Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಡ್ನವಿಸ್‌ ರಿಂದ ರಾಜನಾಥ್ ಸಿಂಗ್ ವರೆಗೆ – ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ಪಾರಾದ ಪ್ರಮುಖ ರಾಜಕಾರಣಿಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫಡ್ನವಿಸ್‌ ರಿಂದ ರಾಜನಾಥ್ ಸಿಂಗ್ ವರೆಗೆ – ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ಪಾರಾದ ಪ್ರಮುಖ ರಾಜಕಾರಣಿಗಳು!

Latest

ಫಡ್ನವಿಸ್‌ ರಿಂದ ರಾಜನಾಥ್ ಸಿಂಗ್ ವರೆಗೆ – ವಿಮಾನ, ಹೆಲಿಕಾಪ್ಟರ್ ದುರಂತದಲ್ಲಿ ಪಾರಾದ ಪ್ರಮುಖ ರಾಜಕಾರಣಿಗಳು!

Public TV
Last updated: January 28, 2026 8:11 pm
Public TV
Share
4 Min Read
Devendra Fadnavis Rajnath Singh
SHARE

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರಿಂದು ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಒಂದು ಕಡೆ ಈ ವಿಮಾನ ಅಪಘಾತ ಸಂಜಯ್ ಗಾಂಧಿ (Sanjay Gandhi), ವಿಜಯ್ ರೂಪಾನಿ ಅವರಂತಹ ನಾಯಕರ ದುರಂತ ಸಾವುಗಳನ್ನ ನೆನಪಿಸಿದ್ರೆ, ಮತ್ತೊಂದು ಕಡೆ ವಿಮಾನ ಮತ್ತು ಹೆಲಿಕಾಪ್ಟರ್‌ ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಬದುಕುಳಿದ ರಾಜಕೀಯ ನಾಯಕರತ್ತ ಬೆಳಕು ಚೆಲ್ಲುತ್ತದೆ.

ಇಂತಹ ವಿಮಾನ ಮತ್ತು ಹೆಲಿಕಾಪ್ಟರ್‌ ದುರಂತಗಳಲ್ಲಿ ಪವಾಡ ಸದೃಶವಾಗಿ ಪಾರಾದ ಪ್ರಮುಖ ರಾಜಕೀಯ ನಾಯಕರು (Politicians) ಯಾರ‍್ಯಾರು ಎಂಬ ಬಗ್ಗೆ ವಿವರ ಇಲ್ಲಿದೆ.

Ajit Pawars Plane Crash

1977 ರಲ್ಲಿ ಮೊರಾರ್ಜಿ ದೇಸಾಯಿ
1977 ರ ನವೆಂಬರ್ 4 ರಂದು. ದೆಹಲಿಯ (Delhi) ಪಾಲಂ ನಿಲ್ದಾಣದಿಂದ ಮೊರಾರ್ಜಿ ದೇಸಾಯಿ ಅವರನ್ನ ಹೊತ್ತೊಯ್ಯುತ್ತಿದ್ದ ವಿಮಾನವು ಅಸ್ಸಾಂಗೆ (Assam) ಹೊರಟಿತ್ತು. ರಷ್ಯಾ ನಿರ್ಮಿತ ಟುಪೋಲೆವ್ ಟಿಯು-124 ವಿಮಾನವು ಇನ್ನೇನು ಲ್ಯಾಂಡಿಂಗ್‌ ಮಾಡಬೇಕು ಎನ್ನುವಷ್ಟರಲ್ಲಿ ಭತ್ತದ ಗದ್ದೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿತ್ತು. ಸಂಜೆ ವಿಮಾನ ರನ್‌ವೇಯಲ್ಲಿ ಇಳಿಯಲು ಸಿದ್ಧವಾಗುತ್ತಿದ್ದಂತೆ ಇದ್ದಕ್ಕಿದ್ದಂತೆ ಎತ್ತರಕ್ಕೆ ಹಾರಿತು. ವಿಮಾನವು ರನ್‌ವೇಯನ್ನು ದಾಟಿ ವಾಯುನೆಲೆಯ ದೂರದಲ್ಲಿದ್ದ ಗದ್ದೆಗೆ ಅಪ್ಪಳಿಸಿತ್ತು. ವಿಮಾನ ಅಪ್ಪಳಿಸಿದ ರಭಸಕ್ಕೆ ಕಾಕ್‌ಪಿಟ್ ವಿಮಾನದಿಂದ ಬೇರ್ಪಟ್ಟಿತು. ಇಬ್ಬರು ಪೈಲಟ್‌ಗಳು ಮತ್ತು ಮೂವರು ಸಿಬ್ಬಂದಿ ಸಾವನ್ನಪ್ಪಿದರು. ಪತನಗೊಂಡ ನಂತರ 81 ವರ್ಷದ ಮೊರಾರ್ಜಿ ದೇಸಾಯಿ ಅವರನ್ನ ಕೂಡಲೇ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.

former pm morarji desais miraculous escape from the 1977 jorhat air crash

2004 ರಲ್ಲಿ ಅಹ್ಮದ್ ಪಟೇಲ್, ಪೃಥ್ವಿರಾಜ್ ಚವಾಣ್ ಮತ್ತು ಕುಮಾರಿ ಸೆಲ್ಜಾ
2004 ರಲ್ಲಿ ಹಿರಿಯ ಕಾಂಗ್ರೆಸ್‌ ನಾಯಕರಾದ (Congress Leaders) ಅಹ್ಮದ್‌ ಪಟೇಲ್‌, ಪೃಥ್ವಿರಾಜ್ ಚವಾಣ್ ಮತ್ತು ಕುಮಾರಿ ಸೆಲ್ಜಾ ಅವರು ಸಹ ವಿಮಾನ ಅಪಘಾತದಲ್ಲಿ ಸಿಲುಕಿದ್ದರು. ಭೀಕರ ಅಪಘಾತದ ಹೊರತಾಗಿಯೂ ಮೂವರು ನಾಯಕರು ಅಚ್ಚರಿಯಾಗಿ ಬದುಕುಳಿದರು. ತಕ್ಷಣದ ವೈದ್ಯಕೀಯ ಚಿಕಿತ್ಸೆಯಿಂದ ಅವರನ್ನ ರಕ್ಷಣೆ ಮಾಡಲಾಗಿತ್ತು.

2005 ರಲ್ಲಿ ಅಮರಿಂದರ್ ಸಿಂಗ್, ಪ್ರತಾಪ್ ಸಿಂಗ್ ಬಜ್ವಾ
2005 ರಲ್ಲಿ, ಪಂಜಾಬ್ ನಾಯಕರಾದ ಅಮರಿಂದರ್ ಸಿಂಗ್ ಮತ್ತು ಪ್ರತಾಪ್ ಸಿಂಗ್ ಬಜ್ವಾ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗೊಂಡಿದ್ದ ಹೊರತಾಗಿಯೂ ತಕ್ಷಣದ ವೈದ್ಯಕೀಯ ಚಿಕಿತ್ಸೆಯಿಂದ ಬದುಕುಳಿದ್ದರು.

ಸುಖ್ವಿಂದರ್ ಸಿಂಗ್ ಬಾದಲ್ ಗ್ರೇಟ್‌ ಎಸ್ಕೇಪ್‌
ಪಂಜಾಬ್‌ ಮಾಜಿ ಸಿಎಂ ಸುಖ್ವಿಂದರ್‌ ಸಿಂಗ್‌ ಬಾದಲ್‌ ಅವರು ಅಧಿಕೃತ ಪ್ರಯಾಣದ ಸಮಯದಲ್ಲೇ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಲುಕಿದ್ದರು. ಪ್ರಯಾಣದ ಮಧ್ಯದಲ್ಲಿ ಇದ್ದಕ್ಕಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಎಚ್ಚೆತ್ತ ಪೈಲಟ್‌ ಸೇಫ್‌ ಲ್ಯಾಂಡಿಗ್‌ ಮಾಡಿದ್ದರಿಂದ ಬಾದಲ್‌ ಸಣ್ಣ ಗಾಯವೂ ಇಲ್ಲದೇ ಪಾರಾದರು.

Devendra Fadnavis 2

2008ರಲ್ಲಿ ರಾಜನಾಥ್ ಸಿಂಗ್, ಮುಖ್ತಾರ್ ಅಬ್ಬಾಸ್ ನಖ್ವಿ
2008 ರಲ್ಲಿ, ಇಂದಿನ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ (Rajnath Singh) ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ ಉತ್ತರ ಪ್ರದೇಶದಲ್ಲಿ ಭಯಾನಕ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಲುಕಿದ್ದರು. ತೆರೆದ ಮೈದಾನದಲ್ಲಿ ಲ್ಯಾಂಡಿಂಗ್‌ ಮಾಡುವ ವೇಳೆ, ಹೆಲಿಕಾಪ್ಟರ್ ಒಣ ಹುಲ್ಲಿನ ರಾಶಿ ಬಳಿ ಪತನಗೊಂಡಿತ್ತು. ಇದೇ ವೇಳೆ ಹುಲ್ಲಿನ ರಾಶಿಗೂ ಬೆಂಕಿ ಹೊತ್ತಿಕೊಂಡಿತ್ತು. ಎಲ್ಲವೂ ಮುಗಿದೇ ಹೋಯಿತು ಅಂತ ಜನ ಭಾವಿಸಿದ್ದರು. ಆದ್ರೆ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಇಬ್ಬರು ನಾಯಕರೂ ಸೇಫ್‌ ಆದರು. ನಂತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ತುರ್ತು ಭೂಸ್ಪರ್ಶದಿಂದ ಅಶೋಕ್‌ ಗೆಹ್ಲೋಟ್‌ ಬಚಾವ್‌
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 2011 ರಲ್ಲಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ರಾಜಸ್ಥಾನದಲ್ಲಿ ಸಮೀಪದ ನಗರಕ್ಕೆ ತೆರಳುತ್ತಿದ್ದ ವೇಳೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಕೂಡಲೇ ಹೆಲಿಕಾಪ್ಟರ್‌ ಅಲುಗಾಡಲು ಶುರು ಮಾಡಿತು. ರೋಹ್ಟರ್‌ ಬ್ಲೇಡ್‌ನಲ್ಲಿ ಉಂಟಾದ ದೋಷದಿಂದ ಹೆಲಿಕಾಪ್ಟರ್‌ ಪತನಗೊಳ್ಳುವ ಸಾಧ್ಯತೆ ದಟ್ಟವಾಗಿತ್ತು. ಆದ್ರೆ ಸಮಯಪ್ರಜ್ಞೆ ಮೆರೆದ ಪೈಲಟ್‌ ಕೂಡಲೇ ತುರ್ತು ಭೂಸ್ಪರ್ಶ ಮಾಡಿ ಅನಾಹುತ ತಪ್ಪಿಸಿದ್ರು. ಈ ಘಟನೆ ಬಳಿಕ ಹೆಲಿಕಾಪ್ಟರ್ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.

2017 ರಲ್ಲಿ ದೇವೇಂದ್ರ ಫಡ್ನವಿಸ್‌
ಮಹಾರಾಷ್ಟ್ರದ ಹಾಲಿ ಸಿಎಂ ದೇವೇಂದ್ರ ಫಡ್ನವೀಸ್ (Devendra Fadnavis) ಒಂದೇ ವರ್ಷದಲ್ಲಿ ಅನೇಕ ವಾಯುಯಾನ ಘಟನೆಗಳಿಂದ ಬದುಕುಳಿದಿದ್ದಾರೆ. ಅದು ಆಕಸ್ಮಿಕವೋ ಅದೃಷ್ಟವೋ ಅನ್ನೋದು ಇಂದಿಗೂ ಅನೇಕರ ಪ್ರಶ್ನೆ.

ಹೌದು. 2017 ರಲ್ಲಿ ಫಡ್ನವಿಸ್‌ ಅನೇಕ ಬಾರಿ ಹೆಲಿಕಾಪ್ಟರ್ ದುರಂತಗಳನ್ನ ಎದುರಿಸಿದ್ದರು. ಈ ಪೈಕಿ ಲಾತೂರ್‌ ದುರಂತ ಗಂಭೀರವಾದದ್ದು. ಲಾತೂರ್ ಪ್ರದೇಶದಲ್ಲಿ ಟೇಕಾಫ್ ಸಮಯದಲ್ಲಿ ಫಡ್ನವಿಸ್‌ ಅವರಿದ್ದ ವಿಮಾನ ಅಪಘಾತಕ್ಕೀಡಾಗಿತ್ತು. ಓವರ್‌ಹೆಡ್‌ ವಿದ್ಯುತ್ ತಂತಿಗಳಿಗೆ ಸಿಲುಕಿಕೊಂಡು ಭಾರೀ ಎತ್ತದರಿಂದ ನೆಲಕ್ಕೆ ಅಪ್ಪಳಿಸಿತ್ತು. ಆದಾಗ್ಯೂ ಫಡ್ನವಿಸ್‌ ಹಾಗೂ ಜೊತೆಗಿದ್ದವರು ಸಣ್ಣಪುಟ್ಟ ಗಾಯಗಳಿಂದ ಬದುಕುಳಿದರು. ಆ ನಂತರ ಎಂಜಿನ್‌ನಲ್ಲಿ ದೋಷ, ತೂಕದಲ್ಲಿ ಅಸಮತೋಲನ, ಹೆಲಿಕಾಪ್ಟರ್ ರೋಟರ್‌ ಮತ್ತು ಕೇಬಲ್‌ಗಳಲ್ಲಿ ದೋಷ ಕಾಣಿಸಿಕೊಂಡ ಬಳಿಕ ತುರ್ತು ಲ್ಯಾಂಡಿಂಗ್‌ ಹೀಗೆ ಅನೇಕ ಸನ್ನಿವೇಶಗಳಲ್ಲಿ ಪಾರಾಗಿದ್ದರು. ಪ್ರತಿಯೊಂದು ಪ್ರಕರಣದಲ್ಲೂ ಪೈಲಟ್‌ಗಳ ತ್ವರಿತ ನಿರ್ಧಾರ ಜೀವಹಾನಿ ತಡೆದಿದೆ ಅನ್ನೋದು ಗಮನಾರ್ಹ.

Ajit Pawar Dies Plane plane was headed towards the runway but it fell down a 100 feet before it Eyewitness

ಈ ಘಟನೆಗಳ ನಂತರ, ಮಹಾರಾಷ್ಟ್ರದಲ್ಲಿ ವಿವಿಐಪಿ ವಿಮಾನ ಪ್ರಯಾಣಕ್ಕಾಗಿ ಕಠಿಣ ಸುರಕ್ಷತಾ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ನಂತರ ಪರಿಚಯಿಸಲಾಯಿತು. ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳ ಹೊರತಾಗಿಯೂ ಇಂದಿನ ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣಕ್ಕೀಡಾಗಿದ್ದಾರೆ.

TAGGED:Ajit Pawardevendra fadnavisHelicopter Mishapsplane crashPoliticiansrajnath singhದೇವೇಂದ್ರ ಫಡ್ನವಿಸ್ಮುಂಬೈರಾಜನಾಥ್ ಸಿಂಗ್ವಿಮಾನ ಪತನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
19 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
26 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
47 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
53 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
55 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?