ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜೊತೆಗೆ ಆಗಸ್ಟ್ 16 ರಿಂದ 22ರವರೆಗೆ ರಾಜ್ಯದಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದೆ.
ಗುರುವಾರದಿಂದ 7 ದಿನಗಳ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರ ಪ್ರಕಟಿಸಿದೆ.
ರಾಜ್ಯದ ಹಲವೆಡೆ ಪ್ರವಾಹ ಎದುರಾಗಿದ್ದು, ತುರ್ತು ಪರಿಸ್ಥಿತಿ ನಿಭಾಯಿಸುವ ಹಾಗೂ ಪರಿಹಾರ ಒದಗಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಹೊರತು ಪಡಿಸಿ, ಉಳಿದವರಿಗೆ ಅನ್ವಯಿಸುವಂತೆ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಆಗಸ್ಟ್ 17ರಂದು ಒಂದು ದಿನ ರಜೆ ಘೋಷಿಸಲಾಗಿದೆ.
ಕೌನ್ಸೆಲಿಂಗ್ ಮುಂದೂಡಿಕೆ:
ಆ.17 ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ನಿಕಾಯದ ಕೌನ್ಸೆಲಿಂಗ್ ಮುಂದೂಡಲಾಗಿದೆ. ಮುಂದೂಡಿದ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv