Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ

Latest

ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ

Public TV
Last updated: August 29, 2024 8:07 pm
Public TV
Share
3 Min Read
H.D.Devegowda in Kashmir
SHARE

– ದಾಲ್ ಸರೋವರ, ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ

ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda) ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು.

ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ, ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. ಇದನ್ನೂ ಓದಿ: ರೇಪ್ ಹೇಗಾಗುತ್ತೆ ಎಂದು ಕಂಗನಾಗೆ ಕೇಳಿ, ಆಕೆಗೆ ರೇಪ್ ಅನುಭವ ಇದೆ: ಪಂಜಾಬ್ ಮಾಜಿ ಸಂಸದನ ವಿವಾದಿತ ಹೇಳಿಕೆ

H.D.Devegowda in Kashmir 1

ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು, ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.

ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಮಾಜಿ ಪ್ರಧಾನಿಗಳು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಣೆ ಮಾಡಿಕೊಂಡರಲ್ಲದೆ, ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿಯವರ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ: ಡಿಕೆಶಿ

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ನಾನು ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್ಯತ್ಯಾಸ ಕಾಣುತ್ತಿದೆ. ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ. ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಈ ವಿದ್ಯುತ್ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

H.D.Devegowda in Kashmir 2

ಇದೇ ವೇಳೆ ಮಾಜಿ ಪ್ರಧಾನಿಗಳು ಈ ವಿದ್ಯುತ್ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು.

ರೈಲು ಪ್ರಯಾಣದ ಬಗ್ಗೆ ಸಂತಸ:
ಶ್ರೀನಗರ – ಬಾರಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

1996, 1997ರ ಸಂದರ್ಭದಲ್ಲಿ ಕಾಶ್ಮೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೈಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ರೈಲಿನಲ್ಲಿ ಪ್ರಯಾಣ ಮಾಡಿದ್ದು ನನಗೆ ಮರೆಯಲಾಗದ ಅವಿಸ್ಮರಣೀಯ ಕ್ಷಣ ಎಂದು ಭಾವುಕರಾದರು.

H.D.Devegowda kashmir

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳನ್ನು ರೈಲ್ವೆ ಅಧಿಕಾರಿಗಳು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ರೈಲ್ವೆ ಮಾರ್ಗದ ಬಗ್ಗೆ, ಜತೆಗೆ ಆಗುತ್ತಿರುವ ಉಪಯೋಗದ ಬಗ್ಗೆ ಮಾಜಿ ಪ್ರಧಾನಿಗಳು ಮಾಹಿತಿ ಪಡೆದುಕೊಂಡರು. ಬೆಳಗ್ಗೆ 11:30ಕ್ಕೆ ಶ್ರೀನಗರದಲ್ಲಿ ರೈಲು ಹಿಡಿದ ಮಾಜಿ ಪ್ರಧಾನಿಗಳು, 12:30 ಗಂಟೆಗೆ ಬಾರಮುಲ್ಲಾ ತಲುಪಿದರು.

ತಾವು ಪ್ರಧಾನಿಯಾಗಿದ್ದಾಗ ಕಾಶ್ಮೀರದ ರೈತರಿಗಾಗಿ ಒಟ್ಟು 200 ಕೋಟಿ ರೂ. ಸಾಲ ಮನ್ನಾ ಮಾಡಿದೆ. ಕಣಿವೆ ರಾಜ್ಯದ ಪ್ರತಿ ರೈತರ 50,000 ರೂ. ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಮಾಜಿ ಪ್ರಧಾನಿಗಳು ಸುದ್ದಿಗಾರರ ಜತೆ ಮಾತಾಡುತ್ತಾ ಹೇಳಿದರು. ಇಂದು ಮಾಜಿ ಪ್ರಧಾನಿಗಳು ಶ್ರೀನಗರದ ದಾಲ್ ಸರೋವರ ಹಾಗೂ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

TAGGED:H.D.Deve Gowdakashmirಕಾಶ್ಮೀರಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Is Dhanush Dating Mrunal Thakur
ಧನುಷ್ ಜೊತೆ ಮೃಣಾಲ್ ಠಾಕೂರ್ ಲವ್ವಿ ಡವ್ವಿ?
Cinema Latest South cinema
Andrea Jeremiah
ನಗ್ನ ದೃಶ್ಯದಲ್ಲಿ ನಟಿಸೋಕೆ ನಾನು ರೆಡಿ ಎಂದ ಆಂಡ್ರಿಯಾ!
Cinema Latest South cinema Top Stories
gilli and kavya bigg boss
ಇನ್ಮುಂದೆ ಫ್ರೆಂಡ್‌ಶಿಪ್‌ ಎಲ್ಲ ನೋ..: ‘ಕಾವು’ ಹೀಗಂದಿದ್ದು ಗಿಲ್ಲಿಗೇನಾ?
Cinema Latest Top Stories TV Shows
dhanush dhruvanth
ಬಿಗ್‌ಬಾಸ್ ಮನೇಲಿ ಅಶ್ವಿನಿ ಸೈಲೆಂಟ್.. ಧ್ರುವಂತ್ ವೈಲೆಂಟ್!
Cinema Latest Top Stories TV Shows

You Might Also Like

Siddaramaiah Congress D.K Shivakumar
Bengaluru City

ಶನಿವಾರ ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್!

Public TV
By Public TV
3 hours ago
Students Crying Over Teacher Transfer in Mundargi Gadaga
Districts

ʻನಮ್ಮನ್ನು ಬಿಟ್ಟು ಹೋಗಬೇಡಿ ಸರ್‌ʼ – ಕಣ್ಣೀರಿಟ್ಟ ವಿದ್ಯಾರ್ಥಿಗಳು

Public TV
By Public TV
3 hours ago
Siddaramaiah 15
Bengaluru City

ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ: ಸಿದ್ದರಾಮಯ್ಯ

Public TV
By Public TV
4 hours ago
METRO GIRL
Latest

ಮುಗುಳ್ನಗೆಯಲ್ಲಿ ಹೃದಯ ದೋಚಿ ಹೋದವಳಿಗೊಂದು ಪತ್ರ..!

Public TV
By Public TV
4 hours ago
BT Lalitha Naik
Crime

ʻಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳುʼ- ಲಲಿತಾ ನಾಯ್ಕ್‌ ವಿರುದ್ಧ ಕೇಸ್‌

Public TV
By Public TV
4 hours ago
PM Narendra Modi unveils 77 foot Lord Ram bronze statue in Canacona Goa
Latest

ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?