ಚಲುವರಾಯಸ್ವಾಮಿ ಮೊದಲೇ ಚಡ್ಡಿ ಹಾಕಲ್ಲ: ಮಾಜಿ ಶಾಸಕ ಸುರೇಶ್‌ಗೌಡ ವಾಗ್ದಾಳಿ

Public TV
1 Min Read
suresh gowda

ಮಂಡ್ಯ: ಜಿಲ್ಲೆಯಲ್ಲಿ ಜೆಡಿಎಸ್ (JDS) ನಾಯಕರು ಹಾಗೂ ಸಚಿವ ಚಲುವರಾಯಸ್ವಾಮಿ ನಡುವೆ ಚಡ್ಡಿ ಪಾಲಿಟಿಕ್ಸ್ ತಾರಕಕ್ಕೇರಿದೆ. ಬಿಜೆಪಿಯವರು ಹೇಳಿದರೆ ಕುಮಾರಸ್ವಾಮಿ (H.D.Kumaraswamy) ಚಡ್ಡಿನೂ ಹಾಕ್ತಾರೆ, ಮಾಲೆನೂ ಎಂದಿದ್ದ ಸಚಿವ ಚಲುವರಾಯಸ್ವಾಮಿಗೆ (Chaluvaraya Swamy) ಜೆಡಿಎಸ್ ನಾಯಕರು ಟಾಂಗ್ ನೀಡಿದ್ದಾರೆ.

ಬುಧವಾರ ಚಲುವರಾಯಸ್ವಾಮಿಗೆ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮದೇ ಶೈಲಿನಲ್ಲಿ ವಾಗ್ದಾಳಿ ನಡೆಸಿದ್ದರು. ಇಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ಗೌಡ (Suresh Gowda) ವಾಗ್ದಾಳಿ ನಡೆಸಿದ್ದಾರೆ. ಚಲುವರಾಯಸ್ವಾಮಿ ಮೊದಲೇ ಚಡ್ಡಿ‌ ಹಾಕಲ್ಲ. ಇವರಿಗೆ ಯಾರು ಹೇಳಬೇಕು ಚಡ್ಡಿ ಹಾಕು ಅಂತ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಮ್ಮ ವರದಿ ನೈಜವಾಗಿ, ವೈಜ್ಞಾನಿಕವಾಗಿದೆ: ಕಾಂತರಾಜು

chaluvaraya swamy 1

ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಹೇಳಬೇಕಾ? ಇವರಿಗೆ ಯಾಕೆ ನಮ್ಮ ವಿಷಯ. ಇವರದ್ದು ಎಷ್ಟಿದೆ ಅಷ್ಟು ನೋಡಿಕೊಳ್ಳಬೇಕು. ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದ್ದವರು ಯಾರು? ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು. ಅದಕ್ಕೆ ಆತ ಚಡ್ಡಿ ವಿಚಾರ ಹೇಳ್ತಾ ಇದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ

ಚಡ್ಡಿ ಹಾಕೊಂಡ್ರೆ ಬಿಚ್ಚೋಕೆ ತೊಂದರೆ ಆಗಬಹುದು. ಅದಕ್ಕೆ ಚಡ್ಡಿ ಹಾಕಬಾರದೆಂದು ಚಲುವರಾಯಸ್ವಾಮಿ ತೀರ್ಮಾನ ಮಾಡಿರಬೇಕು. ಪ್ಯಾಂಟ್ ಹಾಕೋದನ್ನು ಕಲಿಸಿದ್ದು ಯಾರು? ಮಾತಾಡೋದನ್ನು ಹೇಳಿಕೊಟ್ಟೋರು ಯಾರು ಅಂತ ಅವರೇ ಹೇಳಬೇಕು. ನಾವು ಚಡ್ಡಿ ಹಾಕೋತಿವೋ ಇಲ್ಲ ಬುಂಡ ಬುಂಡ ಓಡಾಡುತ್ತಿವೋ‌ ಇವರಿಗೆ ಯಾಕೆ? ಚಲುವರಾಯಸ್ವಾಮಿಗೆ ಕುಮಾರಸ್ವಾಮಿ ದೇವೇಗೌಡರ ಬಗ್ಗೆ ಮಾತಾಡಿದ್ರೆ ದೊಡ್ಡ ಲೀಡರ್ ಆಗ್ತೀನಿ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರ ಕಿವಿ ತಂಪು ಮಾಡಲು ಹೀಗೆ ಮಾತಾಡುತ್ತಾ ಇದ್ದಾರೆ. ಇವರ ಎಲ್ಲಾ ವಿಚಾರಗಳು ಹೊರಗೆ ಬರುತ್ತವೆ. ಇವರು ಗಾಜಿನ ಮನೆಯಲ್ಲಿ ಇದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Share This Article