ಕಲಬುರಗಿ: ಮಾಜಿ ಸಚಿವ ಖಮರುಲ್ ಇಸ್ಲಾಂ ಸಾವಿಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಗಂಭೀರವಾಗಿ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಖಮರುಲ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಸಚಿವ ಸಂಪುಟ ವಿಸ್ತರಣೆ ವೇಳೆ ನನ್ನನ್ನು ಹಾಗೂ ಖಮರುಲ್ ಇಸ್ಲಾಂ ಅವರನ್ನು ಕೈಬಿಡುವಂತೆ ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್ ಮೂಲಕ ಒತ್ತಡ ಹೇರಿದ್ದರು. ಈ ಮೂಲಕ ನಮ್ಮನ್ನು ಸಚಿವಸ್ಥಾನದಿಂದ ಕೆಳಗೆ ಇಳಿಸಿ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಮಂತ್ರಿ ಮಾಡಿದರು ಎಂದು ದೂರಿದರು.
- Advertisement 2
- Advertisement 3
ಸಚಿವ ಸ್ಥಾನ ಕೈತಪ್ಪಿದ್ದರಿಂದ ಖಮರುಲ್ ಅವರು ಮಾನಸಿಕವಾಗಿ ನೊಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು. ಒಂದು ವೇಳೆ ಸಚಿವ ಸ್ಥಾನದಲ್ಲಿ ಖಮರುಲ್ ಅವರು ಇದ್ದಿದ್ದರೆ ಹೆಚ್ಚುಕಾಲ ಬಾಳುತ್ತಿದ್ದರು. ಹೀಗಾಗಿ ಖಮರುಲ್ ಅವರ ಸಾವಿಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ ಎಂದು ಕಿಡಿಕಾರಿದರು.
- Advertisement 4
ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಅಷ್ಟೇ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲುವುದು ಸತ್ಯ ಎಂದು ಚಿಂಚನಸೂರ್ ವಾಗ್ದಾಳಿ ನಡೆಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv