ಬೀದರ್: ಮಾಜಿ ಶಾಸಕ ದಿ.ಕಲ್ಯಾಣರಾವ್ ಮೊಳಕೇರಿ (Kalyan Rao Molakeri) ಅವರ ಮೂರ್ತಿಯನ್ನು (Statue) ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಇಂದು ಭಾಲ್ಕಿ (Bhalki) ತಾಲ್ಲೂಕಿನ ಕಣಜಿ ಗ್ರಾಮದಲ್ಲಿ ಅನಾವರಣಗೊಳಿಸಿದರು.
ನಿಧನರಾಗಿ 30 ವರ್ಷ ಕಳೆದರೂ ಕಲ್ಯಾಣರಾವ್ ಮೊಳಕೇರಿ ಅವರು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರು ಜನನಾಯಕ, ದೇಶ ಭಕ್ತ ಆಗಿದ್ದರು ಎಂದು ಬಣ್ಣಿಸಿದರು. ಇದನ್ನೂ ಓದಿ: ಆರೋಪ ಮಾಡಿ ಓಡಿ ಹೋಗುವ ಬಹಳ ಮಂದಿಯನ್ನು ನೋಡಿದ್ದೇನೆ: ಡಿಕೆ ಸುರೇಶ್
ಕಲ್ಯಾಣರಾವ್ ಆದರ್ಶ ರಾಜಕಾರಣಿ ಆಗಿದ್ದರು. ಅವರ ಕುರಿತು ಕೃತಿ ರಚಿಸಿರುವುದು ಪ್ರಶಂಸನೀಯ ಎಂದು ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ ರಚಿತ ಜನನಾಯಕ ಕಲ್ಯಾಣರಾವ್ ಮೊಳಕೇರಿ ಕೃತಿ ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ನುಡಿದರು.
ಕೃತಿಯಲ್ಲಿ ಲೇಖಕರು ಮೊಳಕೇರಿ ಅವರ ಜೀವನ ಹಾಗೂ ಸಾಧನೆ ಮೇಲೆ ಬೆಳಕು ಚೆಲ್ಲಿದ್ದಾರೆ. ಸಂಕ್ಷಿಪ್ತದಲ್ಲೇ ಸಮಗ್ರ ಮಾಹಿತಿ ಒದಗಿಸಿದ್ದಾರೆ ಎಂದು ಕೃತಿ ಕುರಿತು ಡಾ. ರಾಮಚಂದ್ರ ಗಣಾಪುರ ಹೇಳಿದರು.
ಕಲ್ಯಾಣರಾವ್ ಅವರು ನಿಸ್ವಾರ್ಥ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಅವರು ನಮ್ಮಿಂದ ಮರೆಯಾಗದಿರಲಿ ಎನ್ನುವ ಕಾರಣಕ್ಕೆ ಕೃತಿ ರಚಿಸಿದ್ದೇನೆ ಎಂದು ಪಂಚಾಕ್ಷರಿ ಪುಣ್ಯಶೆಟ್ಟಿ ತಿಳಿಸಿದರು.
Web Stories