ಲಕ್ನೋ: ಪ್ರತಿಭಟನಾ ನಿರತ ಶಿಕ್ಷಕರೊಬ್ಬರು ತಮ್ಮ ಒಳಉಡುಪನ್ನು ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಒಣಗಿಸಲು ನೇತುಹಾಕಿದ್ದಕ್ಕೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಶಾಸಕರೊಬ್ಬರು ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಶಿಕ್ಷಕರೊಬ್ಬರು ಜಿಲ್ಲಾಧಿಕಾರಿ ಕಚೇರಿಯ ಬಳಿ 23ಕ್ಕೂ ಹೆಚ್ಚು ವರ್ಷಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಕಚೇರಿಯ ಹೊರಗಡೆಯೇ ತಮ್ಮ ಒಳ ಉಡುಪನ್ನು ನೇತುಹಾಕಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 509(ಮಹಿಳೆಯ ಗೌರವಕ್ಕೆ ಧಕ್ಕೆ) ಅಡಿ ಶಿಕ್ಷಕ ವಿಜಯ್ ಸಿಂಗ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಉಸ್ತುವಾರಿ ನಜರತ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಸಮೀಪಾಲ್ ಅತ್ರಿ ತಿಳಿಸಿದ್ದಾರೆ.
ಪ್ರತಿಭಟನೆಯನ್ನು ಹಿಂಪಡೆಯುವಂತೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ದೂರ ಹೋಗುವಂತೆ ಅಧಿಕಾರಿಗಳು ಹೇಳಿದ ನಂತರ ಸಿಂಗ್ ತಮ್ಮ ಧರಣಿಯ ಸ್ಥಳವನ್ನು ಬದಲಾಯಿಸಿದ್ದಾರೆ ಎಂದು ಸಹ ವರದಿಯಾಗಿದೆ. ಮಾಜಿ ಶಾಸಕರು ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಇವರು ಫೆಬ್ರವರಿ 26, 1996ರಂದು ಈ ಸ್ಥಳದಲ್ಲಿ ಧರಣಿ ಪ್ರಾರಂಭಿಸಿದ್ದರು ಎಂದು ತಿಳಿದು ಬಂದಿದೆ.