ಮದ್ಯಕ್ಕೆ ಹತ್ತು ರೂ. ನೀಡದ್ದಕ್ಕೆ ಸ್ನೇಹಿತನನ್ನೇ ಕೊಂದ್ರು

Public TV
1 Min Read
ALCOHOL

ಮುಂಬೈ: ಮದ್ಯಕ್ಕೆ ಹತ್ತು ರೂ. ನೀಡಲು ನಿರಾಕರಿಸಿದ 50 ವರ್ಷದ ವ್ಯಕ್ತಿಯನ್ನು ಆತನ ಇಬ್ಬರು ಸ್ನೇಹಿತರು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.

crime scene e1602054934159

ಭಗವತ್ ಸೀತಾರಾಮ್ ಫೇಸ್ (50) ಮೃತದುರ್ದೈವಿಯಾಗಿದ್ದು, ಆತನ ಇಬ್ಬರು ಸ್ನೇಹಿತರಾದ 40 ವರ್ಷದ ವಿನೋದ್ ಲಕ್ಷ್ಮಣ್ ವಾಂಖೆಡೆ ಮತ್ತು 35 ವರ್ಷದ ದಿಲೀಪ್ ತ್ರ್ಯಂಬಕ್ ಬೊಡ್ಡೆ ಮದ್ಯದಂಗಡಿಗೆ ಕುಡಿಯಲು ಹೋಗಿದ್ದಾರೆ. ಬಳಿಕ ಭಗವತ್ ಸೀತಾರಾಮ್‍ಗೆ ಹತ್ತು ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದ ಭಗವತ್ ಸೀತಾರಾಮ್ ಅಂಗಡಿಯಿಂದ ಹೊರಗೆ ಹೋಗುತ್ತಿದ್ದಂತೆಯೇ ಆತನ ತಲೆಗೆ ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಯೂಟ್ಯೂಬ್ ವೀಡಿಯೋ ನೋಡಿ ಮಗುವಿಗೆ ಜನ್ಮ ನೀಡಿದ ಹುಡುಗಿ – ಪ್ರಿಯಕರ ಅರೆಸ್ಟ್

MONEY medium

ಇದರಿಂದ ಗಂಭೀರವಾಗಿ ಗಾಯಗೊಂಡ ಭಗವತ್ ಸೀತಾರಾಮ್ ಪ್ರಜ್ಞೆತಪಿ ಕೆಳಗೆ ಬಿದ್ದು, ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮಾಹಿತಿ ದೊರೆತ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದು, ಒಂದು ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿದ್ದ ಹಣ ದೋಚಿ ಆಟೋ ಚಾಲಕನೊಂದಿಗೆ ಕೋಟ್ಯಧಿಪತಿ ಪತ್ನಿ ಎಸ್ಕೇಪ್

Share This Article
Leave a Comment

Leave a Reply

Your email address will not be published. Required fields are marked *