Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಫ್‌ಆರ್‌ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಫ್‌ಆರ್‌ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

Bengaluru City

ಎಫ್‌ಆರ್‌ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

Public TV
Last updated: February 28, 2018 10:29 pm
Public TV
Share
2 Min Read
dinesh gundurao
SHARE

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ `ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ಮಸೂದೆ’ (ಎಫ್‌ಆರ್‌ಡಿಐ) ಜಾರಿಗೆ ತರುವುದಕ್ಕೆ ಮುಂದಾಗಿದ್ದು, ಈ ಮಸೂದೆ ಜಾರಿಯಾದರೆ ಬ್ಯಾಂಕುಗಳ ರಕ್ಷಣೆಯಾಗಲಿದ್ದು, ಜನರ ಹಣಕ್ಕೆ ಮಾತ್ರ ಯಾವುದೇ ರಕ್ಷಣೆ ಇರುವುದಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಗುಂಡೂರಾವ್ ಆರೋಪಿಸಿದ್ದಾರೆ.

bng dinesh kpcc1

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕ್ ದಿವಾಳಿಯಾದಾಗ ಬ್ಯಾಂಕ್ ಗಳನ್ನು ರಕ್ಷಿಸುವ ನಿಯಮಗಳನ್ನು ಎಫ್‌ಆರ್‌ಡಿಐ ಮಸೂದೆಯಲ್ಲಿ ಜಾರಿಗೆ ಮಾಡಲಾಗುತ್ತಿದೆ. ಈ ಬಿಲ್ ಬ್ಯಾಂಕುಗಳ ರಕ್ಷಣೆಗೆ ಅನುಕೂಲವಾಗಿದೆ. ಆದರೆ ಜನರಿಗೆ ಅನುಕೂಲಕರವಾಗಿಲ್ಲ. ಒಂದು ವೇಳೆ ಮಸೂದೆ ಜಾರಿಗೆ ಆದರೆ ಜನರ ಹಣಕ್ಕೆ ರಕ್ಷಣೆಯಿಲ್ಲ. ಬ್ಯಾಂಕ್ ಗಳಲ್ಲಿಟ್ಟಿರುವ ಹಣಕ್ಕೆ ರಕ್ಷಣೆ ಇಲ್ಲವಾಗುತ್ತದೆ. ಇದು ಜನಸಾಮಾನ್ಯರಿಗೆ ಅಸುರಕ್ಷಿತವಾಗಿದೆ. ಕೇವಲ ಬ್ಯಾಂಕ್ ಮತ್ತು ಕಂಪನಿಗಳಿಗೆ ಅನುಕೂಲಕರವಾಗಿರುವ ಈ ಬಿಲ್ ಜಾರಿ ತರುವುದು ಸರಿಯಲ್ಲ ಎಂದು ಆರೋಪಿಸಿದರು.

vlcsnap 2018 02 28 16h32m01s473

ಇದೇ ವೇಳೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿಕಾರಿದ ಅವರು, ಬ್ಯಾಂಕ್ ವ್ಯವಸ್ಥೆ ಹದಗೆಟ್ಟಿದೆ. ಬ್ಯಾಂಕ್ ಗಳನ್ನು ಬಚಾವ್ ಮಾಡಲು ಕೇಂದ್ರ ಮುಂದಾಗಿದೆ. ಇದಕ್ಕಾಗಿ 2.5 ಲಕ್ಷ ಕೋಟಿ ಲಿಕ್ವಿಡಿಟಿ ಕೇಂದ್ರ ನೀಡಿದೆ. ಅಲ್ಲದೆ ಬೇಲ್ ಔಟ್ ಅನ್ನು ಬೇಲ್ ಇನ್ ಮಾಡಲು ಹೊರಟಿದೆ. ಈ ಕುರಿತ ನಿಯಮಗಳನ್ನು ಎಫ್‍ಡಿಆರ್ ಐ ಮಸೂದೆಯಲ್ಲಿ ಸೇರಿಸಿದೆ. ಒಂದು ವೇಳೆ ಬ್ಯಾಂಕ್ ದಿವಾಳಿಯಾದರೆ ಬ್ಯಾಂಕ್ ಸುಲಭವಾಗಿ ಜಾಮೀನು ಪಡೆಯಬಹುದು. ಮೊದಲು ಜಾಮೀನು ಪಡೆಯಲು ಅವಕಾಶವಿರಲಿಲ್ಲ. ಇದರಿಂದ ಸಣ್ಣ ಠೇವಣಿದಾರರ ಹಣವೂ ವಾಪಸ್ ಬರಲ್ಲ. ಬ್ಯಾಂಕ್ ದಿವಾಳಿಯಾದರೆ ಠೇವಣಿ ಹಣ ವಾಪಸ್ ನೀಡಲ್ಲ. ದಿವಾಳಿ ಎಂದು ತೋರಿಸಿ ಬ್ಯಾಂಕ್ ತಪ್ಪಿಸಿಕೊಳ್ಳಲು ಅವಕಾಶ ಲಭಿಸಿಸುತ್ತದೆ. ಹೀಗಾಗಿ ಈ ಮಸೂದೆ ಜಾರಿಗೆ ತರುವುದು ಸರಿಯಲ್ಲ ಎಂದರು.

arunjaitley

ಹಣಕಾಸು ಸಚಿವಾಲಯ ಹೇಳಿದ್ದೇನು?
ದಿವಾಳಿ ಅಂಚಿಗೆ ತಲುಪುವ ಬ್ಯಾಂಕ್‍ಗಳು ತಮ್ಮ ನಷ್ಟದ ತೀವ್ರತೆ ತಗ್ಗಿಸಲು ಠೇವಣಿದಾರರ ಹಣವನ್ನು ಬಳಸಿಕೊಳ್ಳಲು ಅವಕಾಶ ಇರುವ ಪ್ರಸ್ತಾವವನ್ನು (ಬಿಲ್ ಇನ್) ನಿಯಮವನ್ನು ಎಫ್‌ಆರ್‌ಡಿಐ ಮಸೂದೆ ಒಳಗೊಂಡಿದೆ ಎಂಬ ಮಾಧ್ಯಮ ವರದಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಈ ಹಿಂದೆ ಸ್ಪಷ್ಟನೆ ನೀಡಿತ್ತು. ಮಸೂದೆಯೂ ಬ್ಯಾಂಕ್ ಠೇವಣಿದಾರರ ಸ್ನೇಹಿಯಾಗಿದ್ದು, ಠೇವಣಿದಾರರ ಹಿತರಕ್ಷಣೆಗೆ ಧಕ್ಕೆಯಾಗುವ ನಿಯಮಗಳನ್ನು ಬದಲಿಸಿಲ್ಲ. ಹೆಚ್ಚು ಪಾರದರ್ಶಕವಾದ ಮತ್ತು ಹೆಚ್ಚುವರಿ ರಕ್ಷಣೆ ನೀಡುವ ಬಗೆಯಲ್ಲಿ ಈ ನಿಯಮಗಳಿವೆ ಎಂಬ ಭರವಸೆ ನೀಡಿತ್ತು.

ಈ ಮಸೂದೆಯನ್ನು ಆಗಸ್ಟ್ ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಮಸೂದೆಯಲ್ಲಿನ ವಿವಿಧ ಪ್ರಸ್ತಾವನೆಗಳ ಬಗ್ಗೆ ಸಮಿತಿಯು ಎಲ್ಲ ಭಾಗಿದಾರರ ಜತೆ ಚರ್ಚೆ ನಡೆಸುತ್ತಿದೆ. ದೇಶಿ ಬ್ಯಾಂಕ್‍ಗಳು ಅಗತ್ಯ ಇರುವಷ್ಟು ಬಂಡವಾಳ ಹೊಂದಿವೆ. ಅಲ್ಲದೇ ನಿಯಂತ್ರಣ ಮತ್ತು ಮೇಲ್ವಿಚಾರಣೆಗೂ ಒಳಪಟ್ಟಿವೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸ್ಥಿರತೆಯೂ ಇದೆ ಎಂದು ಸಚಿವಾಲಯ ತಿಳಿಸಿತ್ತು.

ಬಿಲ್ ಇನ್ ನಿಯಮ: ಬ್ಯಾಂಕ್ ನಲ್ಲಿ ಠೇವಣಿ ಇಡುವ ಗ್ರಾಹಕರ 1 ಲಕ್ಷ ರು ವರೆಗಿನ ಠೇವಣಿಗೆ ಸರ್ಕಾರದ ಖಾತರಿ ನೀಡಿತ್ತು. ಅಂದರೆ ಒಂದು ವೇಳೆ ಬ್ಯಾಂಕ್ ದಿವಾಳಿಯಾದರೆ ಸರ್ಕಾರ ಈ ಜವಾಬ್ದಾರಿಯನ್ನು ನಿರ್ವಹಿಸುತಿತ್ತು. ಆದರೆ ಮಸೂದೆಯಲ್ಲಿ ಈ ನಿಯಮ ತೆಗೆದು ಹಾಕಲಾಗಿದೆ ಎನ್ನಲಾಗಿದೆ ವರದಿ ಹಿನ್ನೆಲೆಯಲ್ಲಿ ಈ ಆರೋಪ ಈಗ ಕೇಳಿ ಬರುತ್ತಿದೆ.

ಸರ್ಕಾರದ ಠೇವಣಿ ಹೊಣೆಗಾರಿಕೆ ನೋಡಿಕೊಳ್ಳಲು ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮವನ್ನು 1960ರ ಮುಂಚೆಯೇ ಸ್ಥಾಪಿಸಲಾಗಿದೆ. ಸರ್ಕಾರದ ಖಾತರಿಗೆ ಒಳಪಡುವ ಠೇವಣಿ ಮೊತ್ತ ಹೆಚ್ಚಿಸಲು ಒತ್ತಾಯಿಸಿದ್ದರೂ ಈ ಸಮಿತಿಯನ್ನು 1993 ರಿಂದ ಇದುವರೆಗೂ ಒಮ್ಮೆಯೂ ಪರಿಷ್ಕರಿಸಿಲ್ಲ.

Triple Your Money with This Simple Rule of Thumb

TAGGED:bankbengaluruCentral Governmentdinesh gunduraoFRDI BillPublic TVಎಫ್‍ಆರ್ ಡಿಐ ಮಸೂದೆಕೇಂದ್ರ ಸರ್ಕಾರದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಬೆಂಗಳೂರುಬ್ಯಾಂಕ್
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

thawarchand gehlot join session exit
Bengaluru City

ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

Public TV
By Public TV
4 minutes ago
Siddaramaiah 2 1
Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
By Public TV
10 minutes ago
VidhanSoudha
Bengaluru City

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ

Public TV
By Public TV
39 minutes ago
Thawar Chand Gehlot Siddaramaiah
Bengaluru City

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
1 hour ago
NAGENDRA
Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

Public TV
By Public TV
2 hours ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?