ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ್ದ ನಾಲ್ವರಿಗೆ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ದೊಡ್ಡಮಳೂರು ಗ್ರಾಮದ ಕುಮಾರ್, ರಾಮು, ತೀರ್ಥ, ಹಾಗೂ ಮರಿಸ್ವಾಮಿ ಜೀವಾವಧಿ ಶಿಕ್ಷೆಗೆ ಒಳಗಾದವರು. 2016ರ ಫೆಬ್ರವರಿ 15 ರಂದು ಚನ್ನಪಟ್ಟಣ ತಾಲೂಕಿನ ದೊಡ್ಡ ಮಳೂರು ಗ್ರಾಮದಲ್ಲಿ ಕಲ್ಲಾಪುರ ಗ್ರಾಮದ ನಿವಾಸಿ ರವಿ ಎಂಬ ವ್ಯಕ್ತಿಯ ಮೇಲೆ ನಾಲ್ವರು ಆರೋಪಿಗಳು ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದ್ರು.
ಘಟನೆ ಸಂಬಂಧ ನಾಲ್ವರನ್ನ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಕೊಲೆ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ತಲಾ 50 ಸಾವಿರ ರೂಪಾಯಿಗಳ ದಂಡ ವಿಧಿಸಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾದವರ ಸಂಬಂಧಿಕರು ಕಣ್ಣೀರಿಟ್ರೆ, ಕೊಲೆಯಾದ ವ್ಯಕ್ತಿಯ ತಂದೆ ತಮ್ಮ ಮಗನ ಕೊಲೆಗೆ ಇದೀಗ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿದೆ ಅಂತಾ ಸಂತೋಷ ವ್ಯಕ್ತಪಡಿಸಿದ್ರು.