Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕ್ತಿ ಮೀರಿ ಪ್ರಾದೇಶಿಕ ಪಕ್ಷ ಉಳಿಸಲು ಪ್ರಯತ್ನಿಸುತ್ತೇನೆ- ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಕ್ತಿ ಮೀರಿ ಪ್ರಾದೇಶಿಕ ಪಕ್ಷ ಉಳಿಸಲು ಪ್ರಯತ್ನಿಸುತ್ತೇನೆ- ಎಚ್‍ಡಿಡಿ

Districts

ಶಕ್ತಿ ಮೀರಿ ಪ್ರಾದೇಶಿಕ ಪಕ್ಷ ಉಳಿಸಲು ಪ್ರಯತ್ನಿಸುತ್ತೇನೆ- ಎಚ್‍ಡಿಡಿ

Public TV
Last updated: August 24, 2019 8:44 pm
Public TV
Share
3 Min Read
HDD
SHARE

ಹಾಸನ: ಶಕ್ತಿ ಮೀರಿ ಪ್ರಾದೇಶಿಕ ಪಕ್ಷ ಉಳಿಸಲು ಪ್ರಯತ್ನಿಸುತ್ತೇನೆ. ನನ್ನ ಹಿಂದೆ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ಪ್ರತಿನಿತ್ಯ ನಾನು ದೆಹಲಿಗೆ ಹೋಗುತ್ತಿಲ್ಲ. ರಾಷ್ಟ್ರ ರಾಜಕಾರಣ ಮಾತನಾಡಲು ಬೇರೆ ನಾಯಕರು ಕರೆದರು ಸಹ ನಾನು ಹೋಗಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಹೊಳೆನರಸಿಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 15 ದಿನದಿಂದ ಪಕ್ಷದ ಕಚೇರಿಯಲ್ಲಿ ಇದ್ದೇನೆ. ಪ್ರತಿ ಜಿಲ್ಲೆಯಲ್ಲಿ ಪಕ್ಷ ತಳಮಟ್ಟದಿಂದ ಕಟ್ಟಲು ಪದಾಧಿಕಾರಿಗಳು ಮಾಡುವ ಕೆಲಸ ಗುರುತಿಸುತ್ತಿದ್ದೇನೆ ಎಂದರು.

ವಿಶ್ವನಾಥ್ ಬಿಟ್ಟು ಹೋದ ಮೇಲೆ ಕುಮಾರಸ್ವಾಮಿ ಪಕ್ಷ ನಿಷ್ಠೆಯಿಂದ ಇದ್ದಾರೆ. 6 ಬಾರಿ ಶಾಸಕರಾಗಿದ್ದಾರೆ. ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಈ ಸರ್ಕಾರ ಮೂರು ವರ್ಷ ಎಂಟು ತಿಂಗಳು ನಡೆಯಬಹುದು. ನಮ್ಮ ಯಾವುದೇ ತಕರಾರು ಇಲ್ಲ. ಒಳ್ಳೆಯ ಕೆಲಸ ಮಾಡಿದರೆ ಸಂತೋಷ ಪಡುತ್ತೇವೆ. ಜನರ ಸಮಸ್ಯೆಗಳಿಗೆ ಹೋರಾಡುತ್ತೇವೆ ಎಂದು ಅವರು ತಿಳಿಸಿದರು.

HDD 1

ಕೇಂದ್ರ ಮತ್ತು ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ. ಕೇಂದ್ರದಿಂದ ಸಾಕಷ್ಟು ಹಣ ಬಿಡುಗಡೆ ಮಾಡಿಸಲು ಯಡಿಯೂರಪ್ಪ ಶಕ್ತರು ಎನ್ನುವ ಭರವಸೆ ಇದೆ. ವಾಜಪೇಯಿ ಪ್ರಧಾನಿ ಆಗಿದ್ದಾಗ ನಾನು ಬರಕ್ಕಾಗಿ ಅವರ ಬಳಿ ರೈತರನ್ನು ಕರೆದುಕೊಂಡು ದಿಲ್ಲಿಗೆ ಹೋಗಿದ್ದೆನು. ವಿಧಾನಸಭೆ, ಲೋಕಸಭೆ ಇದ್ದರೂ ಇಲ್ಲದಿದ್ದರೂ ನಾನು ನನ್ನ ರಾಜಕಾರಣ ಮಾಡಿದ್ದೇನೆ ಎಂದರು.

ನಾನೇನು ಕೆಲಸ ಮಾಡಿದ್ದೇನೆ, ಪ್ರಧಾನಿ, ಸಿಎಂ ಆಗಿದ್ದಾಗ ಎಲ್ಲಾ ವಿಚಾರಗಳನ್ನು ಗಮನ ಇಟ್ಟುಕೊಂಡು ಕೆಲಸ ಮಾಡುತ್ತೇನೆ. ಇದರಲ್ಲಿ ದೈವಾನುಗ್ರಹ ಬೇಕು. ಇದಕ್ಕಾಗಿ ಪ್ರತಿವರ್ಷ ದೇವರ ಬಳಿ ಹೋಗುತ್ತೇನೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನ ಸಂಬಂಧ ಪ್ರತಿಕ್ರಿಯಿಸಿದ ಎಚ್‍ಡಿಡಿ, ಜೇಟ್ಲಿ ನಿಧನವಾಗಿದ್ದು ತೀವ್ರವಾಗಿ ದುಖದ ವಿಚಾರವಾಗಿದೆ. ಒಬ್ಬ ಮುತ್ಸದಿ ನಾಯಕ. ಯಾವುದೇ ಪಕ್ಷವಾಗಲಿ, ಮಂತ್ರಿಗಳಾಗಿ ಹಲವಾರು ಇಲಾಖೆಗಳಲ್ಲಿ ಜವಾಬ್ದಾರಿ ನಿರ್ವಹಣೆ ಮಾಡಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿ ಸಂತಾಪ ಸೂಚಿಸಿದರು.

siddaramaiah

ಹಾಸನದಲ್ಲಿ ನಾನು 29 ವರ್ಷ ವಿಧಾನಸಭಾ ಕ್ಷೇತ್ರ ಮತ್ತು 25 ವರ್ಷ ಶಾಸಕನಾಗಿ ನನ್ನ ಕೆಲಸ ಮಾಡಿದ್ದೇನೆ. ನನ್ನ ಜನತೆಗೆ ನೋವು ಇದೆ. ನೀವು ಇಲ್ಲೇ ಚುನಾವಣೆಗೆ ನಿಲ್ಲಬೇಕು ಎಂದು ಅಭಿಮಾನಿಗಳು ಒತ್ತಾಯ ಮಾಡಿದರು. ಆದರೆ ಕೆಲವೊಮ್ಮೆ ವಿಧಿ ನಮ್ಮ ಕೈಯಲ್ಲಿ ಇರೋದಿಲ್ಲ. ಧರ್ಮರಾಯ ಎಲ್ಲರನ್ನು ಕರೆದುಕೊಂಡು ಬರುತ್ತಾನೆ. ಕಾಲ ಕಳೆಯಲು ಅವಕಾಶ ಇದೆ ಎಂದು ಹೇಳಿ ಜೂಜಿನಲ್ಲಿ ಎಲ್ಲವನ್ನು ಕಳೆದುಕೊಂಡು ದ್ರೌಪದಿ ಶಾಪ ಕೊಟ್ಟಾಗ ಇಂದ್ರಪ್ರಸ್ಥ ತಲುಪುವುದೇ ಇಲ್ಲ. ಒಂದೇ ಆಟ ಎಂದು ಹೇಳಿ ಕೊನೆಯ ಆಟ ಆಡುತ್ತಾನೆ. ಅದೇ ಮೋಸಗಾರನ ಜೊತೆಯಲ್ಲಿಯೇ ಆಡುತ್ತೇನೆ ಎಂದು ಧರ್ಮರಾಯ ಹಸ್ತಿನಾಪುರದ ರಾಜನಿಗೆ ಹೇಳುತ್ತಾನೆ. ಅದೇ ರೀತಿ ನಾನು ಕೂಡ ಮೋಸ ಆಗುವುದು ಗೊತ್ತಿದ್ದರೂ ಚುನಾವಣೆಗೆ ನಿಂತು ಸೋತೆ ಎಂದು ಹೇಳಿದರು.

ಆಂಗ್ಲ ಪತ್ರಿಕೆಯಲ್ಲಿ ಕೊಟ್ಟ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡಿದ ಬಗ್ಗೆ ಈಗ ಯಾಕೆ. ಜನರ ಬಳಿ ಹೋಗೋಣ. ಅವರೇ ತೀರ್ಮಾನಿಸುತ್ತಾರೆ. ಮುಂದೆ ಹೋರಾಟ ಮಾಡುವವನು ನಾನೇ ತಾನೇ, ಹೀಗಾಗಿ ಮುಂದೆ ಮಾತಾಡುತ್ತೇನೆ. ನಾನು ಯಾರನ್ನೂ ನಿಂದನೆ ಮಾಡಿಲ್ಲ. ಸಿದ್ದರಾಮಯ್ಯ ಕುರಿತು ಪದೇ ಪದೇ ಹೇಳಿಕೊಳ್ಳುವ ಅವಶ್ಯಕತೆ ಇಲ್ಲ. ನನಗೆ ಈ ಪಕ್ಷ ಕಟ್ಟುವುದು ದೊಡ್ಡ ವಿಚಾರ. ನನ್ನ ಪಕ್ಷದ ಕಾರ್ಯಕರ್ತರ ಭರವಸೆ ನನಗೆ ಇದೆ ಎಂದು ಗರಂ ಆದರು.

HDD 2

ರೇವಣ್ಣ ಉತ್ತರ ಕರ್ನಾಟಕ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಿದ್ದಾರೆ. ನಿಖಿಲ್ ಸಹ ಕೆಲಸ ಮಾಡುತ್ತಿದ್ದಾರೆ. ಸೋತರೂ ಸಹ ಕೆಲಸ ಮಾಡುತ್ತೇವೆ. ಜನ ಕೊಟ್ಟ ತೀರ್ಮಾನಕ್ಕೆ ತಲೆಬಾಗಿದ್ದೇವೆ. ಈ ಸರ್ಕಾರ ಎಷ್ಟು ದಿನ ಉಳಿಯುತ್ತದೆ ನೋಡೋಣ ಎಂದರು.

TAGGED:hassanhd deveowdajdsPublic TVಎಚ್.ಡಿ. ದೇವೇಗೌಡಜೆಡಿಎಸ್ಪಬ್ಲಿಕ್ ಟಿವಿಹಾಸನ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
5 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
6 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
6 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
6 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
6 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?