ಮೂಡ್ ಅಂದ್ರೆ ಬೇರೆ ಕಣಪ್ಪ – ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ: ಸಿದ್ದು ಹಾಸ್ಯದ ಹೇಳಿಕೆ

Public TV
1 Min Read
mys siddaramaiah

ಮೈಸೂರು: ಮೂಡ್ ಅಂದ್ರೆ ಬೇರೆ ಕಣಪ್ಪ. ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಸ್ಯ ಮಿಶ್ರಿತ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಕಾಂಗ್ರೆಸ್ ಪರವಾಗಿ, ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ನಿರ್ಧಾರ ಮಾಡಿದ್ದಾರೆ. ಅದು ಮೂಡ್ ಅಲ್ಲ ಅದು ಜನರ ಅಭಿಪ್ರಾಯ. ಮೂಡ್ ಅಂದ್ರೆ ಬೇರೆ. ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ. ಈಗ ಇರೋದು ಜನರ ಅಭಿಪ್ರಾಯ ಅಷ್ಟೇ ಎಂದರು.

mys siddaramaiah 2

ಜನರು ಕಾಂಗ್ರೆಸ್ ಪರವಾಗಿ, ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ನಿರ್ಧಾರ ಮಾಡಿದ್ದಾರೆ. ಅದು ಮೂಡ್ ಅಲ್ಲ. ಅದು ಜನರ ಅಭಿಪ್ರಾಯ. ನೀವ್ ಯಾವ್ ಮೂಡ್ ಅಲ್ಲಿ ಕೇಳ್ತಿದ್ದೀರೋ ನನಗೆ ಗೊತ್ತಿಲ್ಲ. ಮೂಡ್ ಬೇರೆ, ಜನರ ಅಭಿಪ್ರಾಯ ಬೇರೆ ಎಂದು ಮಾಧ್ಯಮದವರ ಜೊತೆ ಹಾಸ್ಯವಾಗಿ ಮಾತನಾಡಿದರು.

ಇದೇ ವೇಳೆ ಭಾನುವಾರ ನಂಗೆ ಚುನಾವಣೆ ಸಾಕಾಗಿ ಹೋಗಿದೆ. ರಾಹುಲ್ ಗಾಂಧಿ ಪ್ರಧಾನಿ ಆದ್ರೆ ಸಾಕು ಎಂದು ಓಡಾಡುತ್ತಿದ್ದೇನೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *