ಡೆಹ್ರಾಡೂನ್: ಪಕ್ಷ ವಿರೋಧಿ ಕೆಲಸದಲ್ಲಿ ತೊಡಗಿಕೊಂಡಿರುವ ಉತ್ತರಾಖಂಡದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಅವರನ್ನು ಕಾಂಗ್ರೆಸ್ ಉಚ್ಛಾಟಿಸಿದೆ.
ಕಿಶೋರ್ಉಪಾಧ್ಯಾಯ ಅವರು ಪಕ್ಷವಿರೋಧಿ ಕೆಲಸದಲ್ಲಿ ಭಾಗಿಯಾಗಿದ್ದರು. ಇದರಿಂದ ಮುಂದಿನ ಆರು ತಿಂಗಳವರೆಗೆ ಇವರ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ. ಉಪಾಧ್ಯಾಯರನ್ನು ಈ ಹಿಂದೆ ಶಿಸ್ತು ಕ್ರಮ ಮೇರೆಗೆ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿತ್ತು. ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ಜನವರಿ 26 ರಂದು ಕಿಶೋರ್ ಉಪಾಧ್ಯಾಯ ಅವರಿಗೆ ಪತ್ರ ಬರೆದಿದೆ.
Former Congress Chief of Uttarakhand, Kishore Upadhyay expelled from the party for 6 years for “anti-party activities”. He was earlier removed from all posts as a disciplinary action.
(File photo) pic.twitter.com/VDb3m9RPEk
— ANI (@ANI) January 27, 2022
ಪತ್ರದಲ್ಲಿ ಏನಿದೆ?: ಈ ಹಿಂದೆ ಪಕ್ಷ ಹಲವು ಎಚ್ಚರಿಕೆಯನ್ನು ನೀಡಿತ್ತು. ಆದರೂ ಅದನ್ನು ಗಂಭೀರವಾಗಿ ಪರಿಗಣಿಸದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ನಿಮ್ಮನ್ನು ತಕ್ಷಣದಿಂದಲೇ ಹೊರಹಾಕಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ನೈಟ್ ಕರ್ಫ್ಯೂ ನಡುವೆ ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ
Former Congress Chief of Uttarakhand, Kishore Upadhyay expelled from the party for 6 years for “anti-party activities”. pic.twitter.com/DBAfZAQKl8
— ANI (@ANI) January 27, 2022
ಕಿಶೋರ್ ಉಪಾಧ್ಯಾಯ ಅವರು 2014 ರಿಂದ 2017 ರವರೆಗೆ ಕಾಂಗ್ರೆಸ್ನ ಉತ್ತರಾಖಂಡ ಘಟಕದ ಅಧ್ಯಕ್ಷರಾಗಿದ್ದರು. ಮೂಲಗಳ ಪ್ರಕಾರ ಶೀಘ್ರದಲ್ಲೇ ಬಿಜೆಪಿಯನ್ನು ಸೇರಲಿದ್ದಾರೆ. ಉಪಾಧ್ಯಾಯ ಅವರು ತೆಹ್ರಿ ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್