Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಕೂಡ ಊಟ ಮಾಡಿಲ್ಲ, ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ: ಕಾರ್ಯಕರ್ತರಿಗೆ ಗದರಿದ ಮಾಜಿ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ನಾವು ಕೂಡ ಊಟ ಮಾಡಿಲ್ಲ, ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ: ಕಾರ್ಯಕರ್ತರಿಗೆ ಗದರಿದ ಮಾಜಿ ಸಿಎಂ

Chamarajanagar

ನಾವು ಕೂಡ ಊಟ ಮಾಡಿಲ್ಲ, ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ: ಕಾರ್ಯಕರ್ತರಿಗೆ ಗದರಿದ ಮಾಜಿ ಸಿಎಂ

Public TV
Last updated: March 15, 2019 7:28 pm
Public TV
Share
3 Min Read
siddaramaiah garam
SHARE

ಚಾಮರಾಜನಗರ: “ಏ ಕೂತ್ಕೋ, ನಾವು ಕೂಡ ಊಟ ಮಾಡಿಲ್ಲ. ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ” ಎಂದು ಸಮಾವೇಶದಿಂದ ಎದ್ದು ಹೊಗುತ್ತಿದ್ದವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಗದರಿದ್ದಾರೆ.

ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಜನರು ಸಮಾವೇಶದಿಂದ ಎದ್ದು ಹೋಗುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ “ಏ ಕೂತ್ಕೋ, ನಾವು ಕೂಡ ಊಟ ಮಾಡಿಲ್ಲ. ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ. ಮುಗಿತು ಕೂತ್ಕೋ” ಎಂದು ಗದರಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, “ರಾಮ ಮಂದಿರ ಕಟ್ಟುವುದಕ್ಕೆ ನನ್ನ ವಿರೋಧವಿಲ್ಲ. ನನ್ನ ಹೆಸರಲ್ಲೂ ಕೂಡ ರಾಮ ಇದೆ. ಸಿದ್ದ – ರಾಮ ಸಿದ್ದರಾಮಯ್ಯ. ಸಿದ್ದ ಅಂದರೆ ರೆಡಿ ಅಂತಾ, ನಾನು ಯಾಕೆ ವಿರೋಧ ಮಾಡಲಿ. ಇವರು ಬಾಬ್ರಿ ಮಸೀದಿ ಕೆಡವಿ ರಾಮ ಮಂದಿರ ಕಟ್ಟಲು ಹೋಗಿ 27 ವರ್ಷ ಆಯ್ತು. ಇನ್ನೂ ಯಾಕೆ ಇವರು ರಾಮ ಮಂದಿರ ಕಟ್ಟಿಲ್ಲ. ಚುನಾವಣೆ ಬಂದಾಗ ಮಾತ್ರ ರಾಮ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ಇಟ್ಟಿಗೆ ದುಡ್ಡು ಎಲ್ಲವನ್ನೂ ತಗೊಂಡು ರಾಮ ಮಂದಿರ ಕಟ್ಟುತ್ತೇವೆ ಎಂದು ಹೋಗಿದ್ದರು. ಬಳಿಕ ಇಟ್ಟಿಗೆನಾ ರಸ್ತೆಗೆ ಎಸೆದು ದುಡ್ಡನ್ನು ಜೇಬಿಗೆ ಹಾಕೊಂಡು ಹೋದ್ರು. ಜನರಿಂದ ಸಂಗ್ರಹ ಮಾಡಿದ ದುಡ್ಡಿನ ಲೆಕ್ಕಾ ಎಲ್ಲಿ” ಎಂದು ಸಿದ್ದರಾಮಯ್ಯ ಪ್ರಶ್ನಿಸದರು.

ಚಾಮರಾಜನಗರದಲ್ಲಿ ಪರಿವರ್ತನಾ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ @dineshgrao ಮಾಜಿ ಮುಖ್ಯಮಂತ್ರಿ @siddaramaiah , ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಂಸದ ಧ್ರುವನಾರಾಯಣ್, ಸಂಸದರು, ಶಾಸಕರು, ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಿರುವರು.#LokSabhaElections2019 pic.twitter.com/PhZBPbYPZV

— Karnataka Congress (@INCKarnataka) March 15, 2019

ತಮ್ಮ ಭಾಷಣದ ಉದ್ದಕ್ಕೂ ಮೋದಿ ಅವರನ್ನು ಸಿದ್ದರಾಮಯ್ಯ ಅನುಕರಣೆ ಮಾಡಿದ್ದು ವಿಶೇಷವಾಗಿತ್ತು. ಡಿಸೆಂಬರ್ 30, 2009ರಲ್ಲಿ ವಿಧಾನಸಭೆಯಲ್ಲಿ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಿಸ್ಟರ್ ಯಡಿಯೂರಪ್ಪ ಸಾಲಮನ್ನಾ ಮಾಡಿ ಎಂದು ಹೇಳೋದಕ್ಕೆ ನಿಮಗೆ ಯಾವ ನೈತಿಕತೆ ಇದೆ? ಸಮ್ಮಿಶ್ರ ಸರ್ಕಾರದಿಂದ 36 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡುತ್ತಿದ್ದೇವೆ. ರೈತರಿಗೆ ನೀವೇನು ಮಾಡಿದ್ದೀರಿ ಮೋದಿಯವರೇ? ಸಿಲಿಂಡರ್ ಗ್ಯಾಸ್ ಬೆಲೆ 450 ರೂ. ಯಿಂದ 1 ಸಾವಿರಕ್ಕೆ ಏರಿಕೆಯಾಗಿದ್ದೆ ಅಚ್ಚೇದಿನ್ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಚಾಮರಾಜನಗರಕ್ಕೆ ₹2000 ಕೋಟಿಗೂ ಹೆಚ್ಚಿನ ಅನುದಾನ ನೀಡಿದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂಬುದನ್ನು ನಾನು ಹೆಮ್ಮೆ ಹೇಳುತ್ತೇನೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ಮೋದಿಯವರೊಂದಿಗೆ ಬಹಿರಂಗ ಚರ್ಚೆಗೂ ಸಿದ್ದನಿದ್ದೇನೆ. – ಸಿದ್ದರಾಮಯ್ಯ@siddaramaiah#LokSabhaElections2019 #RaGaFromKarnataka pic.twitter.com/7UyHsCwMsL

— Karnataka Congress (@INCKarnataka) March 15, 2019

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೆ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆಯಾಗಲಿಲ್ಲ. ಲಕ್ಷಾಂತರ ಕೋಟಿ ಉಳಿತಾಯವಾಗಿದೆ. ಎಲ್ಲಿ ಹೋಯ್ತು ಈ ಹಣ ರಾಷ್ಟ್ರದ ಜನತೆಗೆ ಲೆಕ್ಕ ಕೊಡಿ ಮೋದಿಯವರೇ. ಪ್ರತಿಯೊಬ್ಬರ ಅಕೌಂಟ್‍ಗೆ 15 ಲಕ್ಷ ಹಣ ಹಾಕ್ತೀವಿ ಎಂದು ಹೇಳಿದ್ರಿ. ಆದರೆ 15 ಲಕ್ಷ ಇರಲಿ 15 ಪೈಸೆನೂ ಹಾಕಲಿಲ್ಲ. ನಿಮಗೆ ಯಾರೋಬ್ಬರಿಗೆ 15 ರೂ. ಬಂದಿದ್ದರೆ ನಾನು ಮೋದಿ ಬಗ್ಗ ಟೀಕೆ ಮಾಡುವುದನ್ನು ಬಿಡುತ್ತೇನೆ ಎಂದ ಅವರು ಪಾಕಿಸ್ತಾನದ ವಿರುದ್ಧ ಕಾಂಗ್ರೆಸ್ ಅವಧಿಯಲ್ಲಿ 12 ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವು. ಎರಡು ಬಾರಿ ಪಾಕಿಸ್ತಾನವನ್ನು ಸೋಲಿಸಿದ್ದೇವು. ಆದರೆ ಈಗ ಪದೇ ಪದೇ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಹೇಳುವ ಮೂಲಕ ರಾಜಕೀಯ ಲಾಭ ಪಡೆಯಲು ಹೊರಟ್ಟಿದ್ದಾರೆ ಎಂದು ದೂರಿದರು.

"Mr. @BSYBJP, you talk about loan waivers. I want to know what have you or your government done for any loan waiver? The Congress under me has given Rs 8,165 crore as farm loan waivers alone": Shri. @siddaramaiah #ParivartanaYatra pic.twitter.com/vNRw9HgWqz

— Karnataka Congress (@INCKarnataka) March 15, 2019

ಸ್ವಾರ್ಥಕ್ಕಾಗಿ ಬಿಜೆಪಿಗೆ ಹೋದರೆ ಅವರು ಅಂಬೇಡ್ಕರ್ ವಿರೋಧಿಗಳು. ಏಕೆಂದರೆ ಬಿಜೆಪಿಗೆ ಮತ ಹಾಕಿದರೆ ನಾವೇ ಆತ್ಮಹತ್ಯೆ ಮಾಡಿಕೊಂಡಂತೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಬಿಜೆಪಿಗೆ ಒಂದೇ ಒಂದು ಮತ ಕೊಡಬಾರದು. ಪರ ಧರ್ಮ ಸಹಿಷ್ಣುತೆ, ಸಹಬಾಳ್ವೆ ನಮ್ಮ ಮಂತ್ರ ಆಗಬೇಕು. ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಕಳೆದ ಬಾರಿ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ಸಿದ್ದರಾಮಯ್ಯ ಹಿಂದೂ ವಿರೋಧಿ, ಮುಸ್ಲಿಮರ ಪರ ಎಂದರು. ಆದರೆ ನಾನು ಬಡವರ ಪರ ಇರುವುದು ನಿಜ, ಮುಸ್ಲಿಂರ ಪರ ಇರುವುದು ನಿಜ. ದಲಿತರ ಪರ ಇರುವುದು ನಿಜ, ಹಿಂದುಳಿದವರ ಪರ ಇರುವುದು ನಿಜ. ನಾನು ಎಲ್ಲ ಜಾತಿಯವರ ಪರ ಇದ್ದೇನೆ. ಅಕ್ಕಿ ಕೊಟ್ಟಿದ್ದು, ಹಾಲಿಗೆ ಸಬ್ಸಿಡಿ ನೀಡಿದ್ದು, ಇಂದಿರಾ ಕ್ಯಾಂಟೀನ್ ಮಾಡಿದ್ದು, ಸಾಲಮನ್ನಾ ಮಾಡಿದ್ದು ಎಲ್ಲ ವರ್ಗದವರಿಗಾಗಿ. ಯಡಿಯೂರಪ್ಪ ಅವರ ಅವಧಿಯಲ್ಲಿ ಏನು ಮಾಡಿದರು? ಜೈಲಿಗೆ ಹೋಗಿದ್ದನ್ನು ಬಿಟ್ಟರೆ ಬೇರೇನು ಮಾಡಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:chamarajanagarLokSabha electionPrivartana RallyPublic TVsiddaramaiahಕಾಂಗ್ರೆಸ್ ಸಮಾವೇಶಚಾಮರಾಜನಗರಪಬ್ಲಿಕ್ ಟಿವಿಪರಿವರ್ತನಾ ರ‍್ಯಾಲಿಲೋಕಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
5 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
5 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
6 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
7 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
7 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?