ಮಮತಾ ಬ್ಯಾನರ್ಜಿ ಬಳಿಕ ಚಂದ್ರಬಾಬು ನಾಯ್ಡುಗೆ ಅಮಿತ್ ಶಾ’ಕ್’

Public TV
3 Min Read
tdp rs members web 22

-ಟಿಡಿಪಿ ರಾಜ್ಯಸಭಾ ಸದಸ್ಯರು ಬಿಜೆಪಿಗೆ ಜಂಪ್

ನವದೆಹಲಿ: ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರು ವಿದೇಶಿ ಪ್ರವಾಸದಲ್ಲಿರುವಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೇಜರ್ ಸರ್ಜರಿ ಮಾಡಿದ್ದು, ನಾಲ್ವರು ಟಿಡಿಪಿ ರಾಜ್ಯಸಭಾ ಸದಸ್ಯರನ್ನು ಕಮಲದ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷದಿಂದ ಒರ್ವ ಶಾಸಕ ಸೇರಿ 14 ಜನ ಕಾರ್ಪೋರೇಟರ್‍ಗಳು ಬಿಜೆಪಿ ಸೇರುವ ಮೂಲಕ ಟಿಎಂಸಿಗೆ ಶಾಕ್ ನೀಡಿದ್ದರು. ಇದೀಗ ತೆಲುಗು ದೇಶಂ ಪಕ್ಷ(ಟಿಡಿಪಿ)ದ ಮಾಜಿ ಕೇಂದ್ರ ಸಚಿವ ಹಾಗೂ ಸಂಸದೀಯ ನಾಯಕ ವೈ.ಎಸ್.ಚೌಧರಿ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದ್ದು, ಈ ಮೂಲಕ ಮೇಲ್ಮನೆಯಲ್ಲಿ ಟಿಡಿಪಿ ಬಲ ಕೇವಲ 2 ಸ್ಥಾನಕ್ಕೆ ಕುಸಿದಿದೆ.

tdp rs members web

ಚೌಧರಿ ಅವರು ಬಿಜೆಪಿ ಸೇರುವ ಕುರಿತು ಖಚಿತಪಡಿಸಿದ್ದು, ಅವರೊಂದಿಗೆ ಇನ್ನೂ ಮೂವರು ಸದಸ್ಯರಾದ ಟಿ.ಜಿ.ವೆಂಕಟೇಶ್, ಜಿ.ಮೋಹನ್ ರಾವ್, ಸಿ.ಎಂ.ರಮೇಶ್ ಹಾಗೂ ವೆಂಕಟೇಶ್ ಸಹ ಬಿಜೆಪಿ ಸೇರುವ ಕುರಿತು ಖಚಿತಪಡಿಸಿದ್ದಾರೆ. ಚೌಧರಿ ಅವರು ಈ ಹಿಂದೆ ಎಬಿವಿಪಿ ಹಾಗೂ ಬಿಜೆಪಿ ಯುವ ಮೋರ್ಚಾದ ಸದಸ್ಯರಾಗಿದ್ದರು ಹೀಗಾಗಿ ಈ ನಡೆ ಸಹಜ ಎಂದು ಹೇಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ರಾಷ್ಟ್ರದ ಒಟ್ಟಾರೆ ಹಿತದೃಷ್ಟಿಯಿಂದ ಹಾಗೂ ಪ್ರಧಾನಿ ಮೋದಿ ಅವರು ಅನುಸರಿಸುತ್ತಿರುವ ಅಭಿವೃದ್ಧಿ ರಾಜಕಾರಣದಿಂದ ಪ್ರಭಾವಿತರಾಗಿ ತಕ್ಷಣದಿಂದಲೇ ಬಿಜೆಪಿ ಸೇರುತ್ತಿದ್ದೇವೆ ಎಂದು ಚೌಧರಿ ಅವರು ಸಹಿ ಮಾಡಿ ರಾಜ್ಯಸಭೆಗೆ ನೀಡಿರುವ ಟಿಡಿಪಿಯ ಶಾಸಕಾಂಗ ಪಕ್ಷದ ನಿರ್ಣಯವನ್ನು ಓದಿದ್ದಾರೆ.

ತೆಲುಗು ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ವಿವಿಧ ಪಕ್ಷಗಳ ನಾಯಕರು ಬಿಜೆಪಿ ಸೇರಲು ಇಚ್ಛಿಸಿದ್ದು, ಅಂತಹ ನಾಯಕರನ್ನು ನಾವು ಸ್ವಾಗತಿಸುತ್ತೇವೆ. ಈ ಮೂಲಕ ಪಕ್ಷದ ಬಲವರ್ಧನೆಯಾದಂತಾಗುತ್ತದೆ ಎಂದು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರು ವಿದೇಶದಲ್ಲಿದ್ದು, ಸಂಸದರು ಬಿಜೆಪಿ ಸೇರುತ್ತಿರುವ ಸುದ್ದಿಯನ್ನು ತಿಳಿದು ಚೌಧರಿ ಅವರೊಂದಿಗೆ ಈ ಕುರಿತು ಮಾತನಾಡಿದ್ದಾರೆ. ಪಕ್ಷದಿಂದ ಹೊರ ನಡೆಯದಂತೆ ಚಂದ್ರಬಾಬು ನಾಯ್ಡು ಮನವಿ ಮಾಡಿದ್ದಾರೆ. ಇತ್ತೀಚಿನ ಚುನಾವಣೆಯಲ್ಲಿ ಪಕ್ಷ ಸೋಲುಂಡಿರುವುದೇ ನಾಯಕರು ಪಕ್ಷ ತೊರೆಯಲು ಕಾರಣ ಎಂದು ಹೇಳಲಾಗುತ್ತಿದೆ.

tdp rs members 3

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ 126 ಸ್ಥಾನಗಳಿಂದ 23 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದೆ. ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್ ಸೇರಿದಂತೆ ವಿವಿಧ ಪ್ರಮುಖ ನಾಯಕರು ಸೋಲನುಭವಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 15 ಸ್ಥಾನಗಳಿಂದ ಕೇವಲ ಮೂರು ಸ್ಥಾನಕ್ಕೆ ಟಿಡಿಪಿ ಕುಸಿದಿದೆ.

ಬಿಜೆಪಿ ನೂತನ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಂತರ ಮಾತನಾಡಿದ ಜೆಪಿ ನಡ್ಡಾ, ಟಿಡಿಪಿ ನಾಯಕರ ಪ್ರಸ್ತಾವವನ್ನು ಒಪ್ಪಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಂದಹಾಗೇ ವೈ.ಎಸ್. ಚೌಧರಿ ಅವರು 2014ರಲ್ಲಿ ಮೋದಿ ಸಂಪುಟದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2018ರಲ್ಲಿ ಚಂದ್ರಬಾಬು ನಾಯ್ಡು ಎನ್‍ಡಿಎ ಕೂಟ ತೊರೆದ ಬಳಿಕ ಚೌಧರಿ ರಾಜೀನಾಮೆ ಕೊಟ್ಟಿದ್ದರು. ಲೋಕಸಭೆ ಬಳಿಕ ರಾಜ್ಯಸಭೆಯಲ್ಲೂ ಸದಸ್ಯ ಬಲ ಹೆಚ್ಚಳ ಆಗುತ್ತಿರುವುದು ಮೋದಿ ಸರ್ಕಾರಕ್ಕೆ ವರವಾಗಲಿದೆ. ರಾಜ್ಯ ಸಭೆಯಲ್ಲಿ ಸಂಖ್ಯಾಬಲ ಹೆಚ್ಚಾಗುವುದರಿಂದ ಪ್ರಮುಖ ಮಸೂದೆಗಳನ್ನು ಜಾರಿಗೆ ಬೆಂಬಲ ಪಡೆಯಲು ಸಹಕಾರಿ ಆಗಲಿದೆ. ಹಾಗಾಗಿಯೇ ರಾಜ್ಯಸಭೆಯಲ್ಲಿ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವತ್ತ ಬಿಜೆಪಿ ಗಮನ ಹರಿಸಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *