ತೀನಿ ಅಂದ್ರು. ಸಿದ್ದರಾಮಯ್ಯನವರಿಗೆ ಮಾನವೀಯತೆ ಇಲ್ಲದಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಅಧಿಕಾರದಲ್ಲಿದ್ದಾಗ ನನ್ನಿಂದ ಎಷ್ಟು ಹಣ ವಸೂಲಿ ಮಾಡಿದ್ರು ಅಂತ ಹೇಳಬೇಕು. ನಾನು ಒಂದು ಲಕ್ಷ ಕೋಟಿ ಹಣ ಲೂಟಿ ಮಾಡಿದ್ದೀನಿ ಅಂತಾ ಹೇಳಿದ್ರು. ಇನ್ನೊಂದು ಬಾರಿ ಫೇಸ್ ಬುಕ್ ನಲ್ಲಿ 25 ಸಾವಿರ ಕೋಟಿ ಲೂಟಿ ಅಂದ್ರು. ರಾಹುಲ್ ಗಾಂಧಿ 35 ಸಾವಿರ ಕೋಟಿ ಲೂಟಿ ಅಂದ್ರು. ಸಿದ್ದರಾಮಯ್ಯ ವಿರುದ್ಧ ಮಾನನಷ್ಠ ಮೊಕದ್ದಮೆ ಹಾಕಬೇಕು ಅಂದುಕೊಂಡಿದ್ದೆ. ಆದ್ರೆ ಮಾನವೇ ಇಲ್ಲದವರ ವಿರುದ್ಧ ಮಾನನಷ್ಟ ಯಾಕೆ ಅಂತ ಸುಮ್ಮನಾಗಿದ್ದೆ ಅಂತ ಅವರು ತಿಳಿಸಿದ್ರು.

SIDDARAMAIAH

ನನ್ನಿಂದ ಒಂದು ಲಕ್ಷ ಕೋಟಿ ಅಲ್ಲ ಒಂದು ಕೋಟಿ ಸಹ ವಸೂಲಿ ಮಾಡಲು ಆಗಲಿಲ್ಲ. ಸಿದ್ದರಾಮಯ್ಯ, ರಾಹುಲ್ ಅಯೋಗ್ಯ ಅಂತಾ ಕರಿಬೇಕಾ? ನನ್ನ ಜೊತೆ ಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಆನಂದ್ ಸಿಂಗ್, ನಾಗೇಂದ್ರರನ್ನ ಇದೀಗ ಜೊತೆಗೆ ಇಟ್ಟುಕೊಂಡಿದ್ದಾರೆ ಅಂತ ವಾಗ್ದಾಳಿ ನಡೆಸಿದ್ರು.

ಆರೋಪ ಮಾಡಲು ನೈತಿಕತೆಯಿಲ್ಲ:
ರಾಮುಲು 420, 307 ಆರೋಪ ಹಿನ್ನೆಲೆ ಕುರಿತು ಮಾತನಾಡಿದ ಅವರು, ಶ್ರೀರಾಮುಲು ತನ್ನ ಜೇಬು, ಕೈನಲ್ಲಿದ್ದ ಹಣ ಬಂಗಾರವನ್ನೆಲ್ಲಾ ಕಷ್ಟದಲ್ಲಿದ್ದ ಜನರಿಗೆ ನೀಡಿದವರಾಗಿದ್ದಾರೆ. ಇನ್ನೊಬ್ಬರಿಗೆ ಸಹಾಯ ಮಾಡೋ ವ್ಯಕ್ವಿತ್ವ ಶ್ರೀರಾಮುಲು ಅವರದ್ದಾಗಿದೆ. ಅವರು ಮುಖ್ಯಮಂತ್ರಿಯಾಗದಿದ್ದರೂ 50 ಸಾವಿರ ಸಾಮೂಹಿಕ ವಿವಾಹ ಮಾಡಿದ್ರು. ನಿಮ್ಮ ಜೊತೆ ಇರೋ ಡಿಕೆ ಶಿವಕುಮಾರ್ ದೆಹಲಿ ಮನೆಯಲ್ಲಿ ಸಾಕಷ್ಟು ಹಣ ಸಿಕ್ತು. ಆದ್ರೆ ನನ್ನ ಮನೆಯಲ್ಲಿ ಹಣ ಸಿಗಲಿಲ್ಲ. ಡಿಕೆ ಶಿವಕುಮಾರ್ ಮನೆಯಲ್ಲಿ ಹಣ ಸಿಕ್ಕಾಗ ತಲೆ ತಗ್ಗಿಸಬೇಕಾಗಿತ್ತು. ನನ್ನ ವಿರುದ್ಧ ಆರೋಪ ಮಾಡೋಕೆ ನಿಮಗೆ ನೈತಿಕತೆಯಿಲ್ಲ ಅಂತ ಅವರು ಕಿಡಿಕಾರಿದ್ರು.

vlcsnap 2018 10 29 11h36m08s226 e1540793804866

ಬಹಿರಂಗ ಚರ್ಚೆಗೆ ಸಿದ್ಧ:
ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಶ್ರೀರಾಮುಲು ಜೊತೆ ಬಹಿರಂಗ ಚರ್ಚೆ ಬೇಡ. ನಿಮಗೆ ತಾಕತ್ತು ಅಂತ ಇದ್ದರೆ ಅಂಕಿ ಅಂಶಗಳ ಸಮೇತ ಚರ್ಚೆಗೆ ಬರುವೆನು. ನಾನು ಬಹಿರಂಗ ಚರ್ಚೆಗೆ ಸಿದ್ಧವಾಗಿದ್ದೇನೆ. ನಾನು ನಾಳೆ ನಾಡಿದ್ದು ಇಲ್ಲೇ ಇರುತ್ತೇನೆ. 420, 307 ಅನ್ನೋ ಮೂಲಕ ಇಡಿ ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡಿದ್ದೀರಿ. ವಾಲ್ಮೀಕಿ ಜಯಂತಿಯಲ್ಲಿ ಸಿಎಂ ಅನಾರೋಗ್ಯ ಸರಿಯಿಲ್ಲದ ಪರಿಣಾಮ ಹಾಜರಾಗಲಿಲ್ಲ. ಆದ್ರೆ ಡಿಸಿಎಂ ಪರಮೇಶ್ವರ್ ಆರೋಗ್ಯಕ್ಕೆ ಏನು ಆಗಿತ್ತು. ದೇವೇಗೌಡರಿಗೆ ವಾಲ್ಮೀಕಿ ಸಮುದಾಯದ ಪ್ರಶಸ್ತಿ ಸ್ವೀಕಾರ ಮಾಡಲಿಲ್ಲ. ಮರ್ಹಷಿ ವಾಲ್ಮೀಕಿ ಪ್ರಶಸ್ತಿ ಸ್ವೀಕಾರ ಮಾಡದೇ ಅಪಮಾನ ಮಾಡಿದ್ರು ಅಂತ ಸಿಡಿಮಿಡಿಗೊಂಡರು.

ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ರು. ಅದಕ್ಕೆ ಅಧಿಕಾರ ಕಳೆದುಕೊಂಡರು. ಅವತ್ತು ಡಿಕೆ ಶಿವಕುಮಾರ್ ಮನಸಾಕ್ಷಿ ಇರಲಿಲ್ಲವೇ. ಲಿಂಗಾಯತ ಧರ್ಮ ಒಡೆಯುವ ವೇಳೆ ಸ್ವಾಮೀಜಿಗಳ ಹಗಲಿರುಳು ಹೋರಾಟ ಮಾಡಿದ್ರು. ಅವರ ಶಾಪ ನಿಮಗೆ ತಟ್ಟಿದೆ. ಇನ್ನೂ ಕಾಂಗ್ರೆಸ್ ಗೆ ಶಾಪ ತಟ್ಟುತ್ತೆ ಅಂತ ಭವಿಷ್ಯ ನುಡಿದ್ರು.

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bjpChitradurgacongressDK Shivakumarformer ministerJanardhan ReddyPublic TVsiddaramaiahsriramuluಕಾಂಗ್ರೆಸ್ಚಿತ್ರದುರ್ಗಜನಾರ್ದನ ರೆಡ್ಡಿಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಮಾಜಿ ಸಚಿವಶ್ರೀರಾಮುಲುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
7 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
16 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?