ಸಾಮ್ರಾಟ್ ಪೃಥ್ವಿರಾಜ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿರುವ ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ಗಮನ ಸೆಳೆಯುವಂತಹ ಮಾತುಗಳನ್ನು ಆಡಿದ್ದಾರೆ. ಅವರ ಆ ಮಾತು ತೆಲುಗು ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸ್ಟಾರ್ ನಟ ರಾಮಚರಣ್ ತೇಜ ಹೆಂಡತಿಯು ತಲೆ ಕೆಡಿಸಿಕೊಂಡು ಕೂರುವಂತಾಗಿದೆ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು
ಅಕ್ಷಯ್ ಕುಮಾರ್ ಮುಖ್ಯಭೂಮಿಕೆಯ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಮಾನಷಿ ಚಿಲ್ಲರ್, ಇದೀಗ ಆ ಸಿನಿಮಾ ಪ್ರಚಾರದ ಬ್ಯುಸಿಯಲ್ಲಿದ್ದಾರೆ. ಇಂದು ರಿಲೀಸ್ ಆಗಿರುವ ಸಿನಿಮಾದ ಬಗ್ಗೆ ಒಳ್ಳೆಯ ಮಾತು ಕೇಳಿ ಬರುತ್ತಿದೆ. ಈ ಸಂದರ್ಭದಲ್ಲಿ ಮಾನಷಿ ಆಡಿದ ಮಾತು ಕೂಡ ವೈರಲ್ ಆಗಿದೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ
ಮಾನಷಿ ಚಿಲ್ಲರ್ ಆರ್.ಆರ್.ಆರ್ ಸಿನಿಮಾ ನೋಡಿದಾಗ ರಾಮ್ ಚರಣ್ ಬಗ್ಗೆ ವಿಪರೀತ ಲವ್ ಆಯಿತಂತೆ. ಅವರ ದೊಡ್ಡ ಅಭಿಮಾನಿಯಾಗಿ ಅವರು ಬದಲಾದರಂತೆ. ರಾಮ್ ಚರಣ್ ತೇಜ ಅವರಿಗೆ ಮದುವೆ ಆಗದೇ ಇದ್ದರೆ, ನಾನು ಅವರನ್ನು ಡೇಟಿಗೆ ಕರೆಯುತ್ತಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ಮದುವೆಯಾದರೂ ಪರವಾಗಿಲ್ಲ. ಈಗಲೂ ಅವರು ಒಪ್ಪಿದರೆ ನಾನು ರೆಡಿ ಎಂದು ಹೇಳಿದ್ದಾರೆ. ಈ ಮಾತು ರಾಮ್ ಚರಣ್ ಅಭಿಮಾನಿಗಳನ್ನು ಖುಷಿಗೊಳಿಸಿದೆ.