Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ವಾಜಪೇಯಿ ಕರೆದು ರಾಜಕೀಯದಲ್ಲಿ ಸ್ಥಾನಮಾನ ಕೊಟ್ಟಿದ್ದನ್ನೂ ನಿರಾಕರಿಸಿದ್ದೆ- ವಿಜಯ ಸಂಕೇಶ್ವರ್

Public TV
Last updated: March 13, 2018 3:09 pm
Public TV
Share
2 Min Read
SANKESHWAR 1
SHARE

ಹುಬ್ಬಳ್ಳಿ: ಮಾಜಿ ಪ್ರಧಾನಿ ವಾಜಪೇಯಿ ಅವರು ಕರೆದು ನನಗೆ ರಾಜಕೀಯದಲ್ಲಿ ಒಂದು ಸ್ಥಾನಮಾನ ಕೊಟ್ಟರು. ಆದ್ರೆ ನಾನು ಅದನ್ನೂ ನಿರಾಕರಿಸಿದ್ದೆ. ಕಳೆದ ಬಾರಿ ಕೂಡಾ ನನಗೆ ಎಂಎಲ್‍ಸಿಗೆ ಟಿಕೆಟ್ ಕೊಟ್ಟಾಗ ಕೂಡಾ ನಾನೇ ಬೇಡವೆಂದಿದ್ದೆ ಅಂತ ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ ಸಂಕೇಶ್ವರ್ ಹೇಳಿದ್ದಾರೆ.

ನಗರದ ವಿಆರ್ ಎಲ್ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ರಾಜ್ಯಸಭಾ ಟಿಕೆಟ್ ಕೊಡಿ ಎಂದು ಯಾರಲ್ಲೂ ಕೇಳಿಲ್ಲ. ಆದ್ರೆ ಬಿಎಸ್‍ವೈ ನನಗೆ ಟಿಕೆಟ್ ಕೊಡುವುದಾಗಿ ಹೇಳಿ ಕರೆ ಮಾಡಿದ್ದರು. ನಿಮ್ಮ ಟಿಕೆಟ್ ಶಾರ್ಟ್ ಲಿಸ್ಟ್ ಆಗಿದೆ. ಹೀಗಾಗಿ ನೀವು ತಯಾರಾಗಿ ಅಂತ ಜಗದೀಶ್ ಶೆಟ್ಟರ್ ಕರೆ ಮಾಡಿ ಹೇಳಿದ್ದರು ಎಂದು ತಿಳಿಸಿದರು.

ಕಳೆದ 56 ವರ್ಷದಿಂದ ನಾನು ಸಂಘ ಪರಿವಾರ ಬಿಜೆಪಿಯಲ್ಲಿ ಇದ್ದೇನೆ. ನಾನು ಹಿಂದೂವಾಗಿರುವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೋಗುತ್ತೆನೆ. ದೇವರಲ್ಲಿ ಎಂದೂ ನಾನೇನು ಕೇಳಿಲ್ಲ. ಹಾಗೆಯೇ ಪಕ್ಷದಿಂದ ಕೂಡ ಏನನ್ನೂ ಕೇಳಿಲ್ಲ. ನನ್ನ ಇತಿ ಮಿತಿಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ಜೊತೆ ಹಲವಾರು ಜನ ಸಂಪರ್ಕದಲ್ಲಿ ಇದ್ದಾರೆ. ರಾಜೀವ್ ಚಂದ್ರಶೇಖರ್ ಒಬ್ಬ ಒಳ್ಳೆಯ ರಾಜಕಾರಣಿ. ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಕೆಲವರು ರಾಜೀವ್ ಚಂದ್ರಶೇಖರ್ ಕನ್ನಡಿಗ ವ್ಯಕ್ತಿಯಲ್ಲ ಎಂದಿದ್ದಾರೆ. ಆದ್ರೆ ಅವರು ಕನ್ನಡಿಗರಾಗಿದ್ದು ಅವರು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ ಎಂದರು.

ನನ್ನ ಉದ್ದೇಶ ದೇಶ ಮತ್ತು ರಾಜ್ಯದ ಕಾಂಗ್ರೆಸ್ ಮುಕ್ತ ಮಾಡುವುದು. ಬಿಜೆಪಿಯಿಂದ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಾ ಮುಂದೆ ಕೆಲಸ ಮಾಡುತ್ತೇನೆ. ಮುಖ್ಯಮಂತಿ ಸಿದ್ದರಾಮಯ್ಯನವರು ತಮ್ಮ ಪ್ರತಿ ಮಾತಿನಲ್ಲೂ ಬಿಜೆಪಿ ಅವರು ಜೈಲಿಗೆ ಹೋಗಿ ಬಂದವರು ಎನ್ನುತ್ತಾರೆ. ಇಂದಿರಾಗಾಂಧಿ ಕೂಡ ಜೈಲಿಗೆ ಹೋಗಿ ಬಂದವರು. ಇದನ್ನು ಕಾಂಗ್ರೆಸ್ ಮರೆಯಬಾರದು. ನಾನು ಬಿಎಸ್‍ವೈ ಅವರನ್ನು 30 ವರ್ಷದಿಂದ ನೋಡಿದ್ದು ಅವರು ಕ್ರಿಮಿನಲ್ ವ್ಯಕ್ತಿಯಲ್ಲ ಅವರು ವಿವರಿಸಿದರು.

BJP

ಮಹದಾಯಿ ಮತ್ತು ಕಳಸಾ ಬಂಡೂರಿ ವಿಚಾರದ ಕುರಿತು ಮಾತನಾಡಿದ ಅವರು, ದೇಶದ ಮತ್ತು ರಾಜ್ಯದ ಸಂಸ್ಕೃತಿಯ ಬಗ್ಗೆ ಸೋನಿಯಾ ಗಾಂಧಿ ಅವರಿಗೆ ಗೊತ್ತಿಲ್ವ. ಹೀಗಾಗಿ ಗೋವಾ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ರಾಜ್ಯಕ್ಕೆ ನೀರು ಬಿಡದಂತೆ ಹೇಳಿದ್ದಾರೆ. ಅವರ ತಪ್ಪಿನಿಂದ ಇಂದು ಈ ಸಮಸ್ಯೆ ದೊಡ್ಡದಾಗಿದೆ. ಮುಂದಿನ ದಿನಗಳಲ್ಲಿ ಮಹದಾಯಿ ಸಮಸ್ಯೆ ಬಗೆಹರಿಯತ್ತೆ. ಆ ನಂಬಿಕೆ ನಮಗಿದೆ ಎಂದರು.

ಲೋಕಾಯುಕ್ತರ ಚೂರಿ ಇರಿತ ವಿಚಾರ ಕೇಳಿ ನಮಗೆ ಬಹಳ ಬೇಜಾರಾಯ್ತು. ನಮ್ಮ ಕುಟುಂಬಕ್ಕೂ ಬೆದರಿಕೆಯಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಚೂರಿ ಹಾಕುವ ವಿಚಾರ ಲಕ್ಷಾಂತರ ಜನರ ತಲೆಯಲ್ಲಿದೆ. ರಾಜ್ಯ ಸರ್ಕಾರ ಐಪಿಎಸ್ ಆಧಿಕಾರಿಗಳನ್ನು ಫುಟ್ಬಾಲ್ ರೀತಿ ಆಡಿಸುತ್ತಿದೆ ಅಂತ ವಾಗ್ದಾಳಿ ನಡೆಸಿದ್ರು.

ಬಿಜೆಪಿಯನ್ನು ಕರ್ನಾಟಕದಲ್ಲಿ ಬೆಳೆಸಿದ ಧೀಮಂತ ನಾಯಕ ವೆಂಕಯ್ಯ ನಾಯ್ಡು. ಬಿಜೆಪಿ ನಮಗೆ ಕಲಿಸಿದ್ದು ಪಕ್ಷಸೇವೆ. ಭಾವನಾತ್ಮಕವಾಗಿ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹುನ್ನಾರ ನಡೆಸಿದೆ. ನಾನು ಲಿಂಗಾಯತ ಪ್ರಮುಖ ಮುಖಂಡ ಎಂದು ಎಲ್ಲೂ ಹೇಳಿಕೊಳ್ಳಲ್ಲ. ಸಿದ್ದರಾಮಯ್ಯ ಜಾತಿಯನ್ನು ಬಿಂಬಿಸುತ್ತಿದ್ದಾರೆ. ಶಶಿಕಲಾ ರೀತಿ ಇಂದಿರಾ ಗಾಂಧಿ ಕಂಬಿ ಎಣಿಸಿದ್ದರು. ಸಿದ್ದರಾಮಯ್ಯ ಅದನ್ನು ನೆನಪಿಸಿಕೊಳ್ಳಬೇಕು ಅಂತ ಅವರು ಹೇಳಿದ್ರು.

TAGGED:Atal Bihari Vajpayeebjphubballipublictvrajeev chandrashekharRajyaSabhavijayasankeshwarಪಬ್ಲಿಕ್ ಟಿವಿಬಿಜೆಪಿರಾಜೀವ್ ಚಂದ್ರಶೇಖರ್ರಾಜ್ಯಸಭೆವಾಜಪೇಯಿವಿಜಯ ಸಂಕೇಶ್ವರ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
5 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
8 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
9 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
11 hours ago

You Might Also Like

RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
2 hours ago
RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
2 hours ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
2 hours ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
2 hours ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
2 hours ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?