ಅಧಿಕಾರಿ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ – ಏರು ಧ್ವನಿಯಲ್ಲೇ ಉತ್ತರಿಸಿದ ಜಿಲ್ಲಾ ಪಂಚಾಯತ್ ಸಿಇಓ

Public TV
1 Min Read
Renukacharya

ದಾವಣಗೆರೆ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರೇಣುಕಾಚಾರ್ಯ ಅವರು ಅಧಿಕಾರಿಗಳ ವಿರುದ್ಧ ಕೆಂಡಾಮಂಡರಾಗಿದ್ದು, ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಓ ಏರು ಧ್ವನಿಯಲ್ಲೇ ಉತ್ತರ ನೀಡಿದ್ದಾರೆ.

ಇಂದು ನಗರದಲ್ಲಿ ನಡೆಸಿದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಶಾಸಕ ರೇಣುಕಾಚಾರ್ಯ, ಜಿಲ್ಲಾ ಸಿಇಓ ಸಿ.ಅಶ್ವತಿ ಅವರು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿಲ್ಲ. ಯಾವ ಜನಪ್ರತಿನಿಧಿಗಳ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಜಿಲ್ಲಾ ಪಂಚಾಯತ್ ನ ಯಾವುದೇ ಕೆಲಸ ಆಗಲಿ ಸಿಇಓ ಅನುಮತಿ ಬೇಕೆಂದು ಅಧಿಕಾರಿಗಳು ಹೇಳುತ್ತಾರೆ. ಯಾವುದೇ ಫೈಲನ್ನು ನಿಗಧಿತ ಸಮಯದಲ್ಲಿ ಕಳುಹಿಸುವುದಿಲ್ಲ. ನಿಮ್ಮ ದರ್ಬಾರ್ ಏನು ಎಂದು ಪ್ರಶ್ನಿಸಿದ್ದಾರೆ.

Renukacharya Officerdistrict panchayat 3

ಈ ವೇಳೆ ಶಾಸಕರ ಮಾತಿಗೆ ಸಭೆಯಲ್ಲೇ ತಿರುಗೇಟು ಕೊಟ್ಟ ಸಿಇಓ ಅಧಿಕಾರಿ ಅಶ್ವತಿ ಅವರು, ನಾನು ಜನಪ್ರತಿನಿಧಿಗಳಿಗೆ ಗೌರವ ಕೊಡುತ್ತಿದ್ದೇನೆ. ಯಾರಿಗೂ ಅಗೌರವ ತೋರುತ್ತಿಲ್ಲ. ನಾನು ಆ ರೀತಿ ನಡೆದುಕೊಂಡಿಲ್ಲ. ನನ್ನ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ಏರುಧ್ವನಿಯಲ್ಲೇ ಪ್ರತ್ಯುತ್ತರ ನೀಡಿದ್ದಾರೆ.

ಮಾಧ್ಯಮಗಳಿಗೆ ಪತ್ರಿಕ್ರಿಯೆ ನೀಡಿದ ರೇಣುಕಾಚಾರ್ಯ ಅವರು, ಅಧಿಕಾರಿಗಳ ವಿರುದ್ಧ ನಾನು ವಾಗ್ದಾಳಿ ನಡೆಸಿಲ್ಲ. ಆದರೆ ಅಧಿಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ತಿಳಿಸಿದ್ದು ಎಲ್ಲಾ ಚುನಾಯಿತ ಸದಸ್ಯರು ಈ ಕುರಿತು ದೂರು ನೀಡಿದ್ದಾರೆ. ಅದ್ದರಿಂದ ಅವರಿಗೆ ಈ ಕುರಿತು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು. ಸಾಮಾನ್ಯ ಸಭೆಯಲ್ಲಿ ಜಿಲ್ಲೆಯ ಶಾಸಕರು ಸೇರಿದಂತೆ, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.

Renukacharya Officerdistrict panchayat 4

Share This Article
Leave a Comment

Leave a Reply

Your email address will not be published. Required fields are marked *