ಬೆಂಗಳೂರು: ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ ಸಂದರ್ಭ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಮತ್ತು ಶಾಸಕ ಮುನಿರತ್ನ (Munirathna) ಹಾರೆ ಹಿಡಿದು ಗುದ್ದಲಿ ಪೂಜೆ ಮಾಡಿದ್ದಾರೆ.
Advertisement
ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ ನಡೆಯಿತು. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಂಗನಾ ರಣಾವತ್ ಭೇಟಿ
Advertisement
ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅಧ್ಯಕ್ಷತೆ ವಹಿಸಿದ್ದು, ಶಂಕುಸ್ಥಾಪನೆ ನೆರವೇರಿಸಲು ಡಿಕೆಶಿ ಅವರನ್ನ ಆಹ್ವಾನಿಸಿದ್ದರು. ಈ ವೇಳೆ ಇಬ್ಬರು ಸೇರಿ ಶಂಕುಸ್ಥಾಪನೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಕೆಲಸ ನಿಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ
Advertisement
Advertisement
ಇತ್ತೀಚಿನ ದಿನಗಳಲ್ಲಿ ಡಿಕೆ ಬ್ರದರ್ಸ್ ಮತ್ತು ಮುನಿರತ್ನ ನಡುವೆ ರಾಜಕೀಯ ಜಟಾಪಟಿ ಜೋರಾಗಿತ್ತು. ಇದೀಗ ಇಬ್ಬರು ಸೇರಿ ಗುದ್ದಲಿ ಪೂಜೆ ಮಾಡಿರುವುದು ನಾನಾ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ