ಬೆಂಗಳೂರು: ಕಾಂಗ್ರೆಸ್ಗೆ ಈಗ ಒಂದು ಕಡೆ ಆಪರೇಷನ್ ಕಮಲ ಭೀತಿ, ಮತ್ತೊಂದು ಕಡೆ ಮೈತ್ರಿಧರ್ಮದ ಆತಂಕ ಎದುರಾಗಿದೆ. ಮೈತ್ರಿ ಧರ್ಮ ಪಾಲನೆ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ ಅಂತ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೇಲೆ ಹಿಡಿತಕ್ಕೆ ಯತ್ನಿಸುವುದು ಒಳ್ಳೆಯದಲ್ಲ. ಯಾರಾದರೂ ಪ್ರಯತ್ನಿಸಿದರೆ ಅದು ದುರಂತಕ್ಕೆ ಕಾರಣವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿಗಳಿಗೆ ಪ್ರಯೋಜನ ಆಗಲು ಬಿಡಬೇಡಿ ಎಂದು ಹೇಳಿದ್ದಾರೆ.
ದೇವೇಗೌಡರು ಸಿದ್ದರಾಮಯ್ಯ ಅವರನ್ನ ಟೀಕಿಸಿದ್ದಾರಾ ಅಂತ ಚಿಂತಿಸೋ ಹೊತ್ತಲ್ಲೇ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಮೈತ್ರಿ ಸರ್ಕಾರ ಉರುಳಿಸೋಕೆ ಸಿದ್ದರಾಮಯ್ಯ ಹೋಗಲ್ಲ. 5 ವರ್ಷದ ತಮ್ಮ ಯೋಜನೆಗಳ ಜಾರಿಗೆ ಸಿದ್ದರಾಮಯ್ಯ ಸಹಕಾರ ಕೊಡ್ತಿದ್ದಾರೆ ಅನ್ನೋ ಮೂಲಕ ಸಿದ್ದರಾಮಯ್ಯಗೆ ಮೈತ್ರಿ ಸರ್ಕಾರ ಇಷ್ಟ ಇಲ್ಲ ಅನ್ನೋ ಹೊರಟ್ಟಿ ಹೇಳಿಕೆಗೆ ಗೌಡರು ಸ್ಪಷ್ಟನೆ ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಉತ್ತಮ ಫಲಿತಾಂಶ ದಾಖಲಿಸಬಹುದು. ತೆಲಂಗಾಣದಲ್ಲಿ ಟಿಆರ್ ಚಂದ್ರಶೇಖರ್ ರಾವ್ ಉತ್ತಮ ಜನಪರ ಆಡಳಿತ ನೀಡಿದ ಪರಿಣಾಮ ಚುನಾವಣೆಯಲ್ಲಿ ಟಿಆರ್ಎಸ್ ಗೆದ್ದುಕೊಂಡಿದೆ. ಅದೇ ರೀತಿಯಾಗಿ ಕುಮಾರಸ್ವಾಮಿ ಅವರು ರೈತರಿಗೆ ನೆರವು ನೀಡಲು ಸಾಲಮನ್ನಾ ಮಾಡಿದ್ದಾರೆ. ಇದರಿಂದಾಗಿ ಕರ್ನಾಟಕದಲ್ಲೂ ಮೈತ್ರಿ ಮಾಡಿಕೊಂಡರೆ ಉತ್ತಮ ಫಲಿತಾಂಶ ದಾಖಲಿಸಬಹುದು ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಬಸವರಾಜ್ ಹೊರಟ್ಟಿ ಹೇಳಿದ್ದೇನು?
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆಯುತ್ತಿರುವ ಕನ್ನಡ ಸಮಾವೇಶದಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನನ್ನ ರಾಜಕೀಯ ಅನುಭವದ ಆಧಾರದ ಮೇಲೆ 20 ಜನ ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇಲ್ಲ. ರಾಜಕೀಯದಿಂದ ನಿವೃತ್ತಿಯಾಗುವುದಿದ್ದರೆ ಮಾತ್ರ ರಾಜೀನಾಮೆ ನೀಡಬೇಕು. ಸರ್ಕಾರವನ್ನು ಅಭದ್ರಗೊಳಿಸುವ ನಿಟ್ಟಿನಲ್ಲಿ ರಾಜೀನಾಮೆ ಆಟ ಆಡುವುದು ಸರಿಯಲ್ಲ. ಸಿದ್ದರಾಮಯ್ಯ ಮಾಸ್ಟರ್ ಮೈಂಡ್ ಅಂತ ಹೇಳುವುದಿಲ್ಲ. ಬಹಳಷ್ಟು ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಅಂತಾರೆ. ಹಾಗಾದ್ರೆ ಕುಮಾರಸ್ವಾಮಿ ಅವರ ಪರಿಸ್ಥಿತಿ ಏನು? ಸಿದ್ದರಾಮಯ್ಯ ಸೂಪರ್ ಸಿಎಂ ಅಲ್ಲ, ಅವರನ್ನು ಸಿಎಂ ಎಂದು ಬಿಂಬಿಸುವುದು ಸರಿ ಅಲ್ಲ ಎಂದು ಕಿಡಿಕಾರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv