– ಬೆಂಗಳೂರು ಟ್ರಾಫಿಕ್ ಸಮಸ್ಯೆ ಕುರಿತು ಸುದೀರ್ಘ ಚರ್ಚೆ
ಬೆಂಗಳೂರು: ಇಲ್ಲಿನ ಸಂಚಾರಿ ಪೊಲೀಸ್ (Bengaluru Traffic Police) ಇಲಾಖೆಯ ಕೇಂದ್ರ ಕಚೇರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಭೇಟಿ ನೀಡಿ ಸಂಚಾರಿ ವಿಭಾಗ ಮುಖ್ಯಸ್ಥ ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಟ್ರಾಫಿಕ್ ಸಮಸ್ಯೆಯಲ್ಲಿ (Bengaluru Traffic Violation) ಕುಖ್ಯಾತಿ ಪಡೆದುಕೊಂಡಿದೆ. ನಮ್ಮವರು ಸಾಕಷ್ಟು ಉತ್ತಮ ಪಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್ಡಿಕೆ ತಿರುಗೇಟು
- Advertisement3
- Advertisement
ಅತಿ ಹೆಚ್ಚು ವಾಹನಗಳು ಬೆಂಗಳೂರು ನಗರದಲ್ಲಿವೆ. ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ. ನಗರದಲ್ಲಿ 1.16 ಲಕ್ಷ ವಾಹನಗಳಿವೆ, 70% ಭಾಗ ದ್ವಿಚಕ್ರ ವಾಹನಗಳಿವೆ. ಆ ಕಾಲಕ್ಕೆ ರಸ್ತೆ ಎಷ್ಟು ಬೇಕು ಅಷ್ಟು ಮಾಡಿದ್ದರು. ಇರುವಂತ ಸೌಲಭ್ಯ ಬಳಸಿಕೊಂಡು ಮ್ಯಾನೇಜ್ ಮಾಡ್ತಿದ್ದಾರೆ. ಬಿಬಿಎಂಪಿಯವರು, ಬಿಎಂಟಿಸಿಯವರು ಇದಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.
ಟ್ರಾಫಿಕ್ ಸಮಸ್ಯೆಗಳನ್ನ ಪರಿಹರಿಸುವ ಬಗ್ಗೆ ಚರ್ಚೆ ಮಾಡಿದ್ದೀವಿ. ಅಧಿಕಾರಿಗಳು ಕೆಲವು ಸಮಸ್ಯೆಗಳನ್ನ ಗಮನಕ್ಕೆ ತಂದಿದ್ದಾರೆ. ಶೀಘ್ರದಲ್ಲೇ ಬಿಬಿಎಂಪಿ, ಬಿಎಂಟಿಸಿ ಜೊತೆ ಒಟ್ಟಿದೇ ಸಭೆ ಮಾಡಬೇಕು ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್ – ಬಾಂಗ್ಲಾ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ; ಫೈನಲ್ ಪ್ರವೇಶಿಸಿದ ಭಾರತ!