Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತದೆ: ಧ್ರುವನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತದೆ: ಧ್ರುವನಾರಾಯಣ್

Districts

ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತದೆ: ಧ್ರುವನಾರಾಯಣ್

Public TV
Last updated: November 26, 2021 3:50 pm
Public TV
Share
4 Min Read
CNG DHRUVANARAYANA
SHARE

ಮಂಡ್ಯ: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ನಮ್ಮ ಪಕ್ಷದಿಂದ ಎಲ್ಲಾ ಸಮುದಾಯವರಿಗೆ ಟಿಕೆಟ್ ನೀಡುವ ಮೂಲಕ ಅದು ಸಾಭಿತಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೇಳಿದಂತೆ ನಡೆದುಕೊಳ್ಳುತ್ತ ಬಂದಿದೆಯೇ ಎಂದು ಮಾಜಿ ಸಂಸದ ಧ್ರುವನಾರಾಯಣ್ ಅವರು ಕೇಳಿದರು.

ಶುಕ್ರವಾರ ಕೃಷ್ಣರಾಜನಗರದ ಶ್ರೀಮತಿ ಜಯಮ್ಮ ಶಿವಲಿಂಗಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರಿಗೆ, ದಲಿತರಿಗೆ, ಹಿಂದುಳಿದ ವರ್ಗದವರಿಗೆ ಟೀಕೆಟ್ ನೀಡುತ್ತಾ ಬೆಳೆಸುತ್ತಾ ಬಂದಿದೆ. ಆದರೆ ಬಿಜೆಪಿ ಅವರು ಹೇಳಿದಂತೆ ನಡೆದುಕೊಳ್ಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

congress flag 1

ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ದಿನೇಶ್ ಅವರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರು ಪಾದರಸದಂತೆ ಕೆಲಸ ಮಾಡುವುದನ್ನು ಕಂಡು ಹಲವಾರು ಸಚಿವರು ವಿಶೇಷ ಕರ್ತವ್ಯಾಧಿಕಾರಿಯಾಗಿ ಕರೆದುಕೊಂಡಿದ್ದಾರೆ. ಹೀಗಾಗಿ ಇಂತಹ ವ್ಯಕ್ತಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಮಂಡ್ಯದ ಸ್ವಾಭಿಮಾನ ಉಳಿಸಿದ್ದಾರೆಯೇ?: ಜೆಡಿಎಸ್ ನಿಂದ ಗೆದ್ದು ಹೋದವರು ವಿಧಾನ ಪರಿಷತ್ತಿನಲ್ಲಿ ಇಲ್ಲಿನ ಸಮಸ್ಯೆಗಳನ್ನು ಎತ್ತಿ ಹಿಡಿದಿದ್ದಾರೆಯೇ. ಕೇವಲ ಅಧಿಕಾರಕ್ಕಾಗಿ ಬಂದು ಇಲ್ಲಿ ಇಂದು ಮತ ಕೇಳುತ್ತಿದ್ದಾರೆ. ಅವರು ಮಂಡ್ಯದ ಸ್ವಾಭಿಮಾನದ ಜೊತೆಗೆ ಇಲ್ಲಿನ ಜನರ ಸ್ವಾಭಿಮಾನವನ್ನು ಕುಂಠಿತಗೊಳಿಸಿದ್ದಾರೆ ಎಂದು ನರೇಂದ್ರ ಸ್ವಾಮಿ ಕೇಳಿದರು.

Congress Flag

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇಲ್ಲಿಗೆ ಕೊಟ್ಟಿರುವ ಆಶ್ವಾಸನೆಗಳು, ಅಭಿವೃದ್ಧಿಗಳು ಈಡೇರಿದೆಯೇ ಎಂದು ಆತ್ಮವಲೋಕನ ಮಾಡಿಕೊಳ್ಳಬೇಕು. 15ನೇ ಹಣಕಾಸು ಯೋಜನೆ ಹಣವನ್ನು ಜಲಜೀವನ್ ಮೀಷನ್ ಗೆ ನೀಡಿದ್ದಾರೆ. ಇದರಿಂದ ಯಾರಿಗಾದರೂ ಅನುಕೂಲವಾಗಿದೆಯೇ ಎಂದು ಪ್ರಶ್ನಿಸಿದರು. ಹಾಲಿಗೆ ನೀರು ಬೇರೆಸಿ ಅಕ್ರಮವಾಗಿ ಹಣ ಲೂಟಿ ಮಾಡುತ್ತಿದ್ದವರು ತನಿಖೆಗೆ ಒಪ್ಪಿಕೊಳ್ಳಲಿ. ಇಂದು ರೈತರು ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಬೇಕು. ರೈತರಿಗೆ ಮೋಸ ಮಾಡುವ ಜನರನ್ನು ಮತ್ತೆ ಅಧಿಕಾರಕ್ಕೆ ತರಬೇಕೆ ಎಂದರು.

ಸುಳ್ಳು ಭರವಸೆಗಳ ನಾಯಕರು: ಈ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಹಲವಾರು ಆಸೆ ಆಮಿಷಗಳನ್ನು ಜನರಿಗೆ ತೋರಿಸಿ ಅಧಿಕಾರಕ್ಕೆ ಬಂದರು. 40% ಕಮಿಷನ್ ಅನ್ನು ಬಿಜೆಪಿ ಸರ್ಕಾರ ತೆಗೆದುಕೊಳ್ಳುತ್ತಿದೆ. ಅವರಿಗೆ ಮಾನ ಮರ್ಯಾದೆ ಇದೆಯಾ ಎಂದು ಕೆ.ಬಿ.ಚಂದ್ರಶೇಖರ್ ಹೇಳಿದರು.

ಜೆಡಿಎಸ್ ಇರೊದು ಅಲ್ಲೊಂದು ಇಲ್ಲೊಂದು. ಕಳೆದ ಬಾರಿ ವಿಧಾನ ಸಭೆಯಲ್ಲಿ ನಿಂತಾಗ ಕುಮಾರಸ್ವಾಮಿ ಅವರು ವಯಸ್ಸಾದವರಿಗೆ 6000 ರೂ ಕೊಡುತ್ತೇನೆ, ಸಾಲ ಮನ್ನಾ ಮಾಡುತ್ತೇನೆ ಎಂದವರು ಮಾಡಿದ್ದಾರೆಯೇ. ಅಧಿಕಾರಕ್ಕೆ ಬರಲು ಕೇವಲ ಇಂತಹ ಟೊಳ್ಳು ಭರವಸೆಗಳನ್ನು ಕೊಡುತ್ತಾರೆ ಎಂದರು.

ಮತ ಕೇಳುವ ಯಾವ ನೈತಿಕತೆಯೂ ಇಲ್ಲ: ಜೆಡಿಎಸ್ ನಿಂದ ಗೆದ್ದು ಇದೀಗ ಮತ ಕೇಳಲು ಬಂದಿರುವ ಅಪ್ಪಾಜಿ ಗೌಡ ಅವರಿಗೆ ಮತ ಕೇಳುವ ಯಾವ ನೈತಿಕತೆಯೂ ಇಲ್ಲ.ಅವರು ಯಾವುದಾದರೂ ಅಭಿವೃದ್ಧಿ ಕೆಲಸವನ್ನು ಜಿಲ್ಲೆಯಲ್ಲಿ ಮಾಡಿದ್ದಾರೆಯೇ ಎಂದು ಸಿ.ಡಿ.ಗಂಗಾಧರ್ ಪ್ರಶ್ನಿಸಿದರು. ಇದನ್ನೂ ಓದಿ: ಕಮಿಷನ್ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ: ಹೆಚ್.ಡಿ.ರೇವಣ್ಣ ಒತ್ತಾಯ

ಜೆಡಿಎಸ್ ನಿಂದ ಅಂದು ಗೆದ್ದು ಹೋದವರು ಮತ್ತೆ ಆರು ವರ್ಷ ನಂತರ ಬಂದಿದ್ದಾರೆ. ಇವರು ಜಿಲ್ಲೆಯಲ್ಲಿ ಯಾವುದಾದರೂ ಅಭಿವೃದ್ಧಿ ಕಾರ್ಯ ಮಾಡಿದ್ದಾರೆಯೇ ಎಂದು ಅವರಿಗೆ ಇಂದು ಕೇಳಬೇಕಾಗಿದೆ. ಹೀಗಾಗಿ ಮತ್ತೆ ಇಂತವರು ಮತ್ತೆ ಮತ ಕೇಳಲು ಬಂದಿದ್ದಾರೆ. ಇಂತಹವರನ್ನು ನಾವು ಮತ್ತೆ ಗೆಲ್ಲಿಸಬೇಕೆ ಎಂದರು.

congress flag b

ಜೆಡಿಎಸ್ ಜಿಲ್ಲೆಯಲ್ಲಿ ಯಾವುದಾದರೂ ಒಂದು ಸಭೆಯನ್ನು ಮಾಡಿಲ್ಲ. ಹೀಗಾಗಿ ನಮ್ಮ ಅಭ್ಯರ್ಥಿ ದಿನೇಶ್ ಗೂಳಿಗೌಡ ಅವರ ಗೆಲುವು ಇಂದು ನಮಗೆ ಅನಿವಾರ್ಯವಾಗಿದೆ. ಅವರನ್ನು ಗೆಲ್ಲಿಸಲು ನಾವು ಒಗ್ಗಟ್ಟಿನಿಂದ ಮುಂದೆ ಸಾಗಬೇಕಾಗಿದೆ ಎಂದು ಹೇಳಿದರು. ಇದೇ ವೇಳೆ ಮಾಜಿ ಶಾಸಕ ಪ್ರಕಾಶ್ ಅವರು ಮಾತನಾಡಿ, ಮುಂದೆ ಬರಲಿರುವ ಚುನಾವಣೆಗೆ ನಮಗೆ ಹಾಗೂ ನಮ್ಮ ಪಕ್ಷಕ್ಕೆ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಯಾದ ದಿನೇಶ್ ಗೂಳಿಗೌಡ ಅವರನ್ನು ಗೆಲ್ಲಿಸುವ ಮೂಲಕ ನಾವು ಸಕ್ರಿಯರಾಗಿರುವುದನ್ನು ತೋರಿಸಬೇಕು ಎಂದು ಹೇಳಿದರು.

ದಿನೇಶ್ ಗೂಳಿಗೌಡ ಅವರನ್ನು ಗೆಲ್ಲಿಸಲು ಮತದಾರರ ಮನವೋಲಿಸಬೇಕು. ಹೀಗಾಗಿ ನಾವೆಲ್ಲರೂ ಒಟ್ಟಾಗಿ ಓಡಾಡಬೇಕು. ನಿಮ್ಮ ವ್ಯಾಪ್ತಿಯಲ್ಲಿರುವ ಮತದಾರರ ಮನವೋಲಿಸಲು ಶ್ರಮಿಸಿ. ನಿಮಗೆ ನಾವೂ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಾಗಿದ್ದೇವೆ ಎಂದರು. ಇದನ್ನೂ ಓದಿ: ಸರ್ಕಾರದ ಕಮಿಷನ್ ಶೇ. 10 ಇದ್ದದ್ದು ಈಗ 30 ಪರ್ಸೆಂಟ್‌ಗೆ ಏರಿದೆ: ಗುತ್ತಿಗೆದಾರ ಕೆಂಪಣ್ಣ ಆರೋಪ

Congress Flag

24*7 ಸೇವೆಗೆ ಸಿದ್ಧ: ಪಕ್ಕದ ಮಾರಸಿಂಗನಹಳ್ಳಿಯವನಾದ ನಾನು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹಂತದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ರೈತ ಕುಟುಂಬದಿಂದ ಬಂದ ನನಗೆ ಇಲ್ಲಿನ ರೈತರ ಹಾಗೂ ಗ್ರಾಮದ ಸಮಸ್ಯೆಗಳ ಬಗ್ಗೆ ಅರಿವಿದೆ ಹೀಗಾಗಿ ನಾನು ನಿಮ್ಮ ಸೇವೆಗೆ ದಿನದ 24ಗಂಟೆಯೂ (24*7) ಸದಾ ಸಿದ್ದನಾಗಿರುತ್ತೇನೆ ಎಂದು ದಿನೇಶ್ ಗೂಳಿಗೌಡ ಹೇಳಿದರು.

ನಾನು ಗೆದ್ದ ನಂತರ ನಿಮ್ಮ ಗ್ರಾಮಗಳಲ್ಲೆ ಬಂದು ವಾಸ್ತವ್ಯ ಹೂಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವೆ. ನಿಮ್ಮ ಕಷ್ಟಗಳನ್ನು ಹಾಗೂ ಗ್ರಾಮದ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹರಿಸುವ ಕಾರ್ಯ ಮಾಡುವ ಮುಖಾಂತರ ಕೊಂಡಿಯಾಗಿ ಸೇವೆ ನೀಡುವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಅಭ್ಯರ್ಥಿ ದಿನೇಶ್ ಗೂಳಿಗೌಡ, ಮುಖಂಡರಾದ ಸುರೇಶ್, ದೇವರಾಜ, ಅಂಜನಾ ಶ್ರೀಕಾಂತ್, ರಮೇಶ್, ಕೃಷ್ಣ, ಪ್ರಸನ್ನ, ವಿಜಯ್ ಕುಮಾರ್, ಮಂಜ, ಸುದರ್ಶನ್, ಗೌರಿಶಂಕರ್ ಸೇರಿದಂತೆ ಇತರರು ಹಾಜರಿದ್ದರು.

TAGGED:congressDhruva Narayanmandyaಕಾಂಗ್ರೆಸ್ಧ್ರುವನಾರಾಯಣಮಂಡ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
4 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
25 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
53 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?