ಪಾರ್ಟಿ ಬಳಿಕ ಸ್ನೇಹಿತರ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ

Public TV
1 Min Read
yashwantpura

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹದ್ದೇ ಪ್ರಕರಣವೊಂದು ಯಶವಂತಪುರ ರೈಲ್ವೇ ನಿಲ್ದಾಣ ಬಳಿ ಗುರುವಾರ ಸಂಜೆ 6.30 ಗಂಟೆಗೆ ಸುಮಾರು ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಗೌತಮ್, ರಘು ಹಾಗೂ ಸಲ್ಲು ಹಲ್ಲೆ ಮಾಡಿದ ಆರೋಪಿಗಳು. ಈ ಮೂವರು ಸೇರಿ ತಮ್ಮ ಸ್ನೇಹಿತರಾದ ವಿನೋದ್ ಕುಮಾರ್ ಹಾಗೂ ಮಾರುತಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

CRIME 2

ಆಗಿದ್ದೇನು?:
ಹಲ್ಲೆ ಮಾಡಿದ ಹಾಗೂ ಹಲ್ಲೆಗೆ ಒಳಗಾದ ಐವರು ಸ್ನೇಹಿತರಾಗಿದ್ದು, ಒಟ್ಟಾಗಿ ಗುರುವಾರ ಪಾರ್ಟಿ ಮಾಡಿದ್ದಾರೆ. ಬಳಿಕ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಜಗಳವಾಡಿದ್ದಾರೆ. ಈ ವೇಳೆ ಗೌತಮ್, ರಘು ಹಾಗೂ ಸಲ್ಲು ಲಾಂಗ್, ಮಚ್ಚು ಹಿಡಿದು ವಿನೋದ್ ಕುಮಾರ್ ಮತ್ತು ಮಾರುತಿ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ಸ್ಥಳೀಯರು ನೋಡುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *