Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ

Latest

ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರ ಹತ್ಯೆ

Public TV
Last updated: March 12, 2022 9:19 am
Public TV
Share
2 Min Read
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ 3 ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಕಳೆದ 12 ಗಂಟೆಗಳಲ್ಲಿ ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಭಾರೀ ಕಾರ್ಯಾಚರಣೆಯನ್ನು ಆರಂಭಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ಬೆಳಗ್ಗೆ ಕಾಶ್ಮೀರದ ಪುಲ್ವಾಮಾ, ಗಂದರ್‌ಬಾಲ್ ಮತ್ತು ಹಂದ್ವಾರ ಪ್ರದೇಶದಲ್ಲಿ ಮೂರು ಪ್ರತ್ಯೇಕ ಎನ್‍ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದ್ದಾರೆ.

encounter 150891 730x419 m

ಕಾಶ್ಮೀರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದರು. ಇದನ್ನೂ ಓದಿ:  ಭೂದಾಖಲೆಗಳನ್ನು ‘ರೈತನ ಮನೆ ಬಾಗಿಲಿಗೆ’ ತಲುಪಿಸುವುದು ಒಂದು ಅತ್ಯುತ್ತಮ ಸೇವೆ: ಆರ್.ಅಶೋಕ್

ನಾವು ಕಳೆದ ರಾತ್ರಿ 4-5 ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಇದುವರೆಗೆ ಪುಲ್ವಾಮಾದಲ್ಲಿ ಜೆಇಎಂನ ಇಬ್ಬರು ಭಯೋತ್ಪಾದಕರು, ಗಂದರ್‌ಬಾಲ್ ಎಲ್‍ಇಟಿಯ ಒಬ್ಬ ಭಯೋತ್ಪಾದಕ, ಹಂದ್ವಾರದಲ್ಲಿ ಎಲ್‍ಇಟಿಯ ಮತ್ತೊಬ್ಬ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿಸಿದರು. ಎಲ್ಲಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ. ಇತರ ಸ್ಥಳಗಳಲ್ಲಿಯೂ ಸಂಪರ್ಕವನ್ನು ಸ್ಥಾಪಿಸಲಾಗುವುದು ಅಂತ ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚೆವಾಕಲನ್ ಗ್ರಾಮದಲ್ಲಿ ನಿನ್ನೆ ಸಂಜೆ ಮೊದಲ ಎನ್‍ಕೌಂಟರ್ ಪ್ರಾರಂಭವಾಯಿತು. ಅಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಇನ್ನೂ ಇಬ್ಬರು ಉಗ್ರರು ಅಲ್ಲಿಯೇ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಎರಡನೇ ಎನ್‍ಕೌಂಟರ್ ಮಧ್ಯ ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಕೌಬಾಗ್ ನುನಾರ್ ಪ್ರದೇಶದಲ್ಲಿ ನಡೆದಿದ್ದು, ಅಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಎಲ್‍ಇಟಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಸದ್ಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

#HandwaraEncounterUpdate: 01 #terrorist killed. #Operation going on. Further details shall follow. @JmuKmrPolice https://t.co/8KgeNf4JKA

— Kashmir Zone Police (@KashmirPolice) March 11, 2022

ಶನಿವಾರ ಬೆಳಗ್ಗೆ ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ, ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ಎನ್‍ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು. ಎನ್‍ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

FotoJet 5 8

ಇದಕ್ಕೂ ಮೊದಲು, ಫೆಬ್ರವರಿ 10 ರಂದು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಕೊಲ್ಲಲಾಯಿತು. ಅದರಲ್ಲಿ ಇಬ್ಬರು ಎಲ್‍ಇಟಿ ಭಯೋತ್ಪಾದಕರು ಪುಲ್ವಾಮಾದ ಬಟ್ಪೋರಾ ಪ್ರದೇಶದಲ್ಲಿ ಮತ್ತು ಶ್ರೀನಗರದ ಹಜರತ್ಬಾಲ್ ಪ್ರದೇಶದಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ತಿಳಿದು ಬಂದಿದೆ.

ಈ ವರ್ಷ ಕಾಶ್ಮೀರದಲ್ಲಿ 20 ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ಕಾರ್ಯಗತಗೊಳಿಸಲಾಗಿದೆ. ಭದ್ರತಾ ಪಡೆಗಳು ಮೂವರು ಉನ್ನತ ಕಮಾಂಡರ್‍ಗಳು ಮತ್ತು 9 ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ 35 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಅದಲ್ಲದೆ ಭದ್ರತಾ ಪಡೆಗಳು ಈ ವರ್ಷ 16 ಸಕ್ರಿಯ ಭಯೋತ್ಪಾದಕರು ಮತ್ತು ಮೂರು ಡಜನ್‍ಗಿಂತಲೂ ಹೆಚ್ಚು ಭಯೋತ್ಪಾದಕರ ಸಹಚರರನ್ನು ಜೀವಂತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

TAGGED:encounterIGP Vijay KumarJammu and KashmirSlaughterterroriststweetಎನ್‍ಕೌಂಟರ್ಐಜಿಪಿ ವಿಜಯ್ ಕುಮಾರ್ಜಮ್ಮು ಮತ್ತು ಕಾಶ್ಮೀರಟ್ವೀಟ್ಭಯೋತ್ಪಾದಕರುಹತ್ಯೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
5 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
5 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
6 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
6 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
7 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?