ಜಾಧವ್ ರಾಜೀನಾಮೆ ನೀಡಿದ್ದು ಖುಷಿಯ ವಿಚಾರ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್

Public TV
1 Min Read
Baburao

– ನಾನೇ ರಾಜೀನಾಮೆ ನೀಡೋದಕ್ಕೆ ಹೇಳಿದ್ದೆ

ಯಾದಗಿರಿ: ಕಾಂಗ್ರೆಸ್ ರೆಬೆಲ್ ನಾಯಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದು ಖುಷಿಯ ವಿಚಾರ. ನಾನೇ ಅವರಿಗೆ ರಾಜೀನಾಮೆ ನೀಡಲು ಹೇಳಿದ್ದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವರು, ಇಂದು ನನಗೆ ಹಬ್ಬದ ಡಬಲ್ ಖುಷಿಯಾಗುತ್ತಿದೆ. ಉಮೇಶ್ ಜಾದವ್ ಅವರೇ ಈ ಬಾರಿಯ ಕಲಬುರಗಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ನನ್ನನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು. ಇದೀಗ ಉಮೇಶ್ ಜಾಧವ್ ಎದುರು ಖರ್ಗೆ ಅವರು ಸೋಲುತ್ತಾರೆ. ಚುನಾವಣೆಯಲ್ಲಿ ಉಮೇಶ್ ಜಾಧವ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಒಬ್ಬ ಶಾಸಕನ ರಾಜೀನಾಮೆ ಕೊಡಿಸುವ ಮೂಲಕ ಬಿಜೆಪಿ ದೊಡ್ಡ ಸಾಧನೆ ಮಾಡಿದೆ. ಹಣ ನೀಡಿ ಖರೀದಿಸಿದ್ದೇವೆ ಎಂದು ಹೊಟ್ಟೆ ಕಿಚ್ಚಿಗೆ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಆರೋಪ ಸಾಬೀತಾದ್ರೆ ನಮ್ಮ ಅಭ್ಯರ್ಥಿ (ಉಮೇಶ್ ಜಾಧವ್) ನೇಣು ಹಾಕಿಕೊಳ್ಳುತ್ತಾರೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *