Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ.ಸುರೇಶ್

Bengaluru City

ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ.ಸುರೇಶ್

Public TV
Last updated: January 7, 2025 10:48 pm
Public TV
Share
5 Min Read
dk suresh
SHARE

ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಅಂತೇನಿಲ್ಲ. ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲವು ಸಚಿವರು, ನಾಯಕರು ಔತಣಕೂಟಕ್ಕೆ ಸೇರಿದ್ದರು. ಅದರಲ್ಲಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಮಾಧ್ಯಮಗಳು ಹೇಳುವ ರೀತಿ ವಿಶೇಷ ಬದಲಾವಣೆಗೆ ಒತ್ತಡ ಹಾಕಲಾಗುತ್ತಿದೆ ಎಂದು ಅರ್ಥ ಕಲ್ಪಿಸಲು ಸಾಧ್ಯವಿಲ್ಲ. ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಅವರೇ ಔತಣಕೂಟದಲ್ಲಿ ಸೇರಿರುವಾಗ ಇದರಲ್ಲಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಚಿವ ಪರಮೇಶ್ವರ್‌ ಕರೆದಿದ್ದ ಡಿನ್ನರ್‌ ಮೀಟಿಂಗ್‌ ಮುಂದೂಡಿಕೆ

siddaramaiah 6

ಪರಮೇಶ್ವರ್ ಅವರು ಪರಿಶಿಷ್ಟ ಜಾತಿ, ಸಮುದಾಯದ ಸಚಿವರು ಹಾಗೂ ಶಾಸಕರ ಸಭೆ ಕರೆದಿದ್ದಾರೆ ಎಂದು ಕೇಳಿದಾಗ, ಸಭೆ ಕರೆಯಬಾರದು ಅಂತೇನಿಲ್ಲವಲ್ಲ? ಅವರೂ ಸಭೆ ಕರೆಯಬಹುದು, ನೀವು ಕರೆಯಬಹುದು, ನಾನೂ ಕರೆಯಬಹುದು. ಊಟಕ್ಕೆ ಕರೆಯುವುದರಲ್ಲಿ ಯಾವುದೇ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಪರಮೇಶ್ವರ್ ಅವರು ನಮ್ಮ ಹಿರಿಯ ನಾಯಕರು, ಗೃಹಮಂತ್ರಿಗಳು. ಅವರಿಗೆ ತಮ್ಮದೇ ಆದ ಒತ್ತಡಗಳಿವೆ. ಅವರ ಸಮುದಾಯದ ಶಾಸಕರು ಅವರ ಮುಂದೆ ಕೆಲವು ಬೇಡಿಕೆ ಇಟ್ಟಿರಬಹುದು. ಬಜೆಟ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬೇಡಿಕೆ ಪೂರೈಸಲು ಚರ್ಚೆ ಮಾಡಬಹುದು. ಮತ್ತೊಂದು ಕಾಂತರಾಜು ಅವರ ವರದಿ ಬಗ್ಗೆ ಚರ್ಚೆ ಆರಂಭವಾಗಿವೆ. ಈ ಬಗ್ಗೆ ಚರ್ಚೆ ನಡೆಸಲು ಸಭೆ ಸೇರುವುದು ಸಾಮಾನ್ಯ. ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಎಂಬ ಶಿವಕುಮಾರ್ ಅವರ ಹೇಳಿಕೆ ನಂತರ ಈ ಬೆಳವಣಿಗೆಗಳು ನಡೆಯುತ್ತಿವೆ ಅಂತೇನು ಇಲ್ಲ. ಈ ಬಗ್ಗೆ ಶಿವಕುಮಾರ್ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದು, ಈ ವಿಚಾರವಾಗಿ ನಾನು ಹೇಳುವುದೇನು ಇಲ್ಲ ಎಂದು ತಿಳಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದಾರೆ. ಕರ್ನಾಟಕದ ಅಭಿವೃದ್ಧಿ ಹಾಗೂ ಸೇವೆ ಮಾಡಲು ಕುಮಾರಸ್ವಾಮಿ ಅವರಿಗೆ ಉತ್ತಮ ಅವಕಾಶ ಸಿಕ್ಕಿದೆ. ರಾಜ್ಯದ ಅಭಿವೃದ್ಧಿಗೆ ಅವರು ತಮ್ಮ ಸಲಹೆ ನೀಡಲಿ. 2025ನೇ ವರ್ಷದಲ್ಲಾದರೂ ದೇವರು ಅವರಿಗೆ ಒಳ್ಳೆಯ ಬುದ್ಧಿ ನೀಡಲಿ. ರಾಜ್ಯದ ಜನರ ಹಿತದೃಷ್ಟಿಯಿಂದ ಅವರ ಸಲಹೆ ಇರಲಿ. 60%, 40% ಆರೋಪ ಬಿಟ್ಟು, ಅವರಿಗೆ ಕೇಂದ್ರ ಸರ್ಕಾರದಲ್ಲಿರುವ ಅಧಿಕಾರ ಬಳಸಿಕೊಂಡು, ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬಹುದು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾದ ಪಾಲಿನ ಬಗ್ಗೆ, ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಲಿ. ಶನಿವಾರ, ಭಾನುವಾರ ಬಂದು ಆರೋಪ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಚುನಾವಣೆ ಇನ್ನು ಬಹಳ ದೂರವಿದೆ. ಈಗ ಆರೋಪ ಮಾಡುವುದು ಬೇಡ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡಲಿ. ನಾವು ಅವರಿಂದ ಅಭಿವೃದ್ಧಿ ಚಿಂತನೆ ನಿರೀಕ್ಷಿಸುತ್ತೇನೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಸರ್ಕಾರ ಕೊಟ್ಟ ಹಣ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ

DK Shivakumar 5

ಸಿಎಂ ಕುರ್ಚಿ ಬಗ್ಗೆ ಚರ್ಚೆಯಾಗುತ್ತಿದ್ದು, 2028ಕ್ಕೆ ಸಿಎಂ ಆಕಾಂಕ್ಷಿ ಎಂಬ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ವಿಚಾರವಾಗಿ ನೀವು ಅವರನ್ನೇ ಕೇಳಬೇಕು. ಅವರು ಆಕಾಂಕ್ಷಿಯಾಗಿದ್ದರೆ, ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರು ನಮ್ಮ ಪಕ್ಷದ ನಾಯಕರು, ಸಮುದಾಯದ ಮುಖಂಡರು. ರಾಜಕೀಯದಲ್ಲಿರುವವರು ತಮ್ಮದೇ ಆಸೆ ಆಕಾಂಕ್ಷಿ ಇಟ್ಟುಕೊಂಡಿರುತ್ತಾರೆ. ಅವರೊಬ್ಬರೆ ಅಲ್ಲ, ಈ ಆಸೆ ಆಕಾಂಕ್ಷೆ ಇಟ್ಟುಕೊಂಡಿರುವ ಸಾಕಷ್ಟು ಜನ ಇದ್ದಾರೆ. ಅದು ತಪ್ಪು ಎಂದು ಹೇಳಲು ಆಗುವುದಿಲ್ಲ. ಅವರನ್ನು ಸಿಎಂ ಮಾಡುವ ಬಗ್ಗೆ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ನಂತರ ಸಿಎಂ ಮಾಡುವ ವಿಚಾರ ಚರ್ಚೆಯಾಗುತ್ತದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಜವಾಬ್ದಾರಿ ನಮ್ಮ 140 ಶಾಸಕರ ಮೇಲಿದೆ. ಕಾಂಗ್ರೆಸ್ ಪಕ್ಷವನ್ನು ಜನ ಅಧಿಕಾರಕ್ಕೆ ತಂದಿದ್ದು, ಇದಕ್ಕೆ ಎಷ್ಟು ಕಷ್ಟಪಡಲಾಗಿದೆ ಎಂದು ಎಲ್ಲರೂ ಅರಿತು ಎಚ್ಚರಿಕೆ ನಡೆ ಇಡಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು ಕೂತಿದ್ದಾರೆ. ಆ ಸ್ಥಾನಗಳು ಖಾಲಿಯಾಗುವ ಸಂದರ್ಭದಲ್ಲಿ ಪಕ್ಷ ಅದರ ಬಗ್ಗೆ ಚರ್ಚೆ ಮಾಡಲಿದೆ. ನಾನು ನೀವು ಇಲ್ಲಿ ಕೂತು ಚರ್ಚೆ ಮಾಡಿದರೆ ಅರ್ಥವಿಲ್ಲ. ಏನೇ ತೀರ್ಮಾನ ಮಾಡಬೇಕಾದರೂ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಬೇಕು. ಆಕಾಂಕ್ಷಿಗಳು ಇದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಅವರೇ ಇರಬೇಕು ಎಂದೇನಿಲ್ಲ. ಅವರು ನಾಲ್ಕೈದು ವರ್ಷಗಳಿಂದ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ಆ ಹುದ್ದೆಗೆ ಸತೀಶ್ ಜಾರಕಿಹೊಳಿ, ರಾಜಣ್ಣ, ಪರಮೇಶ್ವರ್ ಅವರು ಮತ್ತೊಮ್ಮೆ ಆದರೂ ಸಂತೋಷ. ಈ ಸ್ಥಾನ ಅಲಂಕರಿಸಬೇಕು ಎಂದು ಬೇರೆ ಯಾರಿಗೆ ಆತುರವಿದೆಯೋ ಅವರೇ ಆದರೂ ಸಂತೋಷ. ಯಾರೂ ಆಗಬಾರದು ಎಂಬುದೇನಿಲ್ಲ. ಪಕ್ಷದ ದೃಷ್ಟಿಯಿಂದ ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಬೇಕಾದ ಗುರುತರ ಜವಾಬ್ದಾರಿ ಎಲ್ಲಾ ನಾಯಕರ ಮೇಲಿದೆ. ಸಿದ್ದರಾಮಯ್ಯ ಅವರು ಬೇಕಾದರೂ ಅಧ್ಯಕ್ಷರಾಗಬಹುದು, ನಾನಂತೂ ಆಕಾಂಕ್ಷಿಯಲ್ಲ. ಅಧ್ಯಕ್ಷ ಸ್ಥಾನ ಬದಲಾವಣೆಗೆ ಪಕ್ಷದಲ್ಲಿ ತರಾತುರಿಯಿಲ್ಲ, ಯಾರೂ ತರಾತುರಿಯಲ್ಲಿಲ್ಲ. ಪಕ್ಷದ ಏಳಿಗೆ, ಒಳಿತು ಬಯಸುವವರು, ಜನರ ಸಂಕಷ್ಟ ಅರಿತಿರುವವರು, ತಮ್ಮ ಮುಂದಿರುವ ಸವಾಲು ತಿಳಿದು ಪಕ್ಷವನ್ನು ಸಂಘಟಿಸುವವರು ಈ ಸ್ಥಾನಕ್ಕೆ ಆಯ್ಕೆಯಾಗಬೇಕು ಎಂದು ಚಿಂತನ ಮಂಥನ ಸಭೆ ನಡೆದರೆ ಒಳ್ಳೆಯದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 60% ಕಮಿಷನ್ ಆರೋಪಕ್ಕೆ ಗುತ್ತಿಗೆದಾರರ ಬಾಕಿ ಹಣದ ಪಟ್ಟಿ ರಿಲೀಸ್ ಮಾಡಿದ ಹೆಚ್‌ಡಿಕೆ

ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ಬೇಡಿಕೆ ವಿಚಾರವಾಗಿ ಮಾತನಾಡಿ, ಅಧ್ಯಕ್ಷ ಸ್ಥಾನವನ್ನು ಪಕ್ಷ ಶಿವಕುಮಾರ್ ಅವರಿಗೆ ನೀಡಿದೆಯೇ ಹೊರತು, ಶಿವಕುಮಾರ್ ಅವರು ಕಿತ್ತುಕೊಂಡಿಲ್ಲ. ಪಕ್ಷದ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಖರ್ಗೆ ಅವರು ಶಿವಕುಮಾರ್ ಅವರಿಗೆ ಈ ಜವಾಬ್ದಾರಿ ನೀಡಿದ್ದಾರೆ. ಅವರು ಬೇಡ ಎಂದು ತೀರ್ಮಾನಿಸಿದರೆ ಈ ಸ್ಥಾನ ತ್ಯಜಿಸಲು ಶಿವಕುಮಾರ್ ಅವರು ಸಿದ್ಧರಿದ್ದಾರೆ. ಇವು ಶಾಶ್ವತವಾದ ಹುದ್ದೆಗಳಲ್ಲ. ತೀರ್ಮಾನ ಮಾಡಬೇಕಾದವರು ವರಿಷ್ಠರು. ಒಂದು ವ್ಯಕ್ತಿಗೆ ಒಂದು ಹುದ್ದೆ ಎಂದು ಹೇಳುವುದು ಎಐಸಿಸಿ ನಾಯಕರನ್ನು ಪ್ರಶ್ನೆ ಮಾಡುವಂತಾಗುತ್ತದೆ. ಇಂತಹ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ದೃಷ್ಟಿಯಿಂದ ಯಾರು ಬೇಕಾದರೂ ತಮ್ಮ ಬೇಡಿಕೆ, ಸಲಹೆಗಳನ್ನು ಅವರ ಮುಂದೆ ಇಡಬಹುದು ಎಂದರು.

TAGGED:bengaluruD.K.SureshDinner Meetingಡಿ.ಕೆ.ಸುರೇಶ್ಡಿನ್ನರ್ ಮೀಟಿಂಗ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
12 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
13 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
23 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
35 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
46 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?