ಚಿತ್ರದುರ್ಗ: ಜಿಲ್ಲೆಯ ಮಲ್ಲಾಪುರ (Mallapura) ಗ್ರಾಮದ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನನಪ್ಪಿದ್ದಾರೆ.
- Advertisement 2
ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಸಂಗನಬಸಪ್ಪ(36), ರೇಖಾಂಶ(29), ಭೀಮಾಶಂಕರ್(26) ಹಾಗೂ ಅಗಸ್ತ್ಯ(8) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಮೂಲದ ಒಂದೇ ಕುಟುಂಬದವರು.
- Advertisement 3
- Advertisement 4
ವಿಜಯಪುರದಿಂದ (Vijayapura) ಚಿಕ್ಕಮಗಳೂರಿಗೆ (Chikkamagaluru) ತೆರಳುವ ವೇಳೆ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಅವಘಡದಲ್ಲಿ ಆದರ್ಶ(3), ಪುತ್ರಿ ಅನ್ವಿಕಾ(5) ಹಾಗೂ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವೆಬ್ ಸಿರೀಸ್ನಿಂದ ಪ್ರೇರಣೆ – ದಂಪತಿ ಕೊಲೆಗೈದು ದರೋಡೆ ಮಾಡಿದ್ದ ಲಾ ಸ್ಟೂಡೆಂಟ್ ಅರೆಸ್ಟ್
ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಿಂದ ವಾಪಸ್ ಆಗುತ್ತಿದ್ದಾಗ ಅಪಘಾತ – ತಾಯಿ, ಮಗ ಸ್ಥಳದಲ್ಲೇ ಸಾವು
Web Stories