ಶ್ರೀನಗರ: ಭಯೋತ್ಪಾದಕ (Terrorists) ಸಂಬಂಧದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ (Jammu Kashmir) ಆಡಳಿತವು ನಾಲ್ವರು ಸರ್ಕಾರಿ ಉದ್ಯೋಗಿಗಳನ್ನು ವಜಾಗೊಳಿಸಿದೆ. ಪ್ರಯೋಗಾಲಯ ಸಹಾಯಕ, SMHS ಆಸ್ಪತ್ರೆಯಲ್ಲಿ ವೈದ್ಯಕೀಯ ಸಹಾಯಕ ಪ್ರಾಧ್ಯಾಪಕ, ಪೊಲೀಸ್ ಪೇದೆ ಮತ್ತು ಶಿಕ್ಷಕ ಬಂಧಿತರು.
ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭಾರತದ ಸಂವಿಧಾನದ 311 ನೇ ವಿಧಿಯ ಷರತ್ತು (2) ರ ನಿಬಂಧನೆಯ ಉಪ-ಕಲಂ (ಸಿ) ಪ್ರಕಾರ ನಾಲ್ಕು ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ. ಇದನ್ನೂ ಓದಿ: ಸುಳ್ಳು ಜಾಹೀರಾತು ನೀಡಿದರೆ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡ ಹಾಕಬೇಕಾಗುತ್ತೆ: ಸುಪ್ರೀಂ ಎಚ್ಚರಿಕೆ
ವಜಾಗೊಂಡ ನೌಕರರು ಅಬ್. ಸಲಾಮ್ ರಾಥರ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಯೋಗಾಲಯ ಬೇರರ್, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕ ಫಾರೂಕ್ ಅಹ್ಮದ್ ಮಿರ್, ಸಹಾಯಕ ಪ್ರಾಧ್ಯಾಪಕ (ವೈದ್ಯಕೀಯ) ಡಾ. ನಿಸಾರ್-ಉಲ್-ಹಸನ್, J&K ಪೊಲೀಸ್ ಕಾನ್ಸ್ಟೇಬಲ್ ಅಬ್ದುಲ್ ಮಜೀದ್ ಭಟ್ ವಜಾಗೊಂಡವರು.
ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭಯೋತ್ಪಾದನೆಯ ಆರೋಪದ ಮೇಲೆ ಭಾರತೀಯ ಸಂವಿಧಾನದ 311 ನೇ ವಿಧಿಯ ಅಡಿಯಲ್ಲಿ ಸುಮಾರು 60 ಉದ್ಯೋಗಿಗಳನ್ನು ವಜಾಗೊಳಿಸಿದೆ. ಎಲ್ಜಿ ಸಿನ್ಹಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ಆಡಳಿತವು ಈ ವರ್ಷದ ಜುಲೈನಲ್ಲಿ ಕಾಶ್ಮೀರ ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಸೇರಿದಂತೆ ನಾಲ್ವರು ಉದ್ಯೋಗಿಗಳನ್ನು ಇದೇ ರೀತಿ ಕೆಲಸದಿಂದ ತೆಗೆದುಹಾಕಲಾಗಿತ್ತು. ಇದನ್ನೂ ಓದಿ: ಪಾಕ್ ಉಗ್ರ ಸಂಘಟನೆಯೊಂದಿಗೆ ನಂಟು – ಮೂವರ ಬಂಧನ